ಕೋಟೇಶ್ವರ ಕೋಡಿ ರಸ್ತೆ ಅವ್ಯವಸ್ಥೆ: ಅನುದಾನ ಮಂಜೂರು


Team Udayavani, Oct 7, 2021, 5:25 AM IST

ಕೋಟೇಶ್ವರ ಕೋಡಿ ರಸ್ತೆ ಅವ್ಯವಸ್ಥೆ: ಅನುದಾನ ಮಂಜೂರು

ಕುಂದಾಪುರ: ಕೋಟೇಶ್ವರದಿಂದ ಹಳೆ ಅಳಿವೆಯ (ಬೀಚ್‌ ರೋಡ್‌) ತನಕ ರಸ್ತೆ ಹದಗೆಟ್ಟಿದ್ದು ವಾಹನ ಸಂಚಾರ ದುಸ್ತರವಾಗಿದೆ. ಇಕ್ಕಟ್ಟಾದ ರಸ್ತೆಯಲ್ಲಿ ಎರಡು ವಾಹನಗಳು ಏಕಕಾಲದಲ್ಲಿ ಸಂಚರಿಸುವುದು ಕಷ್ಟವಾಗಿದ್ದು ದ್ವಿಚಕ್ರ ವಾಹನ ಸವಾರರಿಗೆ ಕೆಸರ ಸಿಂಚನ ಸಾಮಾನ್ಯವಾಗಿದೆ. ಮಳೆಗಾಲ ಮುಗಿದ ಬಳಿಕ ರಸ್ತೆ ಪೂರ್ಣಪ್ರಮಾಣದಲ್ಲಿ ದುರಸ್ತಿಯಾಗಲಿದೆ.

ಎರಡೂ ಪಾರ್ಶ್ವಗಳಲ್ಲಿ ಒಂದು ವಾಹನದ ಎದುರು ಇನ್ನೊಂದು ವಾಹನ ಸಾಗಲು ಸ್ಥಳಾವಕಾಶ ಇಲ್ಲದೇ 3.5 ಮೀ.ನಷ್ಟು ಅಗಲ ಕಿರಿದಾದ ರಸ್ತೆಯಲ್ಲಿ ಎರಡು ಕಡೆಗಳಲ್ಲೂ ದೊಡ್ಡ ಹೊಂಡದಿಂದ ಕೂಡಿವೆ. ವಾಹನ ಬರುತ್ತಿದ್ದಾಗ ಪಾದಚಾರಿಗಳು ಸಂಚರಿಸಲು ಅಸಾಧ್ಯವಾಗಿದೆ.
ವಿನಾಯಕ ಕೋಡಿ ಸಂಪರ್ಕ ಸೇತುವೆ ಕಾಮಗಾರಿ ನಡೆಯುತ್ತಿರುವ ಕಾರಣ ಇಲ್ಲಿ ವಾಹನಗಳು ಅಧಿಕ ಸಂಖ್ಯೆಯಲ್ಲಿ ಸಂಚರಿಸುತ್ತಿವೆ. ವಿನಾಯಕ ಕೋಡಿಯಲ್ಲಿ ಒಂದು ಸೇತುವೆಯ ಕಾಮಗಾರಿ ಬಹುತೇಕ ಪೂರ್ಣ ವಾದರೂ ಇನ್ನೂ ವಾಹನಗಳ ಓಡಾಟಕ್ಕೆ ಬಿಟ್ಟುಕೊಟ್ಟಿಲ್ಲ. ಇನ್ನೊಂದು ಕಾಮಗಾರಿ ಮೇಲೇಳುವ ಲಕ್ಷಣ ಕಾಣುತ್ತಿಲ್ಲ ಎಂದು ಊರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಗಾಗ ಬರುತ್ತಿರುವ ಮಳೆ ಕಾಮಗಾರಿ ಪುನರಾರಂಭಿಸಲು ತೊಡಕಾಗಿದೆ. ಆದ್ದರಿಂದ ಈ ರಸ್ತೆಯಲ್ಲಿ ಕಳೆದ ಫೆಬ್ರವರಿಯಿಂದ ಸಂಚಾರ ಆರಂಭಗೊಂಡಿಲ್ಲ.

ವಾಹನ ದಟ್ಟನೆ
ಕೋಡಿ ವಿನಾಯಕ ರಸ್ತೆ ಬದಲಿಗೆ ಕುಂದಾಪುರದಿಂದ ಕೋಡಿಗೆ ಹೋಗುವ ವಾಹನಗಳು ಒಂದೋ ನಗರದಲ್ಲಿ ಇರುವ ಚರ್ಚ್‌ ರಸ್ತೆಯನ್ನು ಅವಲಂಬಿಸಬೇಕು ಅಥವಾ ಕೋಟೇಶ್ವರ ಹಳೆಅಳಿವೆ ರಸ್ತೆ ಮೂಲಕ ಸಾಗಬೇಕು. ಬಸ್ಸು ಮೊದಲಾದ ಎಲ್ಲ ವಾಹನಗಳೂ ಇದೇ ಮಾರ್ಗ ಅನುಸರಿಸುತ್ತಿವೆ. ಆದ್ದರಿಂದ ಈ ರಸ್ತೆಯಲ್ಲಿ ವಾಹನಗಳ ದಟ್ಟನೆ ಹೆಚ್ಚಾಗಿದೆ. ಪರಿಣಾಮ ಹಳೆ ಅಳಿವೆ ರಸ್ತೆಗೆ ಭಾರ ಹೆಚ್ಚಾಗಿದೆ. ಧಾರಣ ಸಾಮರ್ಥ್ಯಕ್ಕಿಂತ ಹೆಚ್ಚಿನ ವಾಹನಗಳನ್ನು ತಾಳಿಕೊಳ್ಳಬೇಕಿದೆ.

ಇದನ್ನೂ ಓದಿ:ತಲಕಾವೇರಿ ತೀರ್ಥೋದ್ಭವ; ಭಕ್ತರಿಗೆ ಮುಕ್ತ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

ಮಂಜೂರು
ಈಗ ಕೆಲವು ತಿಂಗಳಿನಿಂದ ಅಧಿಕ ವಾಹನ ಓಡಾಟದಿಂದ ಹಾಳಾದ, ಕಳೆದ ಅನೇಕ ವರ್ಷಗಳಿಂದ ದುರಸ್ತಿಗೆ ಕಾಯುತ್ತಿರುವ ಈ ರಸ್ತೆಗೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈಗ ಅನುದಾನ ಮಂಜೂರು ಮಾಡಿಸಿದ್ದಾರೆ. ಕೋಟೇಶ್ವರದಿಂದ ಸುಮಾರು ಅರ್ಧ ಕಿ.ಮೀ. ದೂರಕ್ಕೆ ಪೂರ್ಣ ಡಾಮರು ಕಾಮಗಾರಿಗೆ 40 ಲಕ್ಷ ರೂ. ಮಂಜೂರಾಗಿದ್ದು ಟೆಂಡರ್‌ ಆಗಿದೆ. ಮಳೆ ನಿಂತ ಬಳಿಕ ಕಾಮಗಾರಿ ನಡೆಯಲಿದೆ. ಅನಂತರದ ರಸ್ತೆ ದುರಸ್ತಿಗೆ 3 ಕೋ.ರೂ. ಅನುದಾನಕ್ಕೆ ಕ್ರಿಯಾ ಯೋಜನೆ ತಯಾರಿಸಲು ಸರ್ವೇ ಕಾರ್ಯ ನಡೆದಿದೆ. ಕೋಡಿಯಿಂದ ಚಕ್ರಮ್ಮ ದೇವಸ್ಥಾನದವರೆಗೆ 3 ಕೋ.ರೂ. ಮಂಜೂರಾಗಿದ್ದು ಕಾಮಗಾರಿ ನಡೆಯಲಿದೆ.

3 ಕೋ.ರೂ. ಮಂಜೂರು
ಕೋಟೇಶ್ವರ ಹಳೆ ಅಳಿವೆ ಕೋಡಿ ರಸ್ತೆಗೆ ಶಾಸಕರ ಮೂಲಕ ಅನುದಾನ ಮಂಜೂರಾಗಿದ್ದು ಮಳೆಗಾಲದ ಬಳಿಕ ಕಾಮಗಾರಿ ಆರಂಭವಾಗಲಿದೆ. ಪೂರ್ಣ ಡಾಮರಿಗೆ 40 ಲಕ್ಷ ರೂ. ಟೆಂಡರ್‌ ಆಗಿದ್ದು ಅನಂತರ ಕ್ರಿಯಾ ಯೋಜನೆ ತಯಾರಿ ಹಂತದಲ್ಲಿದೆ. ಚಕ್ರಮ್ಮ ದೇವಸ್ಥಾನದವರೆಗೆ 3 ಕೋ.ರೂ. ಮಂಜೂರಾಗಿದೆ.
-ಹರ್ಷವರ್ಧನ, ಸಹಾಯಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.