ಕೃಷ್ಣಾ ನದಿಗೆ 2.83 ಲಕ್ಷ ಕ್ಯೂಸೆಕ್‌ ನೀರು ಬಿಡುಗಡೆ : ನದಿ ಮಾರ್ಗದ ಸೇತುವೆಗಳು ಜಲಾವೃತ


Team Udayavani, Aug 20, 2020, 1:51 PM IST

ಕೃಷ್ಣಾ ನದಿಗೆ 2.83 ಲಕ್ಷ ಕ್ಯೂಸೆಕ್‌ ನೀರು ಬಿಡುಗಡೆ : ನದಿ ಮಾರ್ಗದ ಸೇತುವೆಗಳು ಜಲಾವೃತ

ನಾರಾಯಣಪುರ: ಆಲಮಟ್ಟಿ ಶಾಸ್ತ್ರಿ ಜಲಾಶಯ ಹಾಗೂ ಮಲಪ್ರಭಾ ನದಿಯಿಂದ ಒಟ್ಟು 2.70 ಲಕ್ಷ ಕ್ಯೂಸೆಕ್‌ ನಷ್ಟು ಬಸವಸಾಗರಕ್ಕೆ ಒಳಹರಿವು ಇದ್ದು, ಬುಧವಾರ ಜಲಾಶಯದ 28 ಕ್ರಸ್ಟಗೇಟ್‌ ಗಳನ್ನು ತೆರೆದು 2.83 ಲಕ್ಷ ಕ್ಯೂಸೆಕ್‌ನಷ್ಟು
ಭಾರೀ ಪ್ರಮಾಣದ ನೀರನ್ನು ಕೃಷ್ಣಾ ನದಿ ಹರಿಬಿಡಲಾಗುತ್ತಿದೆ. ಕಳೆದ ಅ.6ರಿಂದಲೂ ಬಸವಸಾಗರದಿಂದ ನಿರಂತರವಾಗಿ
ನದಿಗೆ ಗರಿಷ್ಠ ಪ್ರಮಾಣದ ನೀರು ಬಿಡುಗಡೆ ಮಾಡುತ್ತಿರುವುದರಿಂದ ನದಿ ತೀರದ ಗ್ರಾಮಗಳಿಗೆ ಪ್ರಹಾದ ಬೀತಿ ಉಂಟಾಗಿದ್ದು ನದಿ ಮಾರ್ಗವಾಗಿ ಬರುವ ಸೇತುವೆಗಳು ಜಲಾವೃತವಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಅಣೆಕಟ್ಟು ಅಧಿಕಾರಿಗಳ ಮಾಹಿತಿಯಂತೆ ಪ್ರಸ್ತುತ ಜಲಾಶಯಕ್ಕೆ ಎಷ್ಟು ಒಳಹರಿವಿನ ಪ್ರಮಾಣವಿದೆಯೋ ಅಷ್ಟೆ ಪ್ರಮಾಣದ ಹೊರಹರಿವನ್ನು ನದಿಗೆ ಹರಿಬಿಡಲಾಗುತ್ತಿದೆ. ಕೃಷ್ಣಾ ನದಿ ಹಾಗೂ ಉಪನದಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹಂತ ಹಂತವಾಗಿ ಏರಿಕೆ ಕಂಡು ಬರುತಿದ್ದು, ಸದ್ಯ ಆಲಮಟ್ಟಿ ಶಾಸ್ತ್ರೀ ಜಲಾಶಯಕ್ಕೆ 2.37 ಲಕ್ಷ ಕ್ಯೂಸೆಕ್‌ ನಷ್ಟು ಒಳಹರಿವು ಹರಿದು ಬರುತ್ತಿದೆ.

ಹೊರ ಹರಿವು (ಬಸವಸಾಗರಕ್ಕೆ) 2.50 ಲಕ್ಷ ಕ್ಯೂಸೆಕ್‌ ಇದೆ ಎಂದು ತಿಳಿದುಬಂದಿದೆ. ಬುಧವಾರ ಸಂಜೆ 6 ಗಂಟೆಯ
ಮಾಹಿತಿಯಂತೆ ಬಸವಸಾಗರ ಜಲಾಶಯ ಗರಿಷ್ಠ ಮಟ್ಟದಲ್ಲಿ 489.86 ಮೀಟರ್‌ಗೆ ನೀರು ಬಂದು ತಲುಪಿದ್ದು, 23.49 ಟಿಎಂಸಿ ಅಡಿ ನೀರು ಸಂಗ್ರಹವಿದೆ ಎಂದು ತಿಳಿದು ಬಂದಿದೆ.

ಜಲಾಶಯದಲ್ಲೆ ಬೀಡು ಬಿಟ್ಟ ಅಧಿಕಾರಿಗಳು: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನದಿಗಳಿಗೆ ಅಡ್ಡಲಾಗಿ
ನಿರ್ಮಿಸಲಾದ ಅಣೆಕಟ್ಟುಗಳಲ್ಲಿ ಕರ್ತವ್ಯ ನಿರ್ವಹಿಸುವುದು ಅ ಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ. ಹಿರಿಯ,
ಕಿರಿಯ ಅ ಧಿಕಾರಿಗಳು ಅಣೆಕಟ್ಟಿನಲ್ಲೆ ಬೀಡು ಬಿಟ್ಟಿದ್ದಾರೆ. ಇಲ್ಲಿನ ಬಸವಸಾಗರ ಜಲಾಶಯಕ್ಕೆ ದಿನದ 24 ಗಂಟೆಯೂ
ಸತತ ಒಳಹರಿವು ಹರಿದು ಬರುತ್ತಿದೆ. ಆ ನೀರನ್ನು ಜಲಾಶಯದ ಕ್ರಸ್ಟಗೇಟ್‌ಗಳ ಮೂಲಕ ನದಿಗೆ ಹರಿಬಿಡುವ ಪ್ರಕ್ರಿಯೆ
ನಿರಂತರ ನಡೆಯುತ್ತಿದೆ. ಇದನ್ನು ಸಮರ್ಥವಾಗಿ ನಿಭಾಯಿಸಲೆಂದು ಕೃಷ್ಣಾ ಭಾಗ್ಯ ಜಲ ನಿಗಮವು ದಿನದ  24 ಗಂಟೆಗಳಲ್ಲಿ 12 ಗಂಟೆಗಳಿಗೆ 2 ಪಾಳೆಯದಲ್ಲಿ ಅಭಿಯಂತರರು ಇತರೆ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಹಗಲು ರಾತ್ರಿ ಎನ್ನದೆ ಪ್ರವಾಹದ ನಿರ್ವಹಣೆ ಕಾರ್ಯ ನಿಭಾಯಿಸುತ್ತಿದ್ದಾರೆ.

ಪ್ರವಾಹದ ಮುನ್ಸೂಚನೆ ವಿನಮಯಕ್ಕೆ ವಾಟ್ಸ್‌ ಆ್ಯಫ್‌ ಗ್ರೂಪ್‌ ರಚಿಸಿಕೊಂಡಿದ್ದು, ಉಭಯ ಜಲಾಶಯಗಳ ಕೆಬಿಜೆಎನ್‌
ಎಲ್‌ ಹಿರಿಯ ಅಧಿಕಾರಿಗಳು, ಯಾದಗಿರಿ, ರಾಯಚೂರು ಜಿಲ್ಲಾಡಳಿತ, ಪೊಲೀಸ್‌, ಕಂದಾಯ ಇಲಾಖೆ, ಇತರೆ
ಇಲಾಖೆಗಳ ಹಿರಿಯ ಅಧಿಕಾರಿಗಳು ಗ್ರೂಪ್‌ ಸದಸ್ಯರಿದ್ದಾರೆ. ಅವರಿಗೆ ಪ್ರತಿ ಗಂಟೆಗೊಮ್ಮೆ ನದಿಗೆ ನೀರು ಹರಿಸುವ
ಸಂದೇಶ ತಲುಪಿಸಲಾಗುತ್ತಿದೆ ಎಂದು ಅಣೆಕಟ್ಟು ಉಪ ವಿಭಾಗದ ಎಇಇಟಿ.ಎನ್‌. ರಾಮಚಂದ್ರ ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.