ಪಿಂಚಣಿ ಅದಾಲತ್: ಗ್ರಾಮೀಣ ಜನರ ನೋವಿಗೆ ಸ್ಪಂದಿಸಿದ ಕೊರಟಗೆರೆ ತಹಸೀಲ್ದಾರ್ ನಹಿದಾ


Team Udayavani, Jan 14, 2022, 7:30 PM IST

1-frewrwr

ಕೊರಟಗೆರೆ :ತಾಲ್ಲೂಕಿನ ಹುಲಿಕುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದೇವರಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿದ ತಹಸೀಲ್ದಾರ್ ನಹಿದಾ ಜಮ್ ಜಮ್ ಫಲಾನುಭವಿಗಳಿಗೆ ವೃದ್ಧಾಪ್ಯ ವೇತನದ ಮಂಜೂರಾತಿ ಪತ್ರವನ್ನು ನೀಡಿದರು.

ನಹಿದಾ ಜಮ್ ಜಮ್ ಮಾತನಾಡಿ, 60 ವರ್ಷ ಮೇಲ್ಪಟ್ಟವರಿಗೆ ನಿಮ್ಮ ಮನೆಯ ಬಾಗಿಲಿಗೆ ವೃದ್ಧಾಪ್ಯ ವೇತನದ ಮಂಜೂರು ಪತ್ರ ತಲುಪಿಸುತ್ತಿದ್ದೇವೆ ಹಾಗೆಯೇ ಗ್ರಾಮದಲ್ಲಿನ ಸಮಸ್ಯೆಗಳನ್ನು ಸ್ಥಳೀಯ ಅಧಿಕಾರಿಗಳನ್ನು ಕಳಿಸಿ ತಕ್ಷಣ ಪರಿಹಾರ ಒದಗಿಸಿದರೆ ಯಾವುದೇ ಗ್ರಾಮದ ಜನರು ತಾಲ್ಲೂಕು ಕಚೇರಿಯ ಕಡೆ ಬರುವುದು ಕಡಿಮೆಯಾಗುತ್ತದೆ. ಆದ್ದರಿಂದ ಸ್ಥಳೀಯ ಅಧಿಕಾರಿಗಳು ತಮ್ಮ ತಮ್ಮ ಕೆಲಸಗಳ ಕಡೆ ಗಮನ ಕೊಡಿ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಇತ್ತೀಚೆಗೆ ಕೋವಿಡ್ ಸಂಖ್ಯೆಗಳು ಹೆಚ್ಚಾಗುತ್ತಿವೆ .ಮೊದಲನೇ ಹಾಗೂ ಎರಡನೇ ಅಲೆಗಿಂತ ಮೂರನೇ ಅಲೆ ತುಂಬಾ ವೇಗವಾಗಿ ಹರಡುತ್ತಿದೆ.ದಯವಿಟ್ಟು ಎಲ್ಲಾ ಗ್ರಾಮದಲ್ಲಿ ಶಾಲೆಗಳಲ್ಲಿ ಪ್ರತೀ ಕಡೆ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಕೈಗಳನ್ನು ಶುಚಿಯಾಗಿಟ್ಟುಕೊಳ್ಳಿ ಆರೋಗ್ಯದ ಕಡೆ ಎಲ್ಲರೂ ಗಮನ ಹರಿಸಿ ಎಂದು ತಿಳಿಸಿದರು.

ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಶಿಕ್ಷಕರಂತೆ ಪಾಠವನ್ನು ಮಾಡುತ್ತಾ ಮಕ್ಕಳಿಗೆ ಪ್ರಶ್ನೆಗಳನ್ನು ಕೇಳಿ ಮಕ್ಕಳ ಜೊತೆ ಕೆಲ ಸಮಯವನ್ನು ಕಳೆದರು.ತದನಂತರ ಅಂಗನವಾಡಿಗೆ ಭೇಟಿ ನೀಡಿ ಬಾಣಂತಿಯರಿಗೆ ಹಾಗೂ ಗರ್ಭಿಣಿಯರಿಗೆ ಯಾವ ಆಹಾರವನ್ನು ಕೊಡುತ್ತೀರಾ? ಎಂದು ಪರಿಶೀಲಿಸಿದರು .

ಫ್ರೆಂಡ್ಸ್ ಗ್ರೂಪ್ ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯ ಮಲ್ಲಣ್ಣ ಮಾತನಾಡಿ, ಇಂತಹ ಜನಸ್ನೇಹಿ ತಹಶಿಲ್ದಾರ್ ನಮ್ಮ ತಾಲ್ಲೂಕಿಗೆ ಬಂದಾಗಿನಿಂದಲೂ ಒಂದಲ್ಲ ಒಂದು ನೂತನ ಕಾರ್ಯಕ್ರಮದಡಿ ಜನರ ನೋವಿಗೆ ಸ್ಪಂದಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ತಾಲ್ಲೂಕಿನ ಗ್ರಾಮೀಣ ಭಾಗದ ಯಾವುದೇ ಗ್ರಾಮದ ಜನರ ಬಾಯಲ್ಲಿ ಕೇಳಿದರೂ ಕೂಡ ಇಂತಹ ಒಳ್ಳೆಯ ತಹಶಿಲ್ದಾರರನ್ನು ನಾವು ಹಿಂದೆಂದೂ ಕಂಡಿಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ .ಮನೆ ಇಲ್ಲದವರಿಗೆ ಮನೆ, ವೃದ್ಧಾಪ್ಯ ವೇತನ ಸಿಗದೆ ವಂಚಿತರಾಗಿರುವವರಿಗೆ ಕೂಡಲೇ ವೃದ್ಧಾಪ್ಯ ವೇತನ ಸಿಗುವಂತೆ ಸ್ಥಳದಲ್ಲಿಯೇ ಮಂಜೂರು ಪತ್ರ ನೀಡುವ, ತಾಲ್ಲೂಕು ದಂಡಾಧಿಕಾರಿಗಳಾದ ನಹಿದಾ ಜಮ್ ಜಮ್ ರವರು ನಮ್ಮ ತಾಲ್ಲೂಕಿನ ಜನತೆಯ ಪುಣ್ಯವೇ ಸರಿ ಎಂದರು.

ಯಾವುದೇ ಒಂದು ಕಾರ್ಯಕ್ರಮದಡಿಯಲ್ಲಿ ಗ್ರಾಮಗಳಿಗೆ ಭೇಟಿ ನೀಡುವ ಮೂಲಕ ಆ ಗ್ರಾಮದಲ್ಲಿನ ಹತ್ತಾರು ಕಾರ್ಯಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವಲ್ಲಿ ಯಶಸ್ವಿಯನ್ನು ಕಂಡ ದಿಟ್ಟ ಮಹಿಳೆ ಕೊರಟಗೆರೆಯ ತಹಸಿಲ್ದಾರ್ ನಹಿದಾ ಜಮ್ ಜಮ್ ಎಂದರೆ ತಪ್ಪಾಗಲಾರದು ಎಂದರು.

ಈ ಸಂದರ್ಭದಲ್ಲಿ ಶಿರಸ್ತೆದಾರರಾದ ಚಂದ್ರಪ್ಪ ,ಕಸಬಾ ಆರ್ ಐ ಪ್ರತಾಪ್,ವಿ ಎ ಬಸವರಾಜು ,ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಕಾಂತ್ ಸದಸ್ಯರಾದ ಮಲ್ಲಣ್ಣ, ಪಿಂಚಣಿ ಪಡೆಯುವ ಫಲಾನುಭವಿಗಳು ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.