ಕೋವಿಡ್ ಜಾಗೃತಿಗೆ ಕೆಎಸ್ಸಾರ್ಟಿಸಿ ಸಾಥ್
Team Udayavani, Dec 13, 2021, 7:30 AM IST
ಉಡುಪಿ: ಕೋವಿಡ್-19 ಲಸಿಕೆಯ 1 ಹಾಗೂ 2ನೇ ಡೋಸ್ ವಿತರಣೆಯಲ್ಲಿ ಶೇ. 100 ಪ್ರತಿಶತ ಪ್ರಗತಿ ಸಾಧಿಸಲು ಜಿಲ್ಲಾಡಳಿತವು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅವಿರತವಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಕೆಎಸ್ಸಾರ್ಟಿಸಿ ಕೈಜೋಡಿಸಿದೆ.
ರಾಜ್ಯದಲ್ಲಿ ಓಡಾಡುವ ಕೆಎಸ್ಸಾರ್ಟಿಸಿ ಬಸ್ಗಳ ಟಿಕೆಟ್ಗಳಲ್ಲಿ ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಿಕೊಳ್ಳಬೇಕು, ಮಾಸ್ಕ್ ಹಾಕಿಕೊಳ್ಳಬೇಕು ಎಂಬ ಬರಹಗಳನ್ನು ಮುದ್ರಿಸಲಾಗಿದೆ. ಈ ಮುಖಾಂತರ ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಲ್ಲಿ ಹಾಗೂ ಜನರಲ್ಲಿ ಕೋವಿಡ್ -19ರ ಬಗ್ಗೆ ಜಾಗರೂಕತೆಯನ್ನು ಮೂಡಿಸುವ ನಿಟ್ಟಿನಲ್ಲಿ ನವೀನ ಶೈಲಿಯ ಯೋಜನೆಯನ್ನು ಹಮ್ಮಿಕೊಂಡಿದೆ. ಸಾರಿಗೆ ಇಲಾಖೆಯ ಕಾರ್ಯವನ್ನು ಜಿಲ್ಲಾಧಿಕಾರಿಗಳು ಶ್ಲಾಘಿ ಸಿದ್ದಾರೆ.
ಇದೇ ರೀತಿಯಲ್ಲಿ ಇತರ ಇಲಾಖೆಗಳು/ನಿಗಮಗಳು ಸಾರ್ವಜನಿಕರಲ್ಲಿ ಕೋವಿಡ್-19ರ ಬಗ್ಗೆ ಜಾಗೃತಿಯನ್ನು ಮೂಡಿಸುವಲ್ಲಿ ಕಾರ್ಯಪ್ರವೃತ್ತರಾಗುವಂತೆ ಹಾಗೂ ಮಾಲ್ಗಳಲ್ಲಿ, ಸಿನೆಮಾ ಮಂದಿರಗಳಲ್ಲಿ ಮತ್ತು ಎಲ್ಲ ಅಂಗಡಿಗಳಲ್ಲಿ ಗ್ರಾಹಕರಿಗೆ ನೀಡುವ ಬಿಲ್ಲು / ಸ್ವೀಕೃತಿಗಳಲ್ಲಿ ಇದೇ ಮಾದರಿಯಲ್ಲಿ ಜಾಗೃತಿಯನ್ನು ಮೂಡಿಸುವ ಬರಹಗಳನ್ನು ನಮೂದಿಸುವಂತೆ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…