ಬಿಜೆಪಿ 8ಕ್ಕೂ ಹೆಚ್ಚು ಸ್ಥಾನ ಗೆದ್ದರೆ ಸಿದ್ದು ವಿಪಕ್ಷ ಸ್ಥಾನಕ್ಕೆ ರಾಜಿನಾಮೆ ಕೊಡ್ತಾರಾ ?

ಸಿದ್ದರಾಮಯ್ಯ ಹೇಳಿದ್ದಲ್ಲವೂ ಉಲ್ಟಾ ಆಗಿವೆ

Team Udayavani, Nov 26, 2019, 6:15 PM IST

eshwarappa

ಕೊಪ್ಪಳ: ಬಿಜೆಪಿ 8ಸ್ಥಾನ ಗೆಲ್ಲದಿದ್ದರೆ ಅಧಿಕಾರ ಕಳೆದುಕೊಳ್ಳಲಿದೆ, ಸಿಎಂ ಯಡಿಯೂರಪ್ಪ ರಾಜಿನಾಮೆ ಕೊಡ್ತಾರೆ ಎಂದು ಹೇಳಿರುವ ಸಿದ್ದರಾಮಯ್ಯ,  8ಕ್ಕೂ ಹೆಚ್ಚು ಸ್ಥಾನ ನಾವು ಗೆದ್ದರೆ ತಮ್ಮ ವಿಪಕ್ಷ ಸ್ಥಾನಕ್ಕೆ ರಾಜಿನಾಮೆ ಕೊಡ್ತಾರಾ ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪ್ರತಿ ಸವಾಲ್ ಹಾಕಿದರು.

ಕೊಪ್ಪಳದ ಮುನಿರಾಬಾದ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಈ ಹಿಂದೆ ಸಿದ್ದರಾಮಯ್ಯ ಅವರು ಹೇಳಿದ್ದೆಲ್ಲವೂ ಉಲ್ಟಾ ಆಗಿದೆ. ಮೋದಿ ಮತ್ತೆ ಪ್ರಧಾನಿ ಆಗಲ್ಲ , ಬಿಜೆಪಿ ಅಧಿಕಾರಕ್ಕೆ ಬರಲ್ಲ , ಯಡಿಯೂರಪ್ಪ ಸಿಎಂ ಆಗಲ್ಲ , ಕುಮಾರಸ್ವಾಮಿ ಅವರಪ್ಪನಾಣೆ ಸಿಎಂ ಆಗಲ್ಲ ಎಂದಿದ್ರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 2 ಸೀಟೂ ಗೆಲ್ಲಲ್ಲ ಎಂದಿದ್ರು 25 ಸ್ಥಾನ ಬಂದವು. ನಾನು ಮತ್ತೆ ಸಿಎಂ ಆಗ್ತೇನೆ ಎಂದಿದ್ರು, 37 ಸಾವಿರ ಓಟಿನಲ್ಲಿ ಸೋತರು. ಹೀಗೆ ಅವರು ಹೇಳಿದ್ದೆಲ್ಲವೂ ಉಲ್ಟಾ ಆಗಿದೆ. ಈಗ ಬಿಜೆಪಿ 8 ಸ್ಥಾನಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲ್ಲ ಎಂದೆನ್ನುತ್ತಿದ್ದಾರೆ. 8 ಸ್ಥಾನಗಳನ್ನು ಗೆಲ್ಲಲಾಗದಿದ್ದರೆ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಡ್ತಾರಾ ಎಂದು ಸವಾಲ್ ಹಾಕಿದ್ದಾರೆ. ಒಂದು ವೇಳೆ 8ಕ್ಕೂ ಹೆಚ್ಚು ಸ್ಥಾನ ಬಿಜೆಪಿ ಗೆದ್ದರೆ ಸಿದ್ದರಾಮಯ್ಯ ಅವರು ವಿಪಕ್ಷ ಸ್ಥಾನಕ್ಕೆ ರಾಜಿನಾಮೆ ಕೊಡ್ತಾರಾ ಎಂದು ತಿರುಗೇಟಿನ ಮೂಲಕ ಪ್ರತಿ ಸವಾಲ್ ಹಾಕಿದರು.

ಇನ್ನೂ ಉಪ ಚುನಾವಣೆಯಲ್ಲಿ ಬಿಜೆಪಿ ಇಂತಿಷ್ಟೇ ಸ್ಥಾನ ಗೆಲ್ಲಲಿವೆ ಎನ್ನುವುದಕ್ಕಿಂತ ಹೆಚ್ಚಿನ ಸ್ಥಾನವನ್ನು ನಾವು ಗೆಲ್ಲಲಿದ್ದೇವೆ. 17 ಶಾಸಕರು ನಮ್ಮನ್ನು ನಂಬಿ ಬಂದಿದ್ದಾರೆ. 15 ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದರಲ್ಲದೇ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಅನರ್ಹ ಶಾಸಕರನ್ನು ಸೋಲಿಸುವುದೇ ನಮ್ಮ ಕೆಲಸ ಎಂದುಕೊಂಡು ಸುತ್ತುತ್ತಿದ್ದಾರೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ತನ್ನ ಅಪ್ಪ ಹಾಗೂ ಮಗನನ್ನೆ ಗೆಲ್ಲಿಸಿಕೊಳ್ಳಲು ಅವರಿಂದ ಸಾಧ್ಯವಾಗಲಿಲ್ಲ. ಅಂತವರು ಅನರ್ಹ ಶಾಸಕರನ್ನು ಹೇಗೆ ಸೋಲಿಸುತ್ತಾರೆ. ರಾಜಕಾರಣದಲ್ಲಿ ಶಕ್ತಿ ಇಲ್ಲದವರು ಹೀಗೆಲ್ಲ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದರು.

ಮಹಾರಾಷ್ಟ್ರ ರಾಜಕಾರಣದ ಬೆಳವಣಿಗೆಯಲ್ಲಿ ಅತಂತ್ರ ಸ್ಥಿತಿ ಬಂದಿದೆ. ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಜೊತೆ ಶಿವಸೇನೆ ಸೇರಿತ್ತು. ಆದರೆ ಚುನಾವಣೆ ಬಳಿಕ ಶಿವಸೇನೆ ಕಾಂಗ್ರೆಸ್, ಎನ್‌ಸಿಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಶುರು ಮಾಡಿತು. ಕಾಂಗ್ರೆಸ್ ಹಿಂದುಗಳ ಪಕ್ಷದ ಜೊತೆ ನಾವು ಮೈತ್ರಿ ಮಾಡಿಕೊಳ್ಳಲ್ಲ ಎಂದಿತ್ತು. ಈಗ ಅವರೊಟ್ಟಿಗೆ ಮೈತ್ರಿಗೆ ಹೊರಟಿದೆ. ಈ ಹಿಂದೆ ಇದ್ದ ಕಾಂಗ್ರೆಸ್ ಈಗಿಲ್ಲ. ಈಗ ಸೋನಿಯಾ ಗಾಂಧಿ ಕಾಲದ ಕಾಂಗ್ರೆಸ್ ಆಗಿದೆ. ಈಗ ಕಾಂಗ್ರೆಸ್ ಅವಕಾಶವಾದಿ ರಾಜಕಾರಣ ಮಾಡಲು ಹೊರಟಿದೆ.

ಪೂರ್ಣ ಬಹುಮತ ಮಹಾರಾಷ್ಟ್ರದಲ್ಲಿ ನಮಗಿಲ್ಲ. ಎನ್‌ಸಿಪಿ ನಮ್ಮೊಟ್ಟಿಗೆ ಬರತ್ತದೆ ಎಂಬ ವಿಶ್ವಾಸವಿತ್ತು. ಈಗ ನಮ್ಮೊಟ್ಟಿಗೆ ಬರಲ್ಲ ಎಂದರೆ ಏನ್ ಮಾಡೋಕಾಗುತ್ತೆ ನಮ್ಮಷ್ಟಕ್ಕೆ ನಾವು ಇರುತ್ತೇವೆ ಎಂದರು.

ಇನ್ನು ರಾಜಕಾರಣವೇ ಗೊಂದಲವಾಗಿರುತ್ತದೆ. ಯಾವ ಪಕ್ಷದಲ್ಲಿ ಗೊಂದಲ ಇಲ್ಲ. ಕೆಲವೊಂದು ಕ್ಷೇತ್ರಗಳಲ್ಲಿ ಗೊಂದಲ ಇವೆ. ಒಂದು ಕುಟುಂಬ ಅಂದರೆ ಗೊಂದಲ ಇರುತ್ತೆ ಅಲ್ವಾ. ಹಾಗೆ ಕೆಲವೊಂದು ಕ್ಷೇತ್ರದಲ್ಲಿ ಗೊಂದಲ ಇವೆ. ಅವೆಲ್ಲವನ್ನು ಸರಿ ಮಾಡುವ ಕೆಲಸ ಮಾಡಿದ್ದೇವೆ. ಈ ಹಿಂದೆ ಬಿಜೆಪಿ, ಜನ ಸಂಘ ಅಂದರೆ ಅಭ್ಯರ್ಥಿಗಳೇ ಸ್ಪರ್ಧೆಗೆ ಮುಂದಾಗುತ್ತಿರಲಿಲ್ಲ. ಠೇವಣಿ ಹೋಗುತ್ತೆ ಎಂದು ಬರುತ್ತಿರಲಿಲ್ಲ. ಈಗ ಆಕಾಂಕ್ಷಿಗಳು ತುಂಬ ಜನ ಇದ್ದಾರೆ ನಮ್ಮದು ಗೆಲ್ಲುವಂತ ಪಕ್ಷ ಎಂದರು.

ಬಿಜೆಪಿಗೆ ಬಹುಮತ ಬಂದರೂ ಜೆಡಿಎಸ್ ಬೆಂಬಲ ನೀಡಿದ್ರೆ ನಾವು ಬೇಡ ಅನ್ನಲ್ಲ. ಕೇಂದ್ರದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಇದೆ. ಆದರೂ ಕೆಲವು ಮಿತ್ರ ಪಕ್ಷಗಳು ನಮ್ಮೊಟ್ಟಿಗೆ ಇವೆಯಲ್ಲ. ಬಿಜೆಪಿಗೆ ಕಾಂಗ್ರೆಸ್ ಹೊರತುಪಡಿಸಿ ಯಾವುದೇ ಪಕ್ಷದವರು ಬಂದರೂ ನಾವು ಸ್ವಾಗತ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.