Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

7 ಬಾರಿ ಕೆ.ಎಚ್‌.ಮುನಿಯಪ್ಪ ಗೆದ್ದ ಕ್ಷೇತ್ರ; ಕಾಂಗ್ರೆಸ್‌ ಕೋಟೆಗೆ ಕಳೆದ ಬಾರಿ ಬಿಜೆಪಿ ಲಗ್ಗೆ

Team Udayavani, Mar 13, 2024, 7:35 AM IST

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

ಕೋಲಾರ: ರಾಜ್ಯದ ಮೂಡಣ ದಿಕ್ಕಿನ ಮೊದಲ ಲೋಕಸಭಾ ಕ್ಷೇತ್ರ ಬಂಗಾರದ ಭೂಮಿ ಕೋಲಾರ. ಬೆಟ್ಟ ಗುಡ್ಡಗಳನ್ನೊಳಗೊಂಡ ಶಾಶ್ವತ ಬರಗಾಲ ಪೀಡಿತ ಕ್ಷೇತ್ರ. ಕೃಷಿ, ತೋಟಗಾರಿಕೆ ರೇಷ್ಮೆಗೆ ಹೆಸರುವಾಸಿ. ಹಾಲು ಟೊಮೆಟೋ ಉತ್ಪಾದನೆ ಖ್ಯಾತಿ, ಮಾವಿನ ರಾಜಧಾನಿ. ಇತ್ತೀಚೆಗೆ ಮಧ್ಯಮ ಹಾಗೂ ಬೃಹತ್‌ ಕೈಗಾರಿಕೆಗಳದ್ದೇ ಹವಾ. ಕೋಲಾರ ಕ್ಷೇತ್ರದಲ್ಲಿ ಯಾವುದೇ ಅಲೆಗಳಿಗಿಂತಲೂ ಹೆಚ್ಚು ಸ್ಥಳೀಯ ರಾಜಕೀಯದ ಮೇಲೆಯೇ ಚುನಾವಣೆ ನಡೆಯುತ್ತದೆ.

ಬಿಜೆಪಿಗೆ ಮೊದಲ ಜಯ
ದಲಿತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಮೀಸಲು ಕ್ಷೇತ್ರವಾಗಿದೆ. ಇಲ್ಲಿ ಕಾಂಗ್ರೆಸ್‌ ಪಕ್ಷದ್ದೇ ಗೆಲುವಿನ ಪ್ರಾಬಲ್ಯ. ಇದುವರೆಗೂ ನಡೆದಿರುವ ಚುನಾವಣೆಗಳಲ್ಲಿ ಒಮ್ಮೆ ಜನತಾ ಪಕ್ಷ, ಒಮ್ಮೆ ಬಿಜೆಪಿ ಗೆದ್ದಿದೆ. ಉಳಿದಂತೆ ಕಾಂಗ್ರೆಸ್‌ನದ್ದೇ ಪ್ರಾಬಲ್ಯ. 1991ರಿಂದ ಈವರೆಗೆ ನಡೆದಿರುವ 8 ಚುನಾವಣೆಗಳಲ್ಲಿ ಕಾಂಗ್ರೆಸ್‌ನಿಂದ ಕೆ.ಎಚ್‌.ಮುನಿಯಪ್ಪ 7 ಬಾರಿ ಗೆಲುವಿನ ಪತಾಕೆ ಹಾರಿಸಿದ್ದಾರೆ. 2019ರ ಚುನಾವಣೆಯಲ್ಲಿ ಎಸ್‌.ಮುನಿಸ್ವಾಮಿ ಬಿಜೆಪಿಯಿಂದ ಗೆದ್ದು ಮೊದಲ ಬಾರಿಗೆ ಕ್ಷೇತ್ರದಲ್ಲಿ ಕಮಲವನ್ನು ಅರಳಿಸಿದ್ದರು.

ಜಾತಿ, ಹಣ ಬಲ
ಕುಡಿಯುವ ನೀರು, ಕೃಷಿ, ರೇಷ್ಮೆ, ಹೈನು ಗಾರಿಕೆ, ಕೃಷಿ ಮಾರುಕಟ್ಟೆ ಮುಂತಾದ ಸಮಸ್ಯೆ ಗಳು ಕ್ಷೇತ್ರವನ್ನು ಕಾಡುತ್ತಿವೆ. ಇಲ್ಲಿ ಜಾತಿ, ಹಣ ಬಲವು ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡುತ್ತಿದೆ ಎಂಬ ಮಾತಿದೆ. ಕಳೆದ ಬಾರಿ ಕಾಂಗ್ರೆಸ್‌ನೊಂದಿಗೆ ಜೆಡಿಎಸ್‌ ಮೈತ್ರಿ ಸಾಧಿಸಿತ್ತು. ಈ ಬಾರಿ ಬಿಜೆಪಿ ಜತೆಗೆ ಜೆಡಿಎಸ್‌ ಮೈತ್ರಿ ಸಾಧಿಸಿದೆ. ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ಕ್ಷೇತ್ರದ ಬಲಾಬಲ
ಕೋಲಾರ ಲೋಕಸಭಾ ಕ್ಷೇತ್ರವು ಕೋಲಾರ ಜಿಲ್ಲೆಯ 6 ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳು ಸಹಿತ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಿದೆ. ಇವುಗಳ ಪೈಕಿ ಕೋಲಾರ, ಬಂಗಾರಪೇಟೆ, ಕೆಜಿಎಫ್‌, ಮಾಲೂರು ಮತ್ತು ಚಿಂತಾಮಣಿಯಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಮುಳಬಾಗಿಲು, ಶ್ರೀನಿವಾಸಪುರ ಹಾಗೂ ಶಿಡ್ಲಘಟ್ಟದಲ್ಲಿ ಜೆಡಿಎಸ್‌ ಗೆದ್ದಿದೆ. ಬಿಜೆಪಿಯದ್ದು ಶೂನ್ಯ ಸಂಪಾದನೆ.

ಕ್ಷೇತ್ರವನ್ನು ಪ್ರತಿನಿಧಿಸಿದ್ದವರು
8 ಮಂದಿ ಮಾತ್ರ!
ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಈವರೆಗೆ 17 ಚುನಾವಣೆಗಳು ನಡೆದಿದ್ದರೂ ಆರಂಭದ ಎರಡು ಚುನಾವಣೆಗಳು ದ್ವಿಸದಸ್ಯವಾಗಿದ್ದವು. ಈವರೆಗೆ ಕ್ಷೇತ್ರವನ್ನು ಸಂಸತ್ತಿನಲ್ಲಿ ಪ್ರತಿನಿಧಿಸಿದವರು ಕೇವಲ 8 ಮಂದಿ ಮಾತ್ರ. ದೊಡ್ಡತಿಮ್ಮಯ್ಯ ಮೂರು ಬಾರಿ, ಇವರೊಂದಿಗೆ ದ್ವಿಸದಸ್ಯ ಕ್ಷೇತ್ರಗಳನ್ನು ಹಂಚಿಕೊಂಡ ಎಂ.ವಿ.ಕೃಷ್ಣಪ್ಪ, ಕೆ.ಚಂಗಲರಾಯರೆಡ್ಡಿ, ಬಳಿಕ ನಾಲ್ಕು ಬಾರಿ ಗೆದ್ದ ಜಿ.ವೈ.ಕೃಷ್ಣನ್‌, ತಲಾ ಒಂದು ಬಾರಿ ಗೆದ್ದ ಡಾ| ಜಿ. ವೆಂಕಟೇಶ್‌, ವೈ.ರಾಮಕೃಷ್ಣ ಬಳಿಕ ಕೆ.ಎಚ್‌.ಮುನಿಯಪ್ಪ ಸತತ ಏಳು ಗೆಲುವುಗಳನ್ನು ದಾಖಲಿಸಿದ್ದರು. ಪ್ರಸ್ತುತ ಎಸ್‌.ಮುನಿಸ್ವಾಮಿ ಸಂಸದರಾಗಿದ್ದಾರೆ.

ಜಾತಿ ಲೆಕ್ಕಾಚಾರ
ಮೀಸಲು ಕ್ಷೇತ್ರವಾಗಿರುವುದರಿಂದಲೇ ದಲಿತ ಮತಗಳದ್ದೇ ಮೇಲುಗೈ. ದಲಿತರಲ್ಲಿ ಬಲಗೈ, ಎಡಗೈ, ಬೋವಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳಾಗಿವೆ. ಇತ್ತೀಚಿನ ವರ್ಷಗಳಲ್ಲಿ ದಲಿತ ಬಲಗೈ ಸಮುದಾಯದಲ್ಲೇ ಚಿಕ್ಕತಾಳಿ ಮತ್ತು ದೊಡ್ಡತಾಳಿ ವಿಭಜನೆಯಾಗಿವೆ. ಈವರೆಗೆ ಗೆದ್ದವರ ಪೈಕಿ ಬಿಜೆಪಿಯ ಎಸ್‌.ಮುನಿಸ್ವಾಮಿ ಮಾತ್ರ ದಲಿತ ಬಲಗೈ ಸಮುದಾಯಕ್ಕೆ ಸೇರಿದವರು. ಇವರು ಬಲಗೈ ದೊಡ್ಡತಾಳಿ ಸಮುದಾಯದವರು. ಈಗ ದಲಿತ ಬಲಗೈ ಚಿಕ್ಕತಾಳಿಗೂ ಯಾವುದಾದರೂ ಪಕ್ಷದಲ್ಲಿ ಅವಕಾಶ ನೀಡಬೇಕೆಂಬ ಬೇಡಿಕೆ ಎದ್ದಿದೆ. ಅಲ್ಪಸಂಖ್ಯಾಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ದಲಿತ ಅಲ್ಪಸಂಖ್ಯಾಕ ಮತಗಳು ಒಗ್ಗೂಡಿದರೆ ಗೆಲುವು ಸುಲಭ. ಆದರೆ ಒಳಪಂಗಡಗಳ ಕಾರಣ ದಲಿತ ಮತಗಳು ಒಗ್ಗೂಡುತ್ತಿಲ್ಲ. ಉಳಿದಂತೆ ಒಕ್ಕಲಿಗ, ಕುರುಬ, ಇತರ ಹಿಂದುಳಿದ ವರ್ಗಗಳ ಮತದಾರರಿದ್ದಾರೆ.

– ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.