ಕೈಚೆಲ್ಲಿದ ಖಾಸಗಿ ಸಂಸ್ಥೆ ; ವೈದ್ಯರ ನೇಮಕಾತಿಗೆ ಸರಕಾರಿ ಆದೇಶ!
ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ಮಹಿಳಾ-ಮಕ್ಕಳ ಆಸ್ಪತ್ರೆಯ ಉಸ್ತುವಾರಿ
Team Udayavani, May 11, 2020, 5:55 AM IST
ಉಡುಪಿ: ಬಿ.ಆರ್.ಎಸ್. ಹೆಲ್ತ್ ರಿಸರ್ಚ್ ಇನ್ಸ್ಟಿಟ್ಯೂಟ್ ಪ್ರೈವೇಟ್ ಲಿ. ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ನಡೆಸಲು ಅಸಾಧ್ಯವಾಗುತ್ತಿರುವ ಹಿನ್ನೆಲೆಯಿಂದ ಕ್ರಮ ತೆಗೆದುಕೊಳ್ಳುವಂತೆ ಮನವಿ ಸಲ್ಲಿಸಿದ್ದು, ಸರಕಾರ ಪ್ರಸೂತಿ ಹಾಗೂ ಮಕ್ಕಳ ತಜ್ಞರನ್ನು ನೇಮಕ ಮಾಡುವಂತೆ ಆದೇಶ ಹೊರಡಿಸಿದೆ.
2017ರ ನವೆಂಬರ್ 19ರಂದು ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಬಿ.ಆರ್. ಶೆಟ್ಟಿ ಅವರು ನಿರ್ಮಿಸಿದ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಿದ್ದರು. ಆಸ್ಪತ್ರೆಯ ಮೇಲ್ವಿಚಾರಣೆಯನ್ನು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ನಡೆಸುತ್ತಿತ್ತು. ಇಲ್ಲಿನ ಸಿಬಂದಿ ನೇಮಕ ಮತ್ತು ಎಲ್ಲ ಉಸ್ತುವಾರಿ ಬಿಆರ್ಎಸ್ ಸಂಸ್ಥೆ ಕೈಯ್ಯಲ್ಲಿತ್ತು. ಆದರೆ ಈಗ ಆಸ್ಪತ್ರೆಯನ್ನು ನಡೆಸಲು ಸಾಧ್ಯವಿಲ್ಲ ಎಂದು ಬಿಆರ್ಎಸ್ ಸಂಸ್ಥೆ ಸರಕಾರಕ್ಕೆ ಪತ್ರ ಬರೆದಿದೆ.
ಸಹಾಯಕ್ಕೆ ಮನವಿ
ಅಬುಧಾಬಿಯ “ಎನ್ಎಂಸಿ ಹೆಲ್ತ್ ‘ ಆರೋಗ್ಯ ಸಂಸ್ಥೆಯ ಸಂಸ್ಥಾಪಕ ಉಡುಪಿ ಮೂಲದ ಉದ್ಯಮಿ ಡಾ| ಬಿ.ಆರ್. ಶೆಟ್ಟಿ ಅವರು ತಾವೇ ಸ್ಥಾಪಿಸಿದ ಸಂಸ್ಥೆಗೆ ರಾಜೀನಾಮೆ ನೀಡಿದ್ದು, ಅಲ್ಲಿನ ಸರಕಾರ ಖಾತೆಗಳನ್ನು ಸದ್ಯ ಮುಟ್ಟುಗೋಲು ಹಾಕಿರುವುದರಿಂದ ಉಡುಪಿ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ಇದರಿಂದ ಸರಕಾರಕ್ಕೆ ಬಿಆರ್ಎಸ್ನಿಂದ ಮನವಿ ಹೋಗಿದೆ.
30 ವರ್ಷಗಳಿಗೆ ಲೀಸ್
ಉಡುಪಿ ನಗರಸಭಾ ಕಟ್ಟಡದ ಎದುರಿನ ಹಾಜಿ ಅಬ್ದುಲ್ಲ ಮಹಿಳೆಯರು ಮತ್ತು ಮಕ್ಕಳ ಆಸ್ಪತ್ರೆಯ ಒಟ್ಟು 4.07 ಎಕರೆ ವಿಸ್ತೀರ್ಣದ ಮೂರು ನಿವೇಶನಗಳನ್ನೊಳಗೊಂಡ ಜಮೀನನ್ನು ಡಾ| ಬಿ.ಆರ್. ಶೆಟ್ಟಿ ಅಧ್ಯಕ್ಷರಾಗಿರುವ ಬಿ.ಆರ್.ಎಸ್. ಹೆಲ್ತ್ ರಿಸರ್ಚ್ ಇನ್ಸ್ಟಿಟ್ಯೂಟ್ ಪ್ರೈ.ಲಿ.ಗೆ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಹಾಗೂ ಅಗತ್ಯವಿದ್ದಲ್ಲಿ ಇನ್ನೂ 30 ವರ್ಷಗಳ ಅವಧಿಗೆ ಲೀಸ್ನ್ನು ಮುಂದುವರಿಸಲು ರಾಜ್ಯ ಸರಕಾರ ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಒಪ್ಪಂದ ಮಾಡಿಕೊಂಡಿತ್ತು.
ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ನಡೆಸಿಕೊಂಡು ಹೋಗಲು ಸಾಧ್ಯವಿಲ್ಲ ಎಂದು ಬಿಆರ್ಎಸ್ ಸಂಸ್ಥೆ ರಾಜ್ಯ ಸರಕಾರಕ್ಕೆ ಪತ್ರ ಬರೆದಿತ್ತು. ಸರಕಾರ ಅಗತ್ಯವಿರುವ ಪ್ರಸೂತಿ ಹಾಗೂ ಮಕ್ಕಳ ತಜ್ಞರನ್ನು ನೇಮಕ ಮಾಡುವಂತೆ ಆದೇಶ ಹೊರಡಿಸಿದೆ.
– ಸದಾಶಿವ ಪ್ರಭು,
ಅಪರ ಜಿಲ್ಲಾಧಿಕಾರಿ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ