Nipah: ಕೋಯಿಕ್ಕೋಡ್: ಕೇಂದ್ರ ತಂಡದ ಪರಿಶೀಲನೆ, ಸಭೆ
Team Udayavani, Sep 14, 2023, 10:58 PM IST
ತಿರುವನಂತಪುರ/ಕೋಯಿಕ್ಕೋಡ್: ನಿಫಾ ಸೋಂಕು ಕಂಡುಬಂದಿರುವ ಕೇರಳದ ಕೋಯಿಕ್ಕೋಡ್ ಜಿಲ್ಲೆಗೆ ಆರು ಸದಸ್ಯರ ಕೇಂದ್ರ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಸೋಂಕು ಕಂಡು ಬಂದಿರುವ ಸ್ಥಳಗಳಿಗೆ ಕೂಡ ತಂಡ ಭೇಟಿ ನೀಡಿದೆ. ಜತೆಗೆ ಕೇರಳ ಆರೋಗ್ಯ ಇಲಾಖೆಯ ಜತೆ ಪರಾಮರ್ಶೆ ನಡೆಸಿದೆ.
ಇನ್ನೊಂದೆಡೆ ತಿರುವನಂತಪುರದಲ್ಲಿ ಸಭೆ ನಡೆಸಿದ ಆರೋಗ್ಯ ಸಚಿವೆ ವೀಣಾ ಜಾರ್ಜ್, ಸೋಂಕು ನಿವಾರಣೆಗೆ ಬೇಕಾಗಿರುವ ಮೊನೊಕ್ಲೋನಲ್ ಪ್ರತಿಕಾಯ ರಾಜ್ಯಕ್ಕೆ ತಲುಪಿದೆ. ಆದರೆ ಇದು ಎಷ್ಟರ ಮಟ್ಟಿಗೆ ಪ್ರಯೋಜನವಾಗಲಿದೆ ಎಂಬುದು ಕ್ಲಿನಿಕಲ್ ಟ್ರಯಲ್ನಲ್ಲಿ ಗೊತ್ತಾಗಿಲ್ಲ. ಸದ್ಯಕ್ಕೆ ಈ ಔಷಧ ನೀಡದೆ ದಾರಿ ಇಲ್ಲ ಎಂದು ಹೇಳಿದ್ದಾರೆ. ಸೋಂಕು ಪ್ರಕರಣ 5ಕ್ಕೆ ಏರಿಕೆಯಾಗಿದ್ದರೂ, ಅವರೊಂದಿಗೆ ಸಂಪರ್ಕದಲ್ಲಿ ಇರುವ 76 ಮಂದಿಯ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಹೊಸ ಲ್ಯಾಬ್: ಪುಣೆಯಲ್ಲಿರುವ ರಾಷ್ಟ್ರೀಯ ವೈರಾಣು ಸಂಸ್ಥೆ (ಎನ್ಐವಿ) ಕಲ್ಲಿಕೋಟೆಗೆ ಸಂಚಾರಿ ಪ್ರಯೋಗ ಶಾಲೆಯನ್ನು ಕಳುಹಿಸಿಕೊಟ್ಟಿದ್ದು, ಇನ್ನು ಕ್ಷಿಪ್ರಗತಿಯಲ್ಲಿ ವೈರಸ್ ದೃಢಪಡಿಸಲು ನೆರವಾಗಿದೆ. ಬಿಎಸ್ಎಲ್-3 ದರ್ಜೆ ಹೊಂದಿರುವ ದಕ್ಷಿಣ ಏಷ್ಯಾದ ಮೊದಲ ಸಂಚಾರಿ ಲ್ಯಾಬ್ ಎಂಬ ಹೆಗ್ಗಳಿಕೆಗೆ ಕೂಡ ಅದು ಪಾತ್ರವಾಗಿದೆ. ಇದರಿಂದಾಗಿ ಸ್ಯಾಂಪಲ್ಗಳನ್ನು ಪುಣೆಗೆ ಕಳುಹಿಸದೆ, ಕಲ್ಲಿಕೋಟೆಯಲ್ಲಿಯೇ ಪರೀಕ್ಷೆಗೆ ಒಳಪಡಿಸಿ ಸೋಂಕು ದೃಢಪಡಿಸಲು ಸಾಧ್ಯವಾಗಲಿದೆ.
ಅಪಾಯಕಾರಿಯಲ್ಲ: ಪರಿಸ್ಥಿತಿ ಬಗ್ಗೆ ಮಾತನಾಡಿದ ಆರೋಗ್ಯ ಖಾತೆ ಮಾಜಿ ಸಚಿವೆ ಕೆ.ಕೆ.ಶೈಲಜಾ 2018ಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಪರಿಸ್ಥಿತಿ ಅಪಾಯಕಾರಿಯಾಗಿಲ್ಲ ಆ ಸಂದರ್ಭದಲ್ಲಿ ಅದು ಹೊಸತಾಗಿತ್ತು ಎಂದರು. ಕಲ್ಲಿಕೋಟೆ ಜಿಲ್ಲೆಯಲ್ಲಿ ಶನಿವಾರದವರೆಗೆ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಂಟೈನ್ಮೆಂಟ್ ವಲಯಗಳಲ್ಲಿ ಬೀಚ್, ಪಾರ್ಕ್ಗಳನ್ನು ಬಂದ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು