ತರಗತಿಗಳಲ್ಲಿ ಸಮವಸ್ತ್ರ ಪಾಲನೆ; ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಸಭೆ
Team Udayavani, Feb 14, 2022, 6:25 AM IST
ಉಡುಪಿ: ತರಗತಿಗಳಲ್ಲಿ ಸಮವಸ್ತ್ರ ನಿಯಮ ಪಾಲಿಸುವ ಸಂಬಂಧ ರಾಜ್ಯ ಹೈಕೋರ್ಟ್ ನೀಡಿರುವ ಮಧ್ಯಾಂತರ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಉಡುಪಿ ತಾಲೂಕು ಕಚೇರಿಯಲ್ಲಿ ವಿವಿಧ ಸಂಘಟನೆಗಳು ಮತ್ತು ಧಾರ್ಮಿಕ ಮುಖಂಡರೊಂದಿಗೆ ಶಾಸಕ ರಘುಪತಿ ಭಟ್ ರವಿವಾರ ಸಭೆ ನಡೆಸಿದರು.
ಈವರೆಗೆ ಯಾವ ಪ್ರೌಢಶಾಲೆಗಳಲ್ಲಿ ಸಮವಸ್ತ್ರ ಪದ್ಧತಿ ಇತ್ತೋ ಆ ಶಾಲೆಗಳಿಗೆ ಕೋರ್ಟ್ ಆದೇಶ ಅನ್ವಯ ಆಗುತ್ತದೆ. ಎಲ್ಲ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರದಲ್ಲಿ ತರಗತಿಗೆ ಹಾಜರಾಗಬೇಕು. ಸಮವಸ್ತ್ರ ಪದ್ಧತಿ ಇಲ್ಲದ ಸಂಸ್ಥೆಗಳಲ್ಲಿ ಎಂದಿನಂತೆ ಶೈಕ್ಷಣಿಕ ಚಟುವಟಿಕೆ ಮುಂದುವರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಆದೇಶ, ನಿಯಮ ಉಲ್ಲಂಘನೆಯಾಗಂತೆ ಎಚ್ಚರ ವಹಿಸಬೇಕು ಎಂದು ಶಾಸಕರು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ತಹಶೀಲ್ದಾರ್ ಪ್ರದೀಪ್ ಕುಡೇìಕರ್, ಪೋಲಿಸ್ ಉಪ ಅಧೀಕ್ಷಕ ಸುಧಾಕರ್ ನಾಯ್ಕ ನಿರೀಕ್ಷಕ ಪ್ರಮೋದ್, ವೃತ್ತ ನಿರೀಕ್ಷಕ ಶರಣಗೌಡ, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಧಾರ್ಮಿಕ ಮುಖಂಡರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:15-18 ವರ್ಷದ ಶೇ.70 ಮಕ್ಕಳಿಗೆ ಲಸಿಕೆ; ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ
ಉಡುಪಿಯಲ್ಲಿ ನಿಷೇಧಾಜ್ಞೆ
ಸಮವಸ್ತ್ರ ವಿವಾದ ಮತ್ತು ಪ್ರಸಕ್ತ ವಿದ್ಯಮಾನಗಳನ್ನು ಪರಿಗಣಿಸಿ ಪ್ರೌಢ ಶಾಲಾ ತರಗತಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಫೆ. 14ರಿಂದ 19ರ ವರೆಗೆ ಎಲ್ಲ ಪ್ರೌಢಶಾಲೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡ ಲಾಗಿದೆ. ಪ್ರೌಢಶಾಲೆಯ 200 ಮೀ. ಸುತ್ತಮುತ್ತ 144 ಸೆಕ್ಷನ್ ಜಾರಿಯಲ್ಲಿ ಇರುವುದರಿಂದ ಅನವಶ್ಯಕವಾಗಿ ಗುಂಪು ಸೇರುವುದು, ಘೋಷಣೆ ಕೂಗುವುದಕ್ಕೆ ಅವಕಾಶ ಇಲ್ಲ. ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!