ಸಚಿವ ಸ್ಥಾನ ನೀಡದಿದ್ದರೆ ಬಿಜೆಪಿಯನ್ನೇ ಸೋಲಿಸುತ್ತೇವೆ : ಕ್ಷತ್ರಿಯ ಮಹಾ ಒಕ್ಕೂಟ ಎಚ್ಚರಿಕೆ
Team Udayavani, Feb 8, 2022, 8:48 PM IST
ಬೆಂಗಳೂರು ; ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮರಾಠ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಶ್ರೀಮಂತ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು. ಮರಾಠ ನಿಗಮ ಮಂಡಳಿಗೆ ಕೂಡಲೇ ಅಧ್ಯಕ್ಷರು, ನಿರ್ದೇಶಕರನ್ನು ನೇಮಿಸಬೇಕೆಂದು ಕರ್ನಾಟಕ ಕ್ಷತ್ರಿಯ ಮಹಾ ಒಕ್ಕೂಟ ಒತ್ತಾಯಿಸಿದೆ.
ಶ್ರೀಮಂತ ಪಾಟೀಲ್ ಗೆ ಸಚಿವ ಸ್ಥಾನ ನೀಡದಿದ್ದರೆ ಫೆ,19 ರ ಶಿವಾಜಿ ಜಯಂತಿಯಂದು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಮುದಾಯದ ಮುಖಂಡರು “ಬೆಂಗಳೂರು ಚಲೋ” ಬೃಹತ್ ಪ್ರತಿಭಟನೆ ನಡೆಸುವುದಲ್ಲದೇ ನಗರದ ಪ್ರೀಡಂ ಪಾರ್ಕ್ ನಲ್ಲಿ ನಮ್ಮ ಬೇಡಿಕೆ ಈಡೇರುವ ತನಕ ತೀವ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಕ್ಷತ್ರಿಯ ಮಹಾ ಒಕ್ಕೂಟದಿಂದ ಹೋಟೆಲ್ ಗೋಲ್ಡ್ ಫಿಂಚ್ ನ ಬ್ಯಾಂಕೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಸಮುದಾಯದ ಮುಖಂಡರ ಸಭೆಯಲ್ಲಿ ಸಮುದಾಯದ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮರಾಠ ಒಕ್ಕೂಟದ ಅಧ್ಯಕ್ಷ ಶ್ಯಾಮ್ ಸುಂದರ್ ಗಾಯಕ್ ವಾಡ್, ಮುಂದಿನ ಸಂಪುಟ ವಿಸ್ತರಣೆಯಲ್ಲಿ ಶ್ರೀಮಂತ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕು. ನಮ್ಮ ಸಮುದಾಯಕ್ಕೆ ಸರ್ಕಾರದಲ್ಲಿ ಸೂಕ್ತ ಪ್ರಾತಿನಿಧ್ಯೆ ದೊರೆಯದಿದ್ದರೆ ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವಾಗಿ ಮತ ಚಲಾಯಿಸುತ್ತೇವೆ. 2023 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ತೊರೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಸೋಂಕಿನ ಸಂಖ್ಯೆ ಶೇ. 5.1ಕ್ಕೆ ಇಳಿಕೆ : ರಾಜ್ಯಾದ್ಯಂತ 4,452 ಮಂದಿಗೆ ಪಾಸಿಟಿವ್
ಸಚಿವ ಸ್ಥಾನದ ಜತೆಗೆ ಕಳೆದ 15 ತಿಂಗಳಿಂದ ಮರಾಠ ನಿಗಮ ಮಂಡಳಿಗೆ ಅಧ್ಯಕ್ಷರು, ನಿರ್ದೇಶಕರನ್ನು ನೇಮಿಸಬೇಕು. ಮರಾಠ ಸಮಾಜವನ್ನು 3 ಬಿ ಯಿಂದ 2ಎ ಸೇರ್ಪಡೆ ಮಾಡಬೇಕು. ಜತೆಗೆ ಮುಂಬರುವ ವಿಧಾನಸಭೆ ನಗರ ಪಾಲಿಕೆ, ಜಿಲ್ಲಾ, ತಾಲ್ಲೂಕ್ ಪಂಚಾಯಿತಿ ಚುನಾವಣೆಯಲ್ಲಿ ಸಮುದಾಯಕ್ಕೆ ಸೂಕ್ತ ಅವಕಾಶ ಕಲ್ಪಿಸಬೇಕು ಎಂದರು. ಮರಾಠ ಸಮಾಜಕ್ಕೆ ಅನ್ಯಾಯವಾದ ಕಾರಣದಿಂದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೇವಲ ಮೂರು ಸಾವಿರ ಮತಗಳಿಂದ ಬಿಜೆಪಿ ಗೆದ್ದಿತ್ತು. ಹಾನಗಲ್ ವಿಧಾನಸಭೆ ಉಪ ಚುನಾವಣೆ ಹಾಗೂ ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಮರಾಠ ಸಮುದಾಯ ಬಿ.ಜೆ.ಪಿ.ವಿರುದ್ದ ಮತ ನೀಡಿ ಸೋಲಿಸಿದೆ. ಆದ್ದರಿಂದ ಮರಾಠ ಸಮುದಾಯದಕ್ಕೆ ಆದ ಆನ್ಯಾಯವನ್ನು ಮುಖ್ಯಮಂತ್ರಿಗಳು ಸರಿಪಡಿಸಬೇಕು ಎಂದರು. ಬಿ.ಜೆ.ಪಿ. ಸರ್ಕಾರ ಬಂದ 24 ಗಂಟೆಯೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು.
ಆದರೆ ಅವರು 24 ತಿಂಗಳು ಮುಖ್ಯಮಂತ್ರಿಯಾಗಿದ್ದರೂ ಸಹ ನಮ್ಮ ಬೇಡಿಕೆ ಈಡೇರಿಲ್ಲ. ಮರಾಠ ಸಮಾಜದ ಯಾವುದೇ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ. ಬಸವರಾಜು ಬೊಮ್ಮಾಯಿ ಮುಖ್ಯಮಂತ್ರಿಯಾಗಿ 5 ತಿಂಗಳು ಕಳೆದಿದ್ದರೂ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಇದರಿಂದ ಮರಾಠ ಸಮಾಜ ಬಹಳವಾಗಿ ನೊಂದಿದೆ ಎಂದರು. ಮರಾಠ ಸಮಾಜ ಬಡತನದಲ್ಲಿದ್ದು, ರಾಜ್ಯದ ಮೂಲೆ ಮೂಲೆಗಳಲ್ಲಿ 50 ಲಕ್ಷಕ್ಕೂ ಹೆಚ್ಚು ಮಂದಿ ನೆಲೆಸಿದ್ದಾರೆ. 52ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಸಮುದಾಯ ನಿರ್ಣಾಯಕರಾಗಿದ್ದಾರೆ. ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಮತ್ತು ಬಿ.ಜೆ.ಪಿ. ಸರ್ಕಾರಗಳು ಕೇವಲ ಆಶ್ವಾಸನೆಗಳನ್ನು ನೀಡುತ್ತಿವೆ. ಬರಿ ಆಶ್ವಾಸನೆ ನೀಡಿ ಕಾಲ ಕಳೆಯುತ್ತಿದ್ದಾರೆ. ಉಪಾಧ್ಯಕ್ಷ ಭಾಹೂಸಾಹೇಬ್, ಚಿಕ್ಕೂಡಿ ಜಿಲ್ಲಾಧ್ಯಕ್ಷ ವಿನಾಯಕ ದೇಸಾಯಿ, ಗದಗ್ ಜಿಲ್ಲಾಧ್ಯಕ್ಷರಾದ ವಿನಿತಾ ಕುಮಾರ್ ಮತ್ತು ವಿಜಯಪುರ ಜಿಲ್ಲಾಧ್ಯಕ್ಷರಾದ ರಾಹುಲ್ ಜಾಧವ್ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ