ಹಣಕೊಟ್ಟು ಆಮ್ಲಜನಕ ಖರೀದಿಸುವ ದುಃಸ್ಥಿತಿ ಬೇಡ
ಕೃಷಿ ಮೇಳ ಸಮಾರೋಪ, ಸಾಧಕರಿಗೆ ಸಮ್ಮಾನ ಸಮಾರಂಭದಲ್ಲಿ ಭಟ್ಟಾರಕ ಸ್ವಾಮೀಜಿ
Team Udayavani, Mar 14, 2022, 6:35 AM IST
ಮೂಲ್ಕಿ : 15ನೇ ಶತಮಾನಕ್ಕೂ ಮೊದಲೇ ಜಗತ್ತಿನ ವಿವಿಧ ಕಡೆಗೆ ಇಲ್ಲಿನ ಸಂಬಾರ ಪದಾರ್ಥ, ಉಪ್ಪು, ಗಂಧಸಾಲೆ ಅಕ್ಕಿ ರವಾನೆಯಾಗುತ್ತಿತ್ತು. ಇದು ದಕ್ಷಿಣ ಕನ್ನಡ ಜಿಲ್ಲೆಯ ಸಾಧನೆ. ನಮಗೆ ಉಸಿರಾಡಲು ಆಮ್ಲಜನಕ ಬೇಕು. ಆದರೆ ಇಂದು ಹಣಕೊಟ್ಟು ಅದನ್ನು ಖರೀದಿಸಬೇಕಾದ ಪರಿಸ್ಥಿತಿ ಬಂದಿದೆ ಎಂದು ಮೂಡುಬಿದಿರೆ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಹೇಳಿದರು.
ಅವರು ರವಿವಾರ ಮೂಲ್ಕಿ ಕೊಲಾ°ಡಿನಲ್ಲಿ ನಡೆದ ರಾಜ್ಯ ಮಟ್ಟದ ಕೃಷಿ ಮೇಳ “ಕೃಷಿ ಸಿರಿ-2022’ರ ಸಮಾರೋಪದಲ್ಲಿ ಮಾತನಾಡಿ, ಮಕ್ಕಳಿಗೆ ಕೃಷಿಯ ಬಗ್ಗೆ ಪ್ರೇರಣೆ ನೀಡಬೇಕು ಮತ್ತು ಕೃಷಿಬದುಕನ್ನು ಪರಿಚಯಿಸಬೇಕು. ಕೃಷಿಯಲ್ಲಿ ಲಾಭ ಕಡಿಮೆ. ಆದರೆ ಅರೋಗ್ಯ ಖಂಡಿತ ಇದೆ ಎಂದರು.
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ಸಿರಿ ಎಂದರೆ ತುಳುವಿ ನಲ್ಲಿ ಪೊಲಿ ಎಂಬ ಅರ್ಥವಿದೆ. ಕೃಷಿ ಮತ್ತು ಋಷಿ ಜತೆಯಾಗಿ ಸಾಗಿದಾಗ ಮಾತ್ರ ರಾಷ್ಟ್ರ ಉದ್ಧಾರವಾಗುವುದು. ರಾಸಾಯನಿಕ ಮುಕ್ತ ಕೃಷಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.
ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಮೇಳದ ಠರಾವನ್ನು ಮೇಳದ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಅವರು ಶಾಸಕ ಕೋಟ್ಯಾನ್ ಅವರ ಮೂಲಕ ಸರಕಾರಕ್ಕೆ ಸಲ್ಲಿಸಿದರು.
ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕೆ. ಭುವನಾಭಿರಾಮ ಉಡುಪ, ಉದ್ಯಮಿ ಸುರೇಶ ರೈ, ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳದಾನಿ ಫ್ರಾನ್ಸಿಸ್ ಪೀಟರ್, ಮೂಲ್ಕಿ ಸೀಮೆ ಅರಮನೆಯ ದುಗ್ಗಣ್ಣ ಸಾವಂತರು, ಕೃಷಿಮೇಳದ ಗೌರವಾಧ್ಯಕ್ಷ ಜಿ. ಆರ್. ಪ್ರಸಾದ್, ಅಧ್ಯಕ್ಷ ವಿಜಯ ಶೆಟ್ಟಿ ಕೊಲಾ°ಡು, ಲಯನ್ಸ್ ಮಾಜಿ ಗವರ್ನರ್ ದೇವದಾಸ ಭಂಡಾರಿ, ಬಿಜೆಪಿ ಮುಖಂಡ ಜಗದೀಶ್ ಶೇಣವ, ಪೂಜಾ ಪೈ, ಮೇಳದ ಜತೆ ಕೋಶಾಧಿಕಾರಿ ಸಂತೋಷ್ ಹೆಗ್ಡೆ, ಜತೆ ಕಾರ್ಯದರ್ಶಿಗಳಾದ ಸೋಮಪ್ಪ ನಾಯ್ಕ, ಚಂದ್ರಹಾಸ್ ಕುಂದರ್, ಸಂಚಾಲಕ ಡಾ| ಅಣ್ಣಯ್ಯ ಕುಲಾಲ್ ಉಳೂ¤ರು ಉಪಸ್ಥಿತರಿದ್ದರು.
ಕೃಷಿ ಮೇಳದ ಉಸ್ತುವಾರಿ ಸಮಿತಿ ಸದಸ್ಯ ಮಹಿಮ್ ಹೆಗ್ಡೆ ಸ್ವಾಗತಿಸಿದರು. ಕೋಶಾಧಿಕಾರಿ ಜಗದೀಶ್ ಪೈ ಪ್ರಸ್ತಾವನೆಗೈದರು. ರಾಮಚಂದ್ರ ನಾಯಕ್ ವಂದಿಸಿದರು. ಆರ್.ಜೆ. ಅಭಿಷೇಕ್ ಕಾರ್ಯಕ್ರಮ ನಿರೂಪಿಸಿದರು.
ಠರಾವು ಮುಖ್ಯಾಂಶಗಳು
1. ಅವಸಾನದಂಚಿಗೆ ಸಾಗುತ್ತಿರುವ ಕೃಷಿ ಪುನಶ್ಚೇತನಕ್ಕೆ ಸರಕಾರ ಇನ್ನಷ್ಟು ಕ್ರಾಂತಿಕಾರಿ ಹೆಜ್ಜೆಗಳನ್ನು ಇಡಬೇಕು, ಅವಿಭಜಿತ ದ.ಕ. ಜಿಲ್ಲೆಯ ರೈತರ ಭತ್ತದ ಬೆಳೆಗೆ ಬೆಂಬಲ ಬೆಲೆ ನೀಡಬೇಕು.
2. ಸರಕಾರವು ರೈತರು ಮತ್ತು ಗ್ರಾಹಕರ ನಡುವಿನ ಮಧ್ಯವರ್ತಿಗಳ ಕಾಟವನ್ನು ತಪ್ಪಿಸಿ ಬೆಳೆಗೆ ಸೂಕ್ತ ಮೌಲ್ಯವನ್ನು ನೇರವಾಗಿ ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು.
3. ರೈತರು ಸೌಲಭ್ಯಗಳನ್ನು ಸುಲಭದಲ್ಲಿ ಪಡೆಯಲು ಈಗಿರುವ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡಬೇಕು, ವಿಶೇಷವಾಗಿ ಅವಿಭಜಿತ ದ.ಕ. ಜಿಲ್ಲೆಯ ರೈತರ ಪಹಣಿ ಪತ್ರವನ್ನು ಸರಳಗೊಳಿಸಿ ಸೂಕ್ತ ಪರಿಹಾರ ಒದಗಿಸಿಕೊಡಬೇಕು.
4. ರೈತರ ಜಮೀನಿಗೆ ಭೇಟಿ ನೀಡಿ ಬೆಳೆಯ ಸಮೀಕ್ಷೆ ಮಾಡಬೇಕು ಮತ್ತು ಸರಕಾರದ ಸವಲತ್ತು ನೀಡಲು ವ್ಯವಸ್ಥೆ ಮಾಡಬೇಕು.
5. ಹೈನುಗಾರಿಕೆಗೆ ಉತ್ತೇಜನ ನಿಟ್ಟಿನಲ್ಲಿ ಹಾಲಿಗೆ ಬೆಂಬಲ ಬೆಲೆಯನ್ನು ಕನಿಷ್ಠ 3 ರೂಪಾಯಿಗಳಿಗೆ ಹೆಚ್ಚಿಸಬೇಕು.
6. ಅವಿಭಜಿತ ದ.ಕ. ಜಿಲ್ಲೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ಮೂಲ್ಕಿ ಕೊಲಾ°ಡಿನಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಆವಿಷ್ಕಾರ ಅಧ್ಯಯನವನ್ನು ನಡೆಸಲು ಅನುಕೂಲವಾಗುವಂತೆ ಕೃಷಿ ವಿಶ್ವದ್ಯಾನಿಲಯವನ್ನು ಸ್ಥಾಪಿಸಬೇಕು.
7. ಕೃಷಿ ಮತ್ತು ಮತೊÕ$Âàದ್ಯಮಕ್ಕೆ ಅನುಕೂಲ ಆಗುವಂತೆ ಮೌಲ್ಯವರ್ಧಿತ ಉತ್ಪಾದಕ ಘಟಕಗಳನ್ನು ಅವಿಭಜಿತ ದ.ಕ. ಜಿಲ್ಲೆಯಲ್ಲಿ ಹೆಚ್ಚು ಸ್ಥಾಪಿಸಬೇಕು.
8. ಸಾವಯವ ಕೃಷಿಗೆ ಇನ್ನಷ್ಟು ಪ್ರಯೋಜನ ನೀಡುವುದು ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುವಂತೆ ಪ್ರೇರೇಪಿಸಬೇಕು.
ಸಾಧಕರಿಗೆ ಸಮ್ಮಾನ
ಕೃಷಿಯಲ್ಲಿ ಆವಿಷ್ಕಾರ ಮಾಡಿರುವ ಜನಾರ್ದನ ಗೌಡ ಮೂಡುಬಿದಿರೆ, ಬಿ.ಕೆ. ದೇವರಾಯ ರಾವ್ ಬೆಳ್ತಂಗಡಿ, ಜೇನು ಕೃಷಿಯಲ್ಲಿ ಸಾಧನೆ ಮಾಡಿರುವ ಬಸವನ ಬಾಗೇವಾಡಿಯ ಮಹಾಂತೇಶ್ ಎನ್. ಚೌಧರಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಚಿಕ್ಕಬಳ್ಳಾಪುರದ ಎಸ್.ಆರ್.ಎಸ್. ದೇವರಾಜ್, ಬೆಳ್ತಂಗಡಿಯ ವಿಠಲ ಶೆಟ್ಟಿ ತಾರೆಮಾರು ಅವರನ್ನು ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್