ಕುಕ್ಕೆಯಲ್ಲಿ ವಸತಿ ಸಮಸ್ಯೆ? ಬೀದಿಯಲ್ಲೇ ಮಲಗಿದ ಭಕ್ತರು – ವಿಡಿಯೋ ವೈರಲ್‌


Team Udayavani, May 4, 2022, 6:58 AM IST

ಕುಕ್ಕೆಯಲ್ಲಿ ವಸತಿ ಸಮಸ್ಯೆ? ಬೀದಿಯಲ್ಲೇ ಮಲಗಿದ ಭಕ್ತರು – ವಿಡಿಯೋ ವೈರಲ್‌

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಯಾತ್ರಾ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ರಜಾ ದಿನವಾದ ಸೋಮವಾರ ರಾತ್ರಿ ಭಕ್ತರು ರಸ್ತೆಯಲ್ಲೇ ಮಲಗಿದ್ದರು ಎಂಬ ವೀಡಿಯೋ, ಫೋಟೋ ವೈರಲ್‌ ಆಗಿದ್ದು ಕ್ಷೇತ್ರದಲ್ಲಿ ವಸತಿ ಸಮಸ್ಯೆ ಕಾಡುತ್ತಿದೆಯೇ ಎಂಬ ಚರ್ಚೆ ವ್ಯಾಪಕವಾಗಿ ಕೇಳಿಬಂದಿದೆ.

ಪ್ರಸ್ತುತ ಶಾಲಾ-ಕಾಲೇಜುಗಳಿಗೆ ರಜಾ ದಿನವಾಗಿದ್ದು, ಜತೆಗೆ ಸರಣಿ ಸರಕಾರಿ ರಜೆ ಇದ್ದ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಹೆಚ್ಚಿನ ಭಕ್ತರು ಆಗಮಿಸಿದ್ದರು. ಇದೇ ಕಾರಣದಿಂದ ಕ್ಷೇತ್ರದ ವಸತಿ ಕೊರತೆ ಎದುರಾಗಿ ಭಕ್ತರು ರಸ್ತೆಯಲ್ಲಿ ಮಲಗಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಜತೆಗೆ ಭಕ್ತರು ರಸ್ತೆಯಲ್ಲಿ ಮಲಗಿರುವ ಫೋಟೋ, ವೀಡಿಯೋ ವೈರಲ್‌ ಆಗಿದೆ.

ಕೊರೊನಾ ಬರುವುದಕ್ಕೆ ಮುಂಚೆ ವಿಶೇಷ ದಿನಗಳಲ್ಲಿ ಕ್ಷೇತ್ರದಲ್ಲಿ ವಸತಿ ಸಮಸ್ಯೆ ಎದುರಾಗುತ್ತಿತ್ತು. ಆದರೆ ಆ ಬಳಿಕ ವಸತಿ ಸಮಸ್ಯೆ ಅಷ್ಟಾಗಿ ಕಂಡುಬಂದಿಲ್ಲ. ಇತ್ತೀಚೆಗೆ ಮತ್ತೆ ವಸತಿ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ. ಈ ಮೊದಲು ಭಕ್ತರು ರಸ್ತೆ, ಸಭಾಂಗಣದಲ್ಲಿ ಮಲಗಿದ್ದ ದೃಶ್ಯವೂ ವೈರಲ್‌ ಆಗಿತ್ತು. ವಸತಿ ಕೊಠಡಿ ಲಭ್ಯವಾಗದ ಭಕ್ತರಿಗೆ ಮಲಗಲು ದೇವಳದ ವತಿಯಿಂದ ಬದಲಿ ವ್ಯವಸ್ಥೆ ಮಾಡಲಾಗಿದ್ದರೂ ಮಾಹಿತಿ ಕೊರತೆಯಿಂದ ಭಕ್ತರು ರಸ್ತೆಯಲ್ಲಿ ಮಲಗುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ದೇವಸ್ಥಾನದ ಹೇಳಿಕೆ
ಕುಕ್ಕೆಯ ರಥ ಬೀದಿಯಲ್ಲಿ ಭಕ್ತರು ಮಲಗಿರುವ ವಿಚಾರ ತಿಳಿಯುತ್ತಿದ್ದಂತೆ ದೇವಸ್ಥಾನದ ವತಿಯಿಂದ ಸೃಷ್ಟೀಕರಣ ನೀಡಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರಿಗೆ ದೇವಾಲಯದ ವತಿಯಿಂದ ವಸತಿಗೃಹಗಳಲ್ಲಿ ಕೊಠಡಿ ನೀಡಲಾಗುತ್ತಿದೆ. ಕೊಠಡಿಗಳು ಭರ್ತಿಯಾದ ಅನಂತರದ ಸಂದರ್ಭಗಳಲ್ಲಿ ಆದಿಸುಬ್ರಹ್ಮಣ್ಯ ದೇವಾಲಯದ ಬಳಿ ಇರುವ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಮತ್ತು ಷಣ್ಮುಖ ಪ್ರಸಾದ ಭೋಜನ ಶಾಲೆಯ ಮೇಲ್ಮಹಡಿಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಆದರೂ ತಡರಾತ್ರಿ ಬರುವ ಕೆಲವು ಭಕ್ತರು ರಥಬೀದಿಯಲ್ಲಿ ತಂಗಿರುವುದು ಕಂಡುಬರುತ್ತದೆ. ನಿರಂತರ ರಜೆಯಿಂದ ಹೆಚ್ಚಿನ ಭಕ್ತರು ಆಗಮಿಸಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.