ಅರವತ್ತರ ಅರಳು: ಔದಾರ್ಯ ಮೆರೆದ ‘ಯಕ್ಷವಿಭೂಷಣ’ ಕೊಂಡದಕುಳಿ


Team Udayavani, Dec 20, 2021, 4:01 PM IST

1-k-1

ಹೊನ್ನಾವರ: ಬಡಗುತಿಟ್ಟು ಯಕ್ಷಗಾನದ ರಂಗದ ಶ್ರೇಷ್ಠ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆಯವರ ಅರವತ್ತರ ಅಭಿನಂದನಾ ಕಾರ್ಯಕ್ರಮ ಸದ್ಗುರು ಗೆಳೆಯರ ಬಳಗ,ಹೊನ್ನಾವರ ಇವರ ಆಯೋಜನೆಯಲ್ಲಿ ಕೊಂಡದಕುಳಿ ಸಮೀಪದ ಕೊಡಾಣಿಯಲ್ಲಿ ಗಣ್ಯಾತೀಗಣ್ಯರ ಉಪಸ್ಥಿತಿಯಲ್ಲಿ ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸಮಾರಂಭವನ್ನು ಉದ್ಘಾಟಿಸಿದರು.ಭಟ್ಕಳದ ಶಾಸಕ ಸುನಿಲ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸೆಲ್ಕೋ ಸಿ.ಇ.ಒ ಮೋಹನ ಭಾಸ್ಕರ ಹೆಗಡೆ, ಯಕ್ಷಗಾನ ವಿದ್ವಾಂಸ ಡಾ. ಜಿ. ಎಲ್. ಹೆಗಡೆ ಸೇರಿದಂತೆ ಗಣ್ಯರು ಅಭ್ಯಾಗತರಾಗಿ ಭಾಗವಹಿಸಿದ್ದರು. ಯಕ್ಷಗಾನ ಕಲಾವಿದ ತೋಟಿಮನೆ ಗಣಪತಿ ಹೆಗಡೆ ಅಭಿನಂದನಾ ಭಾಷಣ ಮಾಡಿದರು. ಅತ್ಯಂತ ಆತ್ಮೀಯವಾಗಿ, ಅರ್ಥಪೂರ್ಣವಾಗಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಕೊಂಡದಕುಳಿಯವರಿಗೆ ‘ಯಕ್ಷವಿಭೂಷಣ’ ಬಿರುದು ನೀಡಿ ಗೌರವಿಸಲಾಯಿತು.

ಔದಾರ್ಯ ಮೆರೆದ ಕೊಂಡದಕುಳಿ

ಅಭಿಮಾನಿಗಳ ಸಮ್ಮಾನಕ್ಕೆ ಉತ್ತರವಾಗಿ ಕೊಂಡದಕುಳಿಯವರು, “ಕಲಾವಿದ ಒಬ್ಬ ತಪಸ್ವಿ, ಪ್ರೇಕ್ಷಕರಿಗೆ ಏನನ್ನು ಕೊಡಬೇಕೆಂಬುದು ಅವನಿಗೆ ಗೊತ್ತಿರಬೇಕು” ಎಂದು ಮಾರ್ಮಿಕವಾಗಿ ಹೇಳಿದರು. ಊರ ಅಭಿಮಾನಿಗಳು ಅರವತ್ತರ ನೆನಪಿನಲ್ಲಿ ತನಗೆ ನಿಧಿ ಸಮರ್ಪಿಸಲು ಬಂದಾಗ ಇದು ನನಗಲ್ಲ ಯಕ್ಷಗಾನಕ್ಕೆ, ಕಲಾವಿದರಿಗೆ, ಕೆಲಸ ಮಾಡುವ ಸಂಘಟನೆಗೆ ಹಾಗೂ ಅನಾಥರಾಗಿ ವಿದ್ಯೆಯಿಂದ ವಂಚಿತರಾಗುವ ವಿದ್ಯಾರ್ಥಿಗಳಿಗೆ ಕೊಡಬೇಕೆಂಬ ಸೂಚನೆಯೊಂದಿಗೆ ಅರವತ್ತರ ಆಚರಣೆ ಉಳಿದವರಿಗೆ ಮಾದರಿಯಾಗುವಂತೆ ಮಾಡಿ ತೋರಿಸಿದರು.

ಇಬ್ಬರು ಅನಾಥ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ ಅರವತ್ತು ಸಾವಿರ ರೂಪಾಯಿ ಮತ್ತು ಯಕ್ಷಗಾನ ಕಲೆ-ಕಲಾವಿದರಿಗೆ ಕೆಲಸ ಮಾಡುತ್ತಿರುವ ಯಕ್ಷಗಾನ ಕಲಾರಂಗ ಉಡುಪಿ ಮತ್ತು ಹಂಗಾರಕಟ್ಟೆ ಯಕ್ಷಗಾನ ಕೇಂದ್ರಕ್ಕೆ ತಲಾ ರೂಪಾಯಿ ಐವತ್ತು ಸಾವಿರ ಹಮ್ಮಿಣಿ ಸಮರ್ಪಿಸಿ ‘ಅರವತ್ತರ ಅರಳು’ ಸಮಾರಂಭವನ್ನು ಅರ್ಥಪೂರ್ಣಗೊಳಿಸಿದರು.

ಯಕ್ಷಗಾನ ಕಲಾರಂಗ ಕಲಾವಿದರ ಕ್ಷೇಮಚಿಂತನೆಯ ಕುರಿತು ಮಾಡುವ ಕೆಲಸವನ್ನು, ಹಂಗಾರಕಟ್ಟೆ ಯಕ್ಷಗಾನ ಕೇಂದ್ರ ಯಕ್ಷಗಾನ ಕಲಿಕೆಗೆ ಮಾಡುತ್ತಿರುವ ಕಾರ್ಯವನ್ನು ಶ್ಲಾಘಿಸಿದರು. ಕೊಂಡದಕುಳಿಯವರು ತಮ್ಮ ಐವತ್ತರ ಸಂಭ್ರಮದಲ್ಲಿ ಯಕ್ಷಗಾನ ಕಲಾರಂಗಕ್ಕೆ ರೂಪಾಯಿ ಐವತ್ತು ಸಾವಿರ ನೀಡಿದ್ದನ್ನು ಮುರಲಿ ಕಡೆಕಾರ್ ಸ್ಮರಿಸಿಕೊಂಡರು.

ಕೊಂಡದಕುಳಿಯವರು ಇದುವರೆಗೆ ರೂಪಾಯಿ ಇಪ್ಪತ್ತೈದು ಸಾವಿರ ನಗದು ಪುರಸ್ಕಾರದೊಂದಿಗೆ ತಮ್ಮ ಅಜ್ಜ ಕೊಂಡದಕುಳಿ ರಾಮ ಹೆಗಡೆ ನೆನಪಿನಲ್ಲಿ ಮೂವತ್ತೊಂದು ಕಲಾವಿದರಿಗೆ ಪ್ರಶಸ್ತಿ ನೀಡಿರುವುದು ಉಲ್ಲೇಖನೀಯವಾದದ್ದು.

ಕಾರ್ಯಕ್ರಮದ ಸಂಘಟಕ ಮಂಜುನಾಥ ಭಟ್ ವಂದನಾರ್ಪಣೆ ಸಲ್ಲಿಸಿದರು. ಕೊನೆಯಲ್ಲಿ ನಡೆದ ಯಕ್ಷಗಾನ ಪ್ರಸಂಗ ಚಂದ್ರಹಾಸ ಚರಿತ್ರೆಯಲ್ಲಿ ದುಷ್ಟಬುದ್ಧಿಯ ಪಾತ್ರ ನಿರ್ವಹಿಸಿ ಅಪಾರ ಸಂಖ್ಯೆಯಲ್ಲಿ ಸೇರಿದ ಕಲಾಭಿಮಾನಿಗಳಿಗೆ ಸಂತಸ ನೀಡಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.