ಕೊಟ್ಟಲಗಿ ಶಾಲೆ ಶಿಕ್ಷಕರ ಮಾದರಿ ಕಾರ್ಯ; ಮಕ್ಕಳ ಸಂಖ್ಯೆ ಹೆಚ್ಚಿಸಲು ವಿಭಿನ್ನ ಪ್ರಯೋಗ
Team Udayavani, Feb 23, 2022, 7:31 PM IST
ತೆಲಸಂಗ: ಸರಕಾರಿ ಶಾಲೆಗಳಲ್ಲಿನ ಬಿಸಿಯೂಟವೆಂದರೆ ಮೂಗು ಮುರಿಯುವ ದಿನಮಾನದಲ್ಲಿ ಇಲ್ಲೊಂದು ಶಾಲೆಯ ಶಿಕ್ಷಕರು ರುಚಿಕಟ್ಟಾದ ಖಾದ್ಯಗಳೊಂದಿಗೆ ಬಿಸಿಯೂಟ ತಯಾರಿಸಿ ಬಡಿಸುತ್ತ ಮಾದರಿಯಾಗಿದ್ದಾರೆ.
ಮಕ್ಕಳ ಸಂಖ್ಯೆ ಹೆಚ್ಚಿಸಲು ವಿಭಿನ್ನ ಪ್ರಯೋಗ ಇದಾಗಿದ್ದು, ಮೃಷ್ಟಾನ್ನ ತಯಾರಿಸಿ ಮಕ್ಕಳಿಗೆ ಉಣಬಡಿಸುವ ಮಹತ್ವದ ಕಾರ್ಯದಲ್ಲಿ ತೊಡಗಿಸಿಕೊಂಡ ಕೊಟ್ಟಲಗಿ ಗ್ರಾಮದ ನಮ್ಮೂರ
ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಪಾಲಕರ ಹೊಗಳಿಕೆಗೆ ಪಾತ್ರರಾಗಿದ್ದಾರೆ. ಸರಕಾರ ಮಕ್ಕಳಿಗೆ ಕೊಡುವ ಧಾನ್ಯದಲ್ಲಿಯೇ ವಿಭಿನ್ನ ಊಟ ತಯಾರಿಸಬಹುದು ಎಂಬ ಮಹತ್ವದ ಸಂದೇಶ ಈ ಶಾಲೆಯಿಂದ ಹೊರಡುತ್ತಿದೆ.
ವಾರದಲ್ಲಿ ಒಂದೊಂದು ದಿನ ಇಡ್ಲಿ, ಬಜಿ, ದೋಸೆ, ಹೋಳಿಗೆ, ಚಪಾತಿ, ಪುರಿ ಸೇರಿದಂತೆ ವೈವಿಧ್ಯಮಯ ಅಡುಗೆ ಮಾಡುವ ಮೂಲಕ ಮಕ್ಕಳ ಸಂಖ್ಯೆ ಹೆಚ್ಚಿಸಲು ಶ್ರಮಿಸುತ್ತಿದ್ದಾರೆ.
ಶಾಲೆಯಲ್ಲಿ ಓದುವ ಮಗುವಿನ ಜನ್ಮದಿನ ಇದ್ದರೆ ವಿಶೇಷ ಅಡುಗೆ ಮಾಡಿಸಿ ಸಸಿ ನೆಟ್ಟು ವಿಶಿಷ್ಟವಾಗಿ ಜನ್ಮದಿನ ಆಚರಿಸುತ್ತಾರೆ.
ಬಡವ-ಸಿರಿವಂತ ಎಂಬ ಭೇದ ಭಾವ ಮಕ್ಕಳಲ್ಲಿ ಮೂಡದಂತೆ ಎಚ್ಚರಿಕೆಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಇಲ್ಲಿಯ ರೈತರು, ಕೂಲಿಕಾರ್ಮಿಕರ ಮಕ್ಕಳಿಗೆ
ಅಕ್ಷರದಾಸೋಹದೊಂದಿಗೆ ಅನ್ನ ದಾಸೋಹವನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದ್ದಾರೆ.
1ರಿಂದ 7ನೇ ತರಗತಿವರೆಗಿನ ಶಾಲೆಯಲ್ಲಿ ಎರಡು ನೂರು ಮಕ್ಕಳು ಓದುತ್ತಿದ್ದಾರೆ. ಇಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಾದ ಬಿ.ಎಸ್. ತಾಂಶಿ, ಎಸ್.ಜಿ. ಕಾಂಬಳೆ, ಎಸ್.ಎಸ್. ಸತ್ತೀಗೇರಿ
ಕಾರ್ಯದಕ್ಷತೆಯಿಂದ ಉತ್ತಮ ಮೈದಾನ ನಿರ್ಮಾಣ, ಶೌಚಾಲಯ ಸ್ವತ್ಛತೆ ಹಾಗೂ ಬಳಕೆ, ಗುಣಮಟ್ಟದ ಶಿಕ್ಷಣ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ