ಡಿಕೆಶಿ, ಎಚ್ಡಿಕೆ “ಕಾರ್ಯತಂತ್ರ’ಕ್ಕೆ ಸಿಗದ ಕೆ.ಆರ್‌.ಪೇಟೆ


Team Udayavani, Nov 24, 2019, 3:08 AM IST

dksi-hdk

ಮಂಡ್ಯ: ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಅತಂತ್ರಸ್ಥಿತಿಗೆ ದೂಡುವುದಕ್ಕೆ ಮಾಜಿ ಸಿಎಂ ಎಚ್‌. ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಪರೋಕ್ಷವಾಗಿ ಕೈಜೋಡಿಸಿರುವ ಕ್ಷೇತ್ರಗಳಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆಯೂ ಒಂದಾಗಿದ್ದು, ವಾಸ್ತವದಲ್ಲಿ ಕ್ಷೇತ್ರದೊಳಗಿನ ಪರಿಸ್ಥಿತಿ ಇಬ್ಬರೂ ನಾಯಕರ ಕಾರ್ಯತಂತ್ರಕ್ಕೆ ಪೂರಕವಾಗಿಲ್ಲ ಎಂಬಂತಾಗಿದೆ.

ಪ್ರತಿ ಚುನಾವಣೆಯಲ್ಲೂ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದ ಬಿಜೆಪಿ ಈ ಚುನಾವಣೆಯಲ್ಲಿ ತನ್ನೆಲ್ಲ ಶಕ್ತಿಯನ್ನು ಒಟ್ಟಿಗೆ ಪ್ರಯೋಗಿಸುವ ಮೂಲಕ ಹೊಸದೊಂದು ಸಂಚಲನ ಸೃಷ್ಟಿಸಿದೆ. ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡುವಂತೆ ಬಿರುಸಿನಿಂದ ಪ್ರಚಾರದ ಅಖಾಡದಲ್ಲಿ ಮುನ್ನುಗ್ಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಪ್ರಯತ್ನ ಕಾಂಗ್ರೆಸ್‌-ಜೆಡಿಎಸ್‌ ಪಾಳಯದಲ್ಲಿ ಕಂಡುಬರುತ್ತಿಲ್ಲ.

ಕಾಂಗ್ರೆಸ್‌-ಜೆಡಿಎಸ್‌ ನಿರೀಕ್ಷೆಗೂ ಮೀರಿ ಬಿಜೆಪಿ ಕ್ಷೇತ್ರದೊಳಗೆ ಬಲಪ್ರದರ್ಶನದೊಂದಿಗೆ ಮತಬೇಟೆಗಿಳಿ ದಿದೆ. ಪ್ರತಿ ಚುನಾವಣೆಯಲ್ಲೂ ಕಾಂಗ್ರೆಸ್‌-ಜೆಡಿಎಸ್‌ ನಡುವೆ ನೇರ ಕದನ ಏರ್ಪಡುತ್ತಿತ್ತಾದರೂ ಈ ಬಾರಿ ಬಿಜೆಪಿ ಎರಡೂ ಪಕ್ಷಗಳಿಗೆ ಸರಿಸಾಟಿಯಾಗಿ ಸವಾಲೊಡ್ಡುತ್ತಿರುವುದು ಕುಮಾರಸ್ವಾಮಿ-ಡಿ.ಕೆ.ಶಿವಕುಮಾರ್‌ ಅವರನ್ನು ದಿಕ್ಕೆಡಿಸುವಂತೆ ಮಾಡಿದೆ.

ಪಕ್ಷಕ್ಕೆ ದ್ರೋಹವೆಸಗಿ ಕಮಲ ಪಾಳಯ ಸೇರ್ಪಡೆಗೊಂಡ ಕೆ.ಸಿ.ನಾರಾಯಣಗೌಡರ ವಿರುದ್ಧ ಕ್ಷೇತ್ರದೊ ಳಗೆ ಸೃಷ್ಟಿಯಾಗಿದ್ದ ಜನವಿರೋಧಿ ಅಲೆಯನ್ನು ಜೆಡಿ ಎಸ್‌ಗೆ ಅನುಕೂಲಕರವಾಗುವಂತೆ ಬಳಸಿಕೊಳ್ಳುವಲ್ಲಿ ಕುಮಾರಸ್ವಾಮಿ ಎಡವಿದಂತೆ ಕಾಣುತ್ತಿದೆ. ಕ್ಷೇತ್ರದಲ್ಲಿ ಒಕ್ಕಲಿಗರೇ ಹೆಚ್ಚಿನ ಸಂಖ್ಯೆ ಯಲ್ಲಿದ್ದು, ಆ ಓಟ್‌ಬ್ಯಾಂಕ್‌ಗೆ ಬಿಜೆಪಿ ಲಗ್ಗೆ ಇಡದಂತೆ ಎಚ್ಚರ ವಹಿಸುವಲ್ಲೂ ವಿಫ‌ಲರಾಗಿ ದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.

ಲೋಕಸಭಾ ಚುನಾವಣೆ ಸಮಯದಲ್ಲಿ ನಿಖಿಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿ ದ್ದಾಗ ಜಿಲ್ಲೆಯಲ್ಲೇ ಠಿಕಾಣಿ ಹೂಡಿ ಶಾಸಕರೊಟ್ಟಿಗೆ ಸೇರಿ ಕಾರ್ಯತಂತ್ರ ರೂಪಿಸಿದ್ದರು. ಆದರೆ, ಪಕ್ಷಕ್ಕೆ ದ್ರೋಹವೆಸಗಿದ ನಾರಾಯಣಗೌಡರ ವಿರುದ್ಧ ಆರಂಭದಲ್ಲಿ ಜೆಡಿಎಸ್‌ ವರಿಷ್ಠರು ತೋರಿದ ಆವೇಶ, ಆಕ್ರೋಶ ಚುನಾವಣೆ ಸಮೀಪಿಸಿರುವ ಸಮಯದಲ್ಲಿ ತೋರ್ಪಡಿಸದಿರುವುದು ಪಕ್ಷದ ಕಾರ್ಯಕರ್ತರಲ್ಲೂ ಅಸಮಾಧಾನ ಭುಗಿಲೇಳುವಂತೆ ಮಾಡಿದೆ.

ಜಿಲ್ಲೆಯ ಎಲ್ಲ ಶಾಸಕರು, ಮುಖಂಡರು, ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಚುನಾವಣೆಗೆ ರಂಗು ತುಂಬುವುದಕ್ಕೆ ವರಿಷ್ಠರು ಆಸಕ್ತಿ ವಹಿಸುತ್ತಿಲ್ಲ. ವರಿಷ್ಠರ ಅನುಪಸ್ಥಿತಿಯಲ್ಲಿ ಕ್ಷೇತ್ರಕ್ಕೆ ಬರುವುದಕ್ಕೆ ಶಾಸಕರು ಸಿದ್ಧರಿಲ್ಲ. ಜೆಡಿಎಸ್‌ ಅಭ್ಯರ್ಥಿ ಬಿ.ಎಲ್‌.ದೇವರಾಜು ಎಲ್ಲ ಶಾಸಕರನ್ನು ಭೇಟಿ ಮಾಡಿ ಪ್ರಚಾರಕ್ಕೆ ಕರೆತರುವ ಗೋಜಿಗೆ ಹೋಗದೆ ತಮ್ಮ ಕೆಲವೇ ಬೆಂಬಲಿಗರೊಂದಿಗೆ ಅಲ್ಲಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಜೆಡಿಎಸ್‌ ಪಾಳಯದಲ್ಲಿ ನೀರಸ ವಾತಾವರಣ ಮುಂದುವರಿದಿದೆ.

ಇನ್ನು ಕಾಂಗ್ರೆಸ್‌ ಪರಿಸ್ಥಿತಿಯೂ ಜೆಡಿಎಸ್‌ಗಿಂತ ಭಿನ್ನವಾಗೇನೂ ಇಲ್ಲ. ಅಲ್ಲಿಯೂ ರಾಜ್ಯಮಟ್ಟದ ನಾಯಕರು ಬಂದು ಠಿಕಾಣಿ ಹೂಡಿಲ್ಲ. ಉಸ್ತುವಾರಿ ವಹಿಸಿಕೊಂಡಿ ರುವ ಕೆ.ಜೆ.ಜಾರ್ಜ್‌ ಕ್ಷೇತ್ರದಿಂದ ದೂರವೇ ಉಳಿದಿ ದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಮಾಜಿ ಸಚಿವ ರಾದ ಎನ್‌.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರ ಸ್ವಾಮಿ, ಮಾಜಿ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಬಂದು ಹೋಗಿದ್ದಾರಷ್ಟೆ. ಒಲ್ಲದ ಮನಸ್ಸಿನಿಂದಲೇ ಚುನಾವಣಾ ರಣಾಂಗಣ ಪ್ರವೇಶಿಸಿರುವ ಕೆ.ಬಿ.ಚಂದ್ರ ಶೇಖರ್‌ ಚುನಾವಣಾ ಪ್ರಚಾರದ ಕಣದಲ್ಲಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ನಿಂದ ಮುಖಂಡರು- ಕಾರ್ಯಕರ್ತರು ಬಿಜೆಪಿ ಪಾಲಾಗುತ್ತಿದ್ದರೂ ಅದನ್ನು ತಡೆಯುವ ಸಣ್ಣ ಪ್ರಯತ್ನಕ್ಕೂ ಉಭಯ ಪಕ್ಷಗಳ ನಾಯಕರು ಮುಂದಾಗಿಲ್ಲ. ಕ್ಷೇತ್ರಕ್ಕೆ ಆಗಮಿಸಿ ಶಾಸಕರೆಲ್ಲರಿಗೂ ಜವಾಬ್ದಾರಿ ಹಂಚಿ ಕ್ಷೇತ್ರದಲ್ಲೇ ಬೀಡು ಬಿಡುವಂತೆ ಮಾಡುವ ಮುಖಂಡರು- ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ, ಧೈರ್ಯ ತುಂಬುವ ಪ್ರಯತ್ನಕ್ಕೆ ಜೆಡಿಎಸ್‌ ವರಿಷ್ಠರು ಮುಂದಾಗಿಲ್ಲ.

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳು ಬಿಜೆಪಿಗೆ ಪೈಪೋಟಿ ನೀಡಲಾಗದಷ್ಟು ಅಸಮರ್ಥ ರಾದರೇ ಎಂಬ ಅನುಮಾನಗಳೂ ಕ್ಷೇತ್ರದ ಜನರನ್ನು ಕಾಡಲಾರಂಭಿಸಿವೆ. ಉಭಯ ಪಕ್ಷಗಳಿಗೆ ಸಮರ್ಥ ಅಭ್ಯರ್ಥಿ ಸಿಗಲಿಲ್ಲವೇ ಅಥವಾ ಚುನಾವಣೆ ಬಗ್ಗೆ ಎರಡೂ ಪಕ್ಷಗಳ ರಾಜ್ಯ ನಾಯಕರು ನಿರಾಸಕ್ತಿ ವಹಿಸಿ ನಿರ್ಲಕ್ಷ್ಯ ಮಾಡಿದ್ದಾರೆಯೇ ಎಂಬ ಪ್ರಶ್ನೆಗಳೂ ಕಾರ್ಯಕರ್ತರಲ್ಲಿದೆ.

ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಸೋಲಿಗೆ ಹೆಣೆಯಲಾಗಿದ್ದ ಸೂತ್ರವನ್ನೇ ಇಲ್ಲಿಯೂ ರೂಪಿಸ ಲಾಗಿದೆಯೇ ಎಂಬ ಅನುಮಾನಗಳು ಮೇಲೆದ್ದಿವೆ. ಸಂಸದೆ ಸುಮಲತಾ ಕೂಡ ಬಿಜೆಪಿ ಬೆನ್ನಿಗೆ ನಿಂತಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದು, ಬಿಜೆಪಿ ದಿನೇದಿನೆ ಕ್ಷೇತ್ರದಲ್ಲಿ ಬಲ ಹೆಚ್ಚಿಸಿಕೊಳ್ಳುತ್ತಿದೆ.

ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ಕಾರ್ಯತಂತ್ರ ಕೆ.ಆರ್‌.ಪೇಟೆಯಲ್ಲಿ ಎರಡೂ ಪಕ್ಷಗಳಿಗೆ ಅನುಕೂಲಕರವಾಗಿರುವಂತೆ ಕಂಡು ಬಾರದ ಹಿನ್ನೆಲೆಯಲ್ಲಿ ಅವರಿಬ್ಬರೂ ಯಶವಂತಪುರ, ಗೋಕಾಕ್‌, ಹುಣಸೂರು, ಚಿಕ್ಕಬಳ್ಳಾಪುರಗಳಿಗೆ ಅದನ್ನು ಸೀಮಿತಗೊಳಿಸಿಕೊಳ್ಳುವರೇ ನೋಡಬೇಕು.

* ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.