ವಿದೇಶಿ ಮಾರುಕಟ್ಟೆಗೆ ಕೊರಳ್ಳಿ ಬಾಳೆ; ಹಳದಿ ಕಲ್ಲಂಗಡಿ ಬೆಳೆದಿದ್ದ ರೈತನ ಸಾಧನೆ

7500 ಬಾಳೆ ಗಿಡಗಳು ಗೊನೆ ಬಿಟ್ಟಿದ್ದು, ಪ್ರತಿ ಗಿಡ ಸರಾಸರಿ 30ಕೆ.ಜಿಯ ತೂಕದ ಗೊನೆ ಹೊಂದಿದೆ.

Team Udayavani, Sep 26, 2022, 6:04 PM IST

ವಿದೇಶಿ ಮಾರುಕಟ್ಟೆಗೆ ಕೊರಳ್ಳಿ ಬಾಳೆ; ಹಳದಿ ಕಲ್ಲಂಗಡಿ ಬೆಳೆದಿದ್ದ ರೈತನ ಸಾಧನೆ

ಆಳಂದ: ಹಳದಿ ಕಲ್ಲಂಗಡಿ ಬೆಳೆದು ಗಮನ ಸೆಳೆದಿದ್ದ ತಾಲೂಕಿನ ಕೊರಳ್ಳಿ ಗ್ರಾಮದ ಯುವ ರೈತ ಬಸವರಾಜ ಎಸ್‌. ಪಾಟೀಲ ಈಗ ತಾಂತ್ರಿಕತೆ ಅಳವಡಿಸಿ ಬೆಳೆದ ಬಾಳೆಗೊನೆಯನ್ನು ವಿದೇಶಕ್ಕೆ ರಫ್ತು ಮಾಡುತ್ತಿದ್ದಾರೆ. ಒಟ್ಟು 25 ಎಕರೆ ಪ್ರದೇಶದ ಪೈಕಿ 17 ಎಕರೆಯಲ್ಲಿ ಬಾಳೆ ಬೆಳೆಯಲಾಗಿದೆ. ಈ ಪೈಕಿ ಸದ್ಯ ಏಳು ಎಕರೆ ಬೆಳೆ ವಿದೇಶಕ್ಕೆ ಹಾಗೂ 10 ಎಕರೆಯಲ್ಲಿ ಬೆಳೆದ ಬಾಳೆಯನ್ನು ಸ್ಥಳೀಯ ಮಾರುಕಟ್ಟೆಗೆ ಸಾಗಿಸಲಾಗುತ್ತಿದೆ.

17 ಎಕರೆ ಪ್ರದೇಶದಲ್ಲಿ ಹಂತಹಂತವಾಗಿ ಬಾಳೆ ಕೈಗೆ ಬರತೊಡಗಿದೆ. ಜಿ-9 ತಳಿಯ ಬಾಳೆಯನ್ನು ಆಧುನಿಕ ಪದ್ಧತಿ ಅನುಸರಿಸಿ ಸಾಲಿನಿಂದ ಸಾಲಿಗೆ ಏಳು ಅಡಿ, ಗಿಡದಿಂದ ಗಿಡಕ್ಕೆ ಐದು ಅಡಿ ಅಂತರಕ್ಕೆ ನಾಟಿ ಮಾಡಲಾಗಿದೆ. ಜತೆಗೆ ಹನಿ ನೀರಾವರಿ ಮಲ್ಚಿಂಗ್‌ ಶೀಟ್‌ ಆಳವಡಿಸಿ ನಿರ್ವಹಣೆ ಮತ್ತು ಕಳೆ ನಿರ್ವಹಣೆಗೂ ಪೂರಕವಾಗುವಂತೆ ಮಾಡಿ ಖರ್ಚಿನ ಉಳಿತಾಯ ಮಾಡಿದ್ದಾರೆ. ಅಲ್ಲದೇ ಮಿಶ್ರ ಬೆಳೆಯಾಗಿ ಹಳದಿ ಕಲ್ಲಗಂಡಿ ಬೆಳೆದು ಏಳು ಲಕ್ಷ ರೂ. ಆದಾಯ ಪಡೆದಿದ್ದಾರೆ.

ಬೆಳೆ ನಿರ್ವಹಣೆಗೆ ಕಾಲ ಕಾಲಕ್ಕೆ ಬೇಕಾದ ಔಷಧ, ರಸಗೊಬ್ಬರ, ಕೀಟನಾಶಗಳ ಜತೆಗೆ ಕಲಬುರಗಿ ಕೃಷಿ ವಿಜ್ಞಾನ ಕೇಂದ್ರ ಮತ್ತು ತಾಲೂಕು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ಖಾಸಗಿ ಕಂಪನಿ ಬಳಿ ತಾಂತ್ರಿಕ ಮಾಹಿತಿ, ಸಲಹೆ ಪಡೆಯಲಾಗುತ್ತಿದೆ.

ಬಾಳೆ ಬೆಳೆದು ದೊಡ್ಡದಾದ ಮೇಲೆ ನೈಸರ್ಗಿಕವಾಗಿ ಕಳೆದ ಸಾಲಿನಲ್ಲಿ ಗಾಳಿ-ಬಿರುಗಾಳಿಗೆ ಅಡ್ಡಬಿದ್ದು ಹಾನಿಯಾಗಿದ್ದನ್ನು ಮನಗಂಡು ಈ ಬಾರಿ ಗೊನೆ ತುದಿಯನ್ನು ಬಾಳೆಯ ಕಾಂಡಕ್ಕೆ ದಾರದಿಂದ ಹತ್ತಿರವಾಗಿ ಕಟ್ಟಿದ್ದಾರೆ. ಗೊಂಚಲು ಕಟಾವಿಗೆ ಬರುವ ಹೊತ್ತಿನಲ್ಲಿ ಬಾಳೆಗೆ ಖಾಸಗಿ ಕಂಪನಿ ತಜ್ಞರ ಮಾರ್ಗದರ್ಶನದಂತೆ ಪೋಷಕಾಂಶ ಸಿಂಪಡಿಸಿದ್ದರಿಂದ ಅತ್ಯುತ್ತಮ ಮತ್ತು ಗುಣಮಟ್ಟದ ಕಾಯಿಕಟ್ಟಿವೆ. ಪರಿಣಾಮ ಈ ಬಾಳೆಯನ್ನು ರಫ್ತು ಮಾಡಲು ಸೊಲ್ಲಾಪುರದ ಖಾಸಗಿ ಕಂಪನಿಯೊಂದು ಮುಂದೆ ಬಂದಿದೆ.

ಪ್ರತಿ ಕೆಜಿಗೆ 20ರೂ.ಗಳಂತೆ ದರ ನಿಗದಿ ಮಾಡಿ ಎಕರೆ ಗುಣಮಟ್ಟದ್ದು ರಫ್ತು ಹಾಗೂ 10 ಎಕರೆ ಸ್ಥಳೀಯ ಮಾರುಕಟ್ಟೆ ಪೂರೈಸುತ್ತಿದ್ದಾರೆ. ಸರಾಸರಿ ಆರು ಎಕರೆಗೆ ನೋಡುವುದಾದರೆ, 7500 ಬಾಳೆ ಗಿಡಗಳು ಗೊನೆ ಬಿಟ್ಟಿದ್ದು, ಪ್ರತಿ ಗಿಡ ಸರಾಸರಿ 30ಕೆ.ಜಿಯ ತೂಕದ ಗೊನೆ ಹೊಂದಿದೆ.

ಗಿಡವೊಂದಕ್ಕೆ ಕನಿಷ್ಟ 500ರೂ, 550ರೂ. ಹೀಗೆ 7500 ಗಿಡದಿಂದ ಸುಮಾರು 35ಲಕ್ಷ ರೂ. ಲಾಭ ನಿರೀಕ್ಷಿಸಿರುವ ರೈತ ಪ್ರತಿ ಗಿಡಕ್ಕೆ 80ರಿಂದ 100ರೂ.ದಂತೆ ಖರ್ಚು ಮಾಡಿದ್ದಾರೆ. ಆದರೆ ಸ್ಥಳೀಯ ಮಾರುಕಟ್ಟೆಗೆ ಸಾಗಿಸುವ ಬಾಳೆಗೆ ಕೆಜಿಗೆ 10ರಿಂದ 11ರೂ. ಮಾತ್ರ ಬೆಲೆ ದೊರಕುತ್ತದೆ.

ರೈತ ಬಸವರಾಜ ಪಾಟೀಲ ಹಳದಿ ಕಲ್ಲಂಗಡಿ ಬೆಳೆದು ಜಿಲ್ಲಾ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಹೊಸ ತಂತ್ರಜ್ಞಾನ ಅಳವಡಿಸುವಲ್ಲಿ ಮುಂದಿದ್ದಾರೆ. ಇದರ ಫಲವಾಗಿ ರಫ್ತಿನ ಗುಣಮಟ್ಟದ ಬಾಳೆ ಉತ್ಪಾದಿಸಿ ಹೆಚ್ಚಿನ ಬೆಲೆ ಪಡೆದು ಇತರ ಬಾಳೆ ಬೆಳೆಯುವ ರೈತರಿಗೆ ಮಾದರಿಯಾಗಿದ್ದಾರೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್‌ ಯೋಜನೆಯಡಿ ನಾಲ್ಕು ಎಕರೆ ಪ್ರದೇಶಕ್ಕೆ ಆಗುವಷ್ಟು ಆರ್ಥಿಕ ಸಹಾಯಧನ ನೀಡಲಾಗುತ್ತಿದೆ.
ಶಂಕರಗೌಡ ಪಾಟೀಲ, ಸಹಾಯಕ ತೋಟಗಾರಿಕೆ ಹಿರಿಯ ನಿರ್ದೇಶಕ, ಆಳಂದ

ಒಟ್ಟು 25 ಎಕರೆ ಪ್ರದೇಶದಲ್ಲಿ ಬೆಳೆದ ಬಾಳೆಗೆ ಹನ್ನೊಂದು ಲಕ್ಷ ರೂ. ಖರ್ಚಾಗಿದೆ. ಕಳೆದ ಬಾರಿ ಬಾಳೆ ಗೊನೆ ಮುರಿದು ಹಾನಿಯಾದರೂ ಈ ಬಾರಿ ಬಿಡದೆ ಟೆಂಬೋಣಿ ಹಾಗೂ ರಫ್ತು ಮಾಡುವರ ಸಲಹೆ ಪಡೆದು ಯಶಸ್ವಿಯಾಗಿದ್ದೇನೆ.
ಬಸವರಾಜ ಪಾಟೀಲ,
ರೈತ ಕೊರಳ್ಳಿ

ಮಹಾದೇವ ವಡಗಾಂವ

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

1——-saads

HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

1-wewewqe

Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ

1-sadsadsad

Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.