ಪರಿಸ್ಥಿತಿ ನಿಭಾಯಿಸಲು ಕೆಪಿಟಿಸಿಎಲ್‌, ಕೆಪಿಸಿಎಲ್‌ ಸಜ್ಜು


Team Udayavani, Apr 5, 2020, 10:01 AM IST

ಪರಿಸ್ಥಿತಿ ನಿಭಾಯಿಸಲು ಕೆಪಿಟಿಸಿಎಲ್‌, ಕೆಪಿಸಿಎಲ್‌ ಸಜ್ಜು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕರೆ ಹಿನ್ನೆಲೆಯಲ್ಲಿ ಎ. 5ರಂದು ರಾತ್ರಿ 9ರಿಂದ 9 ನಿಮಿಷಗಳ ಕಾಲ ರಾಜ್ಯದ ಜನ ವಿದ್ಯುತ್‌ ದೀಪಗಳನ್ನು ಆರಿಸಿದರೆ ಆ ಹೊತ್ತಿನಲ್ಲಿ ದಿಢೀರ್‌ 700 ಮೆಗಾವ್ಯಾಟ್‌ ವಿದ್ಯುತ್‌ ಬಳಕೆ ಕಡಿಮೆಯಾಗಲಿದ್ದು, ಆ ಸಂದರ್ಭದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಲು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ (ಕೆಪಿಟಿಸಿಎಲ್‌) ಮತ್ತು ಕರ್ನಾಟಕ ವಿದ್ಯುತ್‌ ನಿಗಮ (ಕೆಪಿಸಿಎಲ್‌) ಸಜ್ಜಾಗಿವೆ.

ದಿಲ್ಲಿಯಲ್ಲಿನ ನ್ಯಾಶನಲ್‌ ಲೋಡ್‌ ಡಿಸ್‌ಪ್ಯಾಚ್‌ ಸೆಂಟರ್‌ (ಎನ್‌ಎಲ್‌ಡಿಸಿ) ವತಿಯಿಂದ ಶನಿವಾರ ವೀಡಿಯೋ ಸಂವಾದದ ಮೂಲಕ ಎಲ್ಲ ರಾಜ್ಯಗಳ ವಿದ್ಯುತ್‌ ಪ್ರಸರಣ ವಿಭಾಗದ ಅಧಿಕಾರಿಗಳೊಂದಿಗೆ ಸಂವಾದ ನಡೆಯಿತು. ವೀಡಿಯೋ ಸಂವಾದ ಬಳಿಕ ಮಾತನಾಡಿದ ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕಿ ಡಾ| ಎನ್‌. ಮಂಜುಳಾ ಅವರು ರಾಜ್ಯದಲ್ಲಿ ರವಿವಾರ ರಾತ್ರಿ 9 ಗಂಟೆಯಿಂದ 9 ನಿಮಿಷಗಳ ಕಾಲ ವಿದ್ಯುತ್‌ ದೀಪಗಳ ಬಳಕೆ ಸ್ಥಗಿತಗೊಂಡಾಗ ಸುಮಾರು 600ರಿಂದ 700 ಮೆ.ವ್ಯಾ. ವಿದ್ಯುತ್‌ ಬಳಕೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ವಿದ್ಯುತ್‌ ದೀಪಗಳನ್ನಷ್ಟೇ ಆರಿಸಿ ಇತರ ವಿದ್ಯುತ್‌ ಉಪಕರಣಗಳ ಬಳಕೆ ಮುಂದುವರಿಸಬಹುದಾಗಿದೆ. ಜತೆಗೆ ಬೀದಿದೀಪಗಳು ಇತರ ವಿದ್ಯುತ್‌ ಬಳಕೆ ಯಥಾಸ್ಥಿತಿಯಲ್ಲಿರುತ್ತದೆ. ಆ 9 ನಿಮಿಷದ ಅವಧಿಯಲ್ಲಿ ವಿದ್ಯುತ್‌ ಬಳಕೆ ಕಡಿಮೆಯಾಗುವ ಪರಿಸ್ಥಿತಿಯ ನಿರ್ವಹಣೆಗೆ ಪೂರಕ ರೂಪುರೇಷೆ ಸಿದ್ಧಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಲವಿದ್ಯುತ್‌ ಘಟಕದಿಂದ ನಿಯಂತ್ರಣ
ಉಷ್ಣ ಸ್ಥಾವರಗಳಲ್ಲಿ ವಿದ್ಯುತ್‌ ಉತ್ಪಾದನೆಯನ್ನು ದಿಢೀರ್‌ ಸ್ಥಗಿತಗೊಳಿಸುವುದು, ದಿಢೀರ್‌ ಕಾರ್ಯಾರಂಭ ಮಾಡುವುದೂ ಕಷ್ಟ. ಆದರೆ ಜಲವಿದ್ಯುತ್‌ ಘಟಕಗಳಿಂದ ವಿದ್ಯುತ್‌ ಉತ್ಪಾದನೆಯನ್ನು ದಿಢೀರ್‌ ಸ್ಥಗತಿಗೊಳಿಸಲು ಮತ್ತು ಕೇವಲ ಅರ್ಧ ನಿಮಿಷದಲ್ಲಿ ಮತ್ತೆ ಪೂರ್ಣ ಪ್ರಮಾಣದಲ್ಲಿ ಗರಿಷ್ಠ ವಿದ್ಯುತ್‌ ಉತ್ಪಾದನೆಗೆ ಅವಕಾಶವಿದೆ. ಹಾಗಾಗಿ ಜಲವಿದ್ಯುತ್‌ ಘಟಕದ ಮೂಲಕ ಆ 9 ನಿಮಿಷಗಳಲ್ಲಿ ವಿದ್ಯುತ್‌ ಬಳಕೆ ಸ್ಥಗಿತ ಪರಿಸ್ಥಿತಿ ನಿಯಂತ್ರಿಸಲಾಗುವುದು ಎಂದರು.

ಇನ್ನೊಂದೆಡೆ ಉಷ್ಣ ವಿದ್ಯುತ್‌ ಘಟಕಗಳನ್ನು ಸಾಧ್ಯವಾದಷ್ಟು ಕಡಿಮೆ ಉತ್ಪಾದನೆಗೆ ಸೀಮಿತಗೊಳಿಸಿಕೊಳ್ಳಲಾಗುತ್ತದೆ. ಜತೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಹಂಚಿಕೆಯಡಿ ಪೂರೈಕೆಯಾಗುವ ವಿದ್ಯುತ್‌ ಪ್ರಮಾಣವನ್ನು ಆ ಹೊತ್ತಿನಲ್ಲಿ ಸಾಧ್ಯವಾದಷ್ಟು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಲಾಗುತ್ತದೆ. ಕೃಷಿ ಪಂಪ್‌ಸೆಟ್‌ ಸಹಿತ ಇತರ ಚಟುವಟಿಕೆಗಳಿಗೆ ವಿದ್ಯುತ್‌ ಪೂರೈಕೆ ಸಹಜ ಸ್ಥಿತಿಯಲ್ಲಿರಲಿದೆ. 9 ನಿಮಿಷಗಳ ಅವಧಿ ಪೂರ್ಣಗೊಳ್ಳುತ್ತಿದ್ದಂತೆ ಜಲವಿದ್ಯುತ್‌ ಉತ್ಪಾದನೆ ಆರಂಭವಾಗಲಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತದೆ ಎಂದು ವಿವರಿಸಿದರು.

ರಾಜ್ಯಾದ್ಯಂತ 9 ನಿಮಿಷಗಳ ಕಾಲ ವಿದ್ಯುತ್‌ ದೀಪಗಳು ಬಂದ್‌ ಆಗುವ ಹಿನ್ನೆಲೆಯಲ್ಲಿ ವಿದ್ಯುತ್‌ ಪ್ರಸರಣ ಫೀಡರ್‌ಗಳಲ್ಲೂ ಒತ್ತಡ ಉಂಟಾಗದಂತೆ ನಿಯಂತ್ರಣದಲ್ಲಿಟ್ಟುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯುತ್‌ ಬಳಕೆ ಏರಿಳಿತವನ್ನು ಪರಿಸ್ಥಿತಿಗೆ ತಕ್ಕಂತೆ ನಿಭಾಯಿಸಲು ವ್ಯವಸ್ಥೆ ಮಾಡಿ ಕೊಳ್ಳುವಂತೆಯೂ ಸೂಚಿಸಲಾಗಿದೆ ಎಂದರು.

ರವಿವಾರ ರಾತ್ರಿ 9ಕ್ಕೆ 9 ನಿಮಿಷಗಳ ಕಾಲ ದೇಶದ ಜನ ವಿದ್ಯುತ್‌ ದೀಪಗಳನ್ನು ಆರಿಸಿದರೆ 13,000 ಮೆ.ವ್ಯಾ. ವಿದ್ಯುತ್‌ ಬಳಕೆ ಸ್ಥಗಿತವಾಗಲಿದೆ ಎಂಬುದಾಗಿ ಸಂವಾದದ ವೇಳೆ ತಿಳಿಸಲಾಯಿತು. ದಕ್ಷಿಣ ಭಾರತದಲ್ಲಿ 3,500 ಮೆ.ವ್ಯಾ. ವಿದ್ಯುತ್‌ ಬಳಕೆ ಕಡಿಮೆಯಾಗಲಿದ್ದು, ಕರ್ನಾಟಕದಲ್ಲಿ 600ರಿಂದ 700 ಮೆ.ವ್ಯಾ.ಗಳಷ್ಟು ಬಳಕೆ ಇಳಿಕೆಯಾಗುವ ಸಾಧ್ಯತೆ ಇದೆ.
-ಡಾ| ಎನ್‌.ಮಂಜುಳಾ,
ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕಿ

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.