ಕೃತ್ಯ: ಎರಡನೇ ಬಾರಿ ನಾಯಕನಾಗಿ ಆಸ್ಕರ್ ಕೃಷ್ಣ
Team Udayavani, Mar 23, 2022, 11:18 AM IST
“ಕೃತ್ಯ’- ಹೀಗೊಂದು ಚಿತ್ರ ತಯಾರಾಗುತ್ತಿದೆ. ಈ ಹಿಂದೆ “ಆಸ್ಕರ್’, “ಮಿಸ್ ಮಲ್ಲಿಗೆ’, “ಮೋನಿಕಾ ಈಸ್ ಮಿಸ್ಸಿಂಗ್’, “ಮನಸಿನ ಮರೆಯಲಿ’ ಹಾಗೂ ಇತ್ತೀಚಿಗೆ ಬಿಡುಗಡೆಯಾಗಿರುವ “ಚಡ್ಡಿ ದೋಸ್ತ್ ಕಡ್ಡಿ ಅಲ್ಲಾಡುಸ್ ಬಿಟ್ಟ’ ಚಿತ್ರಗಳನ್ನು ನಿರ್ದೇಶಿಸಿರುವ ಆಸ್ಕರ್ ಕೃಷ್ಣ ಈಗ “ಕೃತ್ಯ’ ಎನ್ನುವ ಸಿನಿಮಾಕ್ಕೆ ನಿರ್ದೇಶನ, ನಿರ್ಮಾಣ ಮಾಡುವ ಜತೆಗೆ ಎರಡನೇ ಬಾರಿ ನಾಯಕನಾಗಿ ನಟಿಸುತ್ತಿದ್ದಾರೆ.
ಇತ್ತೀಚೆಗೆ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು, ನಟ ಶ್ರೀಮುರಳಿ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಗೌತಮ್ ರಾಮಚಂದ್ರ ಎಂಬುವವರು ಈ ಚಿತ್ರದ ಮೂಲಕ ಸಹ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆಸ್ಕರ್ ಕೃಷ್ಣರೊಂದಿಗೆ ಹಲವು ವರ್ಷಗಳಿಂದ ಒಡನಾಟದಲ್ಲಿರುವ ಇವರು ಸಾಫ್ಟ್ವೇರ್ ಉದ್ಯೋಗಿ. ಸಿನಿಮಾ ಮೇಲಿನ ಪ್ರೀತಿಯಿಂದಾಗಿ ಇವರ ಜೊತೆ ಸೇರಿಕೊಂಡು ಬಂಡವಾಳ ಹೂಡುತ್ತಿದ್ದು, ಮುಂದೆ ಕನ್ನಡ ಚಿತ್ರರಂಗದಲ್ಲಿ ಹಲವಾರು ಪ್ರಯೋಗಾತ್ಮಕ ಚಿತ್ರಗಳನ್ನು ನಿರ್ಮಿಸುವ ಬಯಕೆ ಹೊಂದಿದ್ದಾರಂತೆ. ಚಿತ್ರದ ನಾಯಕಿ, ತಾರಗಣ ಮತ್ತು ತಂತ್ರಜ್ಞರು ಇನ್ನಷ್ಟೇ ಆಯ್ಕೆಯಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!