ಕೊರಟಗೆರೆ: ಶಿಕ್ಷಕರ ನಿದ್ದೆಗೆಡಿಸಿದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ

ಇಂದು ಯಾವ ಶಾಲೆಗೆ ಬರಲಿದ್ದಾರೆ ಎಂದು ನಡುಕ...!

Team Udayavani, Feb 26, 2023, 9:47 PM IST

1-A-SDS

ಕೊರಟಗೆರೆ: ನೂತನ ಬಿಇಒ ಅಧಿಕಾರ ಸ್ವೀಕಾರ ಮಾಡಿದ ಕೆಲವೇ ದಿನಗಳಲ್ಲಿ ಶಿಕ್ಷಕರು ಶಾಲೆಗೆ ಬರುವ ಮುಂಚೆಯೇ ಶಾಲೆಯ ಮುಂದೆ ಹಾಜರಾಗುವ ಮೂಲಕ ಶಿಕ್ಷಕ ಸಮೂಹಕ್ಕೆ ಬ್ಲಾಕ್ ಶಿಕ್ಷಣಾಧಿಕಾರಿ ನಟರಾಜು ಸಿ.ವಿ ಶಾಕ್ ನೀಡಿದ್ದಾರೆ.

ಕೊರಟಗೆರೆ ತಾಲೂಕಿನಲ್ಲಿ ಇತ್ತೀಚಿಗೆ ನೂತನವಾಗಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಟರಾಜ್ ಹಲವು ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಶಿಕ್ಷಕರಿಗೆ ಅಚ್ಚರಿ ಮೂಡಿಸಿದ್ದಾರೆ.

ಇಷ್ಟ ಬಂದಾಗ ಶಾಲೆಗೆ ಬರುವುದು, ಅವಶ್ಯಕತೆ ಬಿದ್ದರೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಶಾಲೆಯಿಂದ ಹೊರ ಹೋಗುವ ಶಿಕ್ಷಕರುಗಳಿಗೆ ಸಿಂಹ ಸ್ವಪ್ನವಾದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ, ಶಿಕ್ಷಕರು ಶಾಲೆಗೆ ಬರುವ ಮುಂಚೆ ಶಾಲಾ ಕಾಂಪೌಂಡ್ ನಲ್ಲಿ ಕಾಣಿಸಿಕೊಳ್ಳುವುದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ, ವಿದ್ಯಾರ್ಥಿಗಳ ಮುಂದೆ ಶಿಕ್ಷಕರಂತೆ ಬೋಧಿಸಿ ನೀತಿ ಪಾಠ ಹೇಳುವ ಬಿಇಓ ನಡವಳಿಕೆಯ ಕಂಡು ಶಾಲಾ ಮಕ್ಕಳ ಪೋಷಕರ ಹುಬ್ಬೇರುವಂತೆ ಮಾಡಿದೆ.

ತಾಲೂಕಿನಲ್ಲಿ ಇತ್ತೀಚೆಗೆ ಅನಿರೀಕ್ಷಿತ ಭೇಟಿ ಕೊಡುತ್ತಿರುವ ಬಿಇಒ ನಟರಾಜ್ ಇಂದು ಯಾವ ಶಾಲೆಗೆ ಬರಲಿದ್ದಾರೆ ಎಂದು ಶಿಕ್ಷಕರಿಗೆ ನಡುಕ ಹುಟ್ಟುತ್ತಿದೆ, ಯಾವುದೇ ಮಾಹಿತಿ ಇಲ್ಲದೆ ಬೆಳ್ಳಂಬೆಳ್ಳಗೆ ಶಿಕ್ಷಕರು ಶಾಲೆಗೆ ಬರುವ ಮುಂಚೆಯೇ ಶಾಲೆಯ ಮುಂದೆ ಹಾಜರಾಗುವ ಬಿಇಓ ನಟರಾಜ್ ಶಾಲೆಯ ಪೂರ್ಣ ವಾತಾವರಣವನ್ನು ಕಲೆಹಾಕಿ ಶಿಕ್ಷಕರಿಗೆ ಖಡಕ್ ಎಚ್ಚರಿಕೆ ನೀಡಲು , ಸರ್ಪ್ರೈಸ್ ವಿಸಿಟ್ ನೀಡುವ ಮೂಲಕ ತಾಲೂಕಿನಲ್ಲಿ ಮಿಂಚಿನ ಸಂಚಲನವನ್ನೇ ಮೂಡಿಸಿದ್ದಾರೆ.

ಬಿಇಒ ನಟರಾಜ್ ಶೈಕ್ಷಣಿಕ ಕ್ಷೇತ್ರದಲ್ಲಿ ಒಂದು ಬದಲಾವಣೆ ತರಲು ಒಂದು ವಿಶಿಷ್ಟ ರೀತಿಯಲ್ಲಿ ಪ್ರಯೋಗ ಮಾಡುತ್ತಿದ್ದು, ಕೊರಟಗೆರೆ ತಾಲೂಕಿನಲ್ಲಿ ಹಲವು ಶಾಲೆಗಳಿಗೆ ಇತ್ತೀಚಿಗೆ ಸರ್ಪ್ರೈಸ್ ವಿಸಿಟ್ ನೀಡುವ ಮೂಲಕ ನಿಗದಿತ ಸಮಯಕ್ಕೆ ಹಾಜರಾಗದ ಶಿಕ್ಷಕರುಗಳಿಗೆ ಶಾಕ್ ನೀಡಿದ್ದು, ಜೊತೆಗೆ ಶಾಲೆಯನ್ನು ಮುಕ್ತಾಯ ಸಮಯಕ್ಕಿಂತ ಮುಂಚೆ ಹೊರಹೋಗುವ ಶಿಕ್ಷಕರಿಗೂ ಖಡಕ್ ಎಚ್ಚರಿಕೆ ನೀಡಿದ್ದಾರೆ,

ಇತ್ತೀಚೆಗೆ ಕೊರಟಗೆರೆ ತಾಲೂಕಿನ ಅಗ್ರಹಾರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಾಗೂ ಪ್ರೌಢಶಾಲೆಗೆ ಶಾಲೆಯ ಬೆಲ್ ಹೊಡೆಯುವುದಕ್ಕಿಂತ ಮುಂಚೆಯೇ ಶಾಲೆಯ ಮುಂದೆ ಪ್ರತ್ಯಕ್ಷರಾಗಿದ್ದಾರೆ, ಇನ್ನು ಹಲವು ಶಿಕ್ಷಕರು ಶಾಲೆಗೆ ಆಗಮಿಸುವ ಮುಂಚೆ ಶಾಲೆಯ ಕೊಠಡಿಯಲ್ಲಿ ಕುಳಿತು, ಶಾಲೆಯ ವಾತಾವರಣವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದಲ್ಲದೆ, ತಾವೇ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಕರಂತೆ ಚಾಕ್ ಪೀಸ್ ಹಿಡಿದು ಅರ್ಧ ತಾಸಿಗೂ ಹೆಚ್ಚು ಕಾಲ ಪಾಠ ಪ್ರವಚನದ ಜೊತೆಗೆ ಶಿಸ್ತು ಬದ್ಧ ಜೀವನ, ಮುಂದಿನ ಕೆಲವೇ ದಿನಗಳಲ್ಲಿ ಬರಲಿರುವ ಪರೀಕ್ಷೆಯಲ್ಲಿ ಯಾವ ರೀತಿ ವಿದ್ಯಾರ್ಥಿಗಳು ಯಶಸ್ವಿಯಾಗಿ ಎದುರಿಸಬೇಕು ಎಂಬುದನ್ನು ಹೇಳಿ ಹುರಿದುಂಬಿಸಿದರು.

ನಂತರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಶಾಲಾ ಪ್ರಾರ್ಥನೆಯಲ್ಲಿ ಭಾಗವಹಿಸಿ ಪ್ರೌಢಶಾಲಾ ಮಕ್ಕಳಿಗೆ ಪ್ರಾರ್ಥನಾ ಸಂದರ್ಭದಲ್ಲಿಯೇ ವಿದ್ಯಾರ್ಥಿ ಜೀವನದ ಮೌಲ್ಯವನ್ನು, ಶಿಸ್ತು ಬದ್ಧ ಜೀವನವನ್ನು ರೂಪಿಸಿಕೊಳ್ಳಲು ನೀತಿ ಪಾಠ ಹೇಳಿದರು,

ನಂತರ ಶಿಕ್ಷಕರುಗಳಿಗೆ 5 ನಿಮಿಷಗಳ ಕಾಲ ಪ್ರತ್ಯೇಕವಾಗಿ ಮೀಟಿಂಗ್ ನಡೆಸಿ ಶಾಲೆಯಲ್ಲಿ ಉತ್ತಮ ಫಲಿತಾಂಶ ಬರಬೇಕು, ಶಾಲೆಯ ವಾತಾವರಣವನ್ನು ತುಂಬಾ ವ್ಯವಸ್ಥಿತವಾಗಿ ನಿರ್ವಹಿಸಲು ಕಿವಿ ಮಾತು ಹೇಳಿದ್ದಲ್ಲದೆ ಯಾವುದೇ ಲೋಪ ಅಥವಾ ಆರೋಪಗಳು ಕೇಳಿ ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವುದಾಗಿ ಶಿಕ್ಷಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.