ಮೂಲ್ಕಿ ಕೃಷಿ ಹಬ್ಬಕ್ಕೆ ಸಂಭ್ರಮದ ಚಾಲನೆ: ಗಮನಸೆಳೆದ ವಸ್ತು ಪ್ರದರ್ಶನ, ಕೃಷಿ ಪ್ರಾತ್ಯಕ್ಷಿಕೆ


Team Udayavani, Mar 12, 2022, 4:37 PM IST

ಮೂಲ್ಕಿ ಕೃಷಿ ಹಬ್ಬಕ್ಕೆ ಸಂಭ್ರಮದ ಚಾಲನೆ : ಗಮನಸೆಳೆದ ವಸ್ತು ಪ್ರದರ್ಶನ, ಕೃಷಿ ಪ್ರಾತ್ಯಕ್ಷಿಕೆ

ಮೂಲ್ಕಿ : ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕೊಲಾ°ಡು ಬಳಿಯ ವಿಶಾಲ ಮೈದಾನದಲ್ಲಿ 3 ದಿನಗಳ ಕಾಲ ನಡೆಯುವ ರಾಜ್ಯ ಮಟ್ಟದ ಬೃಹತ್‌ ಕೃಷಿ ಮೇಳ ಕೃಷಿಸಿರಿ -2022ಕ್ಕೆ ಶುಕ್ರವಾರ ಅದ್ದೂರಿ ಚಾಲನೆ ದೊರೆಯಿತು.

ಸಮ್ಮೇಳನದ ಅಂಗವಾಗಿ ರಾಷ್ಟ್ರೀಯ ಹೆದ್ದಾರಿ ಬಳಿಯ ಮೈದಾನದಲ್ಲಿ ವಿಶಾಲವಾದ ವೇದಿಕೆ ನಿರ್ಮಿಸಲಾಗಿದ್ದು, ರಾಜ್ಯದ ನಾನಾ ಭಾಗಗಳಿಂದ ಕೃಷಿಕರು, ಆಸಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.

ಎಂ.ಆರ್‌. ಪೂಂಜ ವೇದಿಕೆಯಲ್ಲಿ ಆರಂಭಗೊಂಡ ಕೃಷಿ ಮೇಳಕ್ಕೆ ಮೂಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ದೀಪ ಬೆಳಗಿಸಿ ಚಾಲನೆ ನೀಡಿ ದರು. ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥರು ಸ್ವಾಮೀಜಿ ಅವರು ಪಂಜುರ್ಲಿ ಚಾವಡಿಯಲ್ಲಿ ಉದ್ಘಾಟಿಸಿದರು. ಬಳಿಕ ಅವರು ಗೋಪೂಜೆ ನೆರವೇರಿಸಿ, ಮಳಿಗೆ, ವಸ್ತು ಪ್ರದರ್ಶನ, ಕೃಷಿ ಪ್ರಾತ್ಯಕ್ಷಿಕೆ ನಡೆ ಯುವಲ್ಲಿ ಭೇಟಿ ನೀಡಿ ವೀಕ್ಷಿಸಿದರು.

ಟ್ರಾಫಿಕ್‌ ನಿರ್ವಹಣೆ
ಹೆದ್ದಾರಿ ಬದಿಯಲ್ಲಿ ರಾಜ್ಯ ಸಮ್ಮೇಳನ ಆಯೋಜನೆ ಗೊಂಡಿದ್ದರಿಂದಾಗಿ ಟ್ರಾಫಿಕ್‌ ನಿರ್ವ ಹಣೆ ಸವಾಲಾಗಿದ್ದರೂ ಇದನ್ನು ಮೂಲ್ಕಿ ಪೊಲೀಸ್‌ ಠಾಣೆಯ ಉಸ್ತುವಾರಿ ಯಲ್ಲಿ ಉತ್ತಮವಾಗಿ ನಿರ್ವಹಿಸ ಲಾ ಗಿದೆ. ವಿವಿಧ ಕಾಲೇಜಿನ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ವಿದ್ಯಾರ್ಥಿಗಳು ಇದಕ್ಕೆ ಸಹಕರಿಸಿದ್ದಾರೆ. ಎಲ್ಲ ವ್ಯವಸ್ಥೆಗಳು ಅಚ್ಚುಕಟ್ಟಾಗಿದ್ದು ಶುಕ್ರವಾರ ಸುಮಾರು 5,000ಕ್ಕೂ ಅಧಿಕ ಮಂದಿ ಸಮ್ಮೇಳನಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ : ಸಾಂಸ್ಕೃತಿಕ ಲೋಕವೇ ಧರೆಗಿಳಿದಿದೆ ಇಲ್ಲಿ ! ನಾಡಿನ ಗಮನ ಸೆಳೆಯುತ್ತಿದೆ ಕಾರ್ಕಳ ಉತ್ಸವ

ಗಮನ ಸೆಳೆದ ಪಾರಂಪರಿಕ ಗ್ರಾಮ
ಮಂಗಳೂರು ವಿ.ವಿ.ಯಿಂದ ಪ್ರಾಯೋಜಿತಗೊಂಡ ಪಾರಂಪರಿಕ ಗ್ರಾಮ, ವಸ್ತುಗಳ ಮಳಿಗೆ ಸಮ್ಮೇಳನದಲ್ಲಿ ವಿಶೇಷ ಆಕರ್ಷಣೆ ಪಡೆಯಿತು. ಗ್ರಾಮೀಣ ಜನರ ನಿತ್ಯ ಬದುಕು, ಕಸಬು ನಡೆಸುವ ಬಗೆಯನ್ನು ಇಲ್ಲಿ ತೋರಿಸಲಾಗಿದೆ. ಮಂಗನಿಗೆ ಕಲ್ಲು ಹೊಡೆಯುವ ಕೋವಿಯಿಂದ ಹಿಡಿದು, ಎತ್ತರದ ಮರಗಳಿಂದ ಹಣ್ಣು ಕೊಯ್ಯುವ ಸಾಧನಗಳು, ಕತ್ತಿ, ಬುಟ್ಟಿ ಮತ್ತು ಹಲವು ಪರಿಕರ ಗಳು, ಹೊಸ ಅವಿಷ್ಕಾರದ ವಿವಿಧ ಕೃಷಿ ಬಳಕೆಯ ಸಾಧನಗಳು ಪ್ರದರ್ಶನಗಳು ಸಮ್ಮೇಳನದಲ್ಲಿ ಆಕಷಣೀ ಯವಾ ಗಿದ್ದವು. ಹೆದ್ದಾರಿಯ ಎರಡು ಬದಿಯಲ್ಲಿ ಮೇಳದ ವೇದಿಕೆ ಮತ್ತು ಸ್ಟಾಲ್‌ಗ‌ಳ ವ್ಯವಸ್ಥೆ ಮೂಡು ದಿಕ್ಕಿನಲ್ಲಿ ಮಾಡಲಾಗಿದೆ. ಪಶ್ಚಿಮ ದಿಕ್ಕಿನಲ್ಲಿ ವಿವಿಧ ಮನೋರಂಜನೆಯ ಆಟದ ಪರಿಕರಗಳನ್ನು ಇಡಲಾಗಿದೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.