Kolar: ಮತ್ತೂಂದು ಮರ್ಯಾದಾ ಹತ್ಯೆ
Team Udayavani, Aug 27, 2023, 11:54 PM IST
ಕೋಲಾರ: ಅನ್ಯಜಾತಿಯ ಅಪ್ರಾಪ್ತ ವಯಸ್ಕ ಯುವಕನನ್ನು ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲಿ ತಂದೆಯೇ ಮಗಳನ್ನು ಹತ್ಯೆಗೈದಿರುವ ಘಟನೆ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಜರುಗಿದ್ದು, ಮುಚ್ಚಿ ಹಾಕಿದ್ದ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ.
ತಾಲೂಕಿನ ತೊಟ್ಲಿ ಗ್ರಾಮದ ರಮ್ಯಾ (19) ತಂದೆಯಿಂದಲೇ ಹತ್ಯೆಗೀಡಾದ ಯುವತಿ. ಹತ್ಯೆ ಸಂಬಂಧ ತಂದೆ ವೆಂಕಟೇಶ್ಗೌಡ, ಆತನ ಸಹೋದರರಾದ ಮೋಹನ್ ಗೌಡ, ವೆಂಕಟೇಶ್ ಗೌಡ ಅವರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಿಯುಸಿ ಮುಗಿಸಿದ್ದ ರಮ್ಯಾ ಕೋಲಾರ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಈ ನಡುವೆ ಪಕ್ಕದೂರಿನಲ್ಲಿ ಅನ್ಯಜಾತಿಯ ಹುಡುಗನೊಂದಿಗೆ ಪ್ರೀತಿ ಶುರುವಾಗಿತ್ತು. ಈ ವಿಚಾರ ಮನೆಯವರಿಗೆ ತಿಳಿದು, ತಂದೆ ಮತ್ತು ಮಗಳ ನಡುವೆ ಜಗಳ ನಡೆಯುತ್ತಿತ್ತು. ಆಗಸ್ಟ್ 24ರ ರಾತ್ರಿ ವೆಂಕಟೇಶ್ ಗೌಡ ಕೆಲಸ ಮುಗಿಸಿ ಮನೆಗೆ ಬಂದು ಮಲಗಿದ್ದ ವೇಳೆ, ಮಧ್ಯರಾತ್ರಿಯಲ್ಲಿ ರಮ್ಯಾ ಪೋನ್ನಲ್ಲಿ ಮಾತನಾಡುತ್ತಿದ್ದು, ಈ ವೇಳೆ ತಂದೆ-ಮಗಳ ನಡುವೆ ಜಗಳ ನಡೆದಿದೆ. ವೆಂಕಟೇಶ್ಗೌಡ ರಮ್ಯಾಳ ಕಪಾಳಕ್ಕೆ ಬಲವಾಗಿ ಹೊಡೆದಿದ್ದು, ಕೆಳಗೆ ಬಿದ್ದ ಮಗಳ ಮೇಲೆ ಕಾಲಿನಿಂದ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದ. ಕಳೆದ 2 ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿರುವ 2ನೇ ಮರ್ಯಾದೆ ಹತ್ಯೆ ಪ್ರಕರಣ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್