
Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ
Team Udayavani, May 30, 2023, 11:25 PM IST

ಕಾಪು: ಮನೆಗೆ ಸಿಡಿಲು ಬಡಿದು ಸಹೋದರಿಯರಿಬ್ಬರು ಗಾಯಗೊಂಡ ಘಟನೆ ಕಾಪುವಿನ ಕೊಪ್ಪಲಂಗಡಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಕಾಪು ಕೊಪ್ಪಲಂಗಡಿ ಕಮ್ಯುನಿಟಿ ಹಾಲ್ ಬಳಿಯ ನಿವಾಸಿ, ಆಶಾ ಕಾರ್ಯಕರ್ತೆ ಸುಭಾಷಿಣಿ ಅವರ ಮನೆಯ ಬಳಿ ಸಿಡಿಲು ಬಡಿದಿದ್ದು, ಇದರಿಂದಾಗಿ ಮನೆಯ ಹೊರಗಡೆ ಕುಳಿತಿದ್ದ ಸ್ನೇಹಲ್ ಮತ್ತು ಸ್ವಾತಿ ಅವರಿಗೆ ಸಿಡಿಲಿನ ರವೆ ಬಡಿದಿದೆ. ಸಿಡಿಲಿನಾಘಾತಕ್ಕೆ ಸಿಲುಕಿ ತೀವ್ರ ಆಘಾತಕ್ಕೊಳಗಾಗಿ ಮೂರ್ಚೆ ತಪ್ಪಿದ್ದ ಸ್ವಾತಿ ಅವರನ್ನು 108 ಅಂಬುಲೆನ್ಸ್ ಮೂಲಕವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಲೇಜಿನ ಕಾರ್ಯಕ್ರಮಕ್ಕೆ ಹೊರಡುತ್ತಿದ್ದರು : ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಸ್ನೇಹಲ್ ಮಂಗಳವಾರ ಕಾಲೇಜಿನಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ಹೊರಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು ಸ್ನೇಹಲ್ ಅವರನ್ನು ಸಿದ್ದ ಪಡಿಸಲೆಂದು ಆಗಮಿಸಿದ್ದ ಸ್ವಾತಿ ಸಿಲಿನಾಘಾತಕ್ಕೆ ಸಿಲುಕಿದ್ದಾರೆ. ಇಬ್ಬರೂ ಚೇತರಿಸಿಕೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾನವೀಯತೆ ಮೆರೆದ 108 ಸಿಬ್ಬಂದಿ : ಸಿಡಲಿನಾಘಾತದಿಂದಾಗಿ ಯುವತಿಯರಿಬ್ಬರು ಗಾಯಗೊಂಡ ಘಟನೆಯ ಮಾಹಿತಿ ತಿಳಿಯುತ್ತಲೇ 108 ಅಂಬುಲೆನ್ಸ್ನ ಸಿಬ್ಬಂದಿ ಉಮೇಶ್ ತತ್ಕ್ಷಣ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. 108 ಸಿಬ್ಬಂದಿ ಉಮೇಶ್ ಅವರ ತುರ್ತು ಮಾನವೀಯ ಸೇವೆಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ