ಕುಕ್ಕೆ ಸುಬ್ರಹ್ಮಣ್ಯ ಆನ್ಲೈನ್ ಸೇವೆಗೆ ಪ್ರತ್ಯೇಕ ವೆಬ್ಸೈಟ್
Team Udayavani, Jun 21, 2020, 10:24 AM IST
ಗುತ್ತಿಗಾರು/ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನ್ಲೈನ್ ಸೇವೆಗಳ ಬುಕಿಂಗ್ ಮಾಡಲು ಗುತ್ತಿಗೆ ಪಡೆದಿರುವ ಸಂಸ್ಥೆಯ ವಿರುದ್ಧ ಸಾರ್ವಜನಿಕ ರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ಗುತ್ತಿಗೆಯನ್ನು ರದ್ದು ಮಾಡಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಗುತ್ತಿಗಾರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಕುಕ್ಕೆ ಕ್ಷೇತ್ರದ ಆನ್ಲೈನ್ ಸೇವೆಗೆ ಪ್ರತ್ಯೇಕ ವೆಬ್ಸೈಟ್ ಆರಂಭಿಸಲು ನಿರ್ಧರಿಸಲಾಗಿದೆ ಎಂದರು.
ಪ್ರಕರಣದ ಹಿನ್ನೆಲೆ: ಕೆಲವು ಸಮಯದ ಹಿಂದೆ ರಾಜ್ಯದ 54 ದೇವಸ್ಥಾನಗಳಲ್ಲಿ ಆನ್ಲೈನ್ ಸೇವೆಗೆ ನಿರ್ಧರಿಸಿದ್ದ ರಾಜ್ಯ ಸರಕಾರ ಅದರ ನಿರ್ವಹಣೆಯನ್ನು ಅರ್ಜುನ್ ರಂಗಾ ಎಂಬಾತನ ಪ್ಯೂರ್ ಪ್ರೇಯರ್ ಕಂಪೆನಿಗೆ ಗುತ್ತಿಗೆ ನೀಡಿತ್ತು. ಆ ಸಂಸ್ಥೆಯು ಕುಕ್ಕೆ ದೇವಸ್ಥಾನದ ನಕಲಿ ವೆಬ್ಸೈಟ್ ಮಾಡಿ ಭಕ್ತರಿಂದ ಅಕ್ರಮವಾಗಿ ಸೇವೆಗಳನ್ನು ಬುಕಿಂಗ್ ಮಾಡಿ ವಂಚಿಸುತ್ತಿತ್ತು ಎಂದು 2018ರ ಅ. 16ರಂದು ದೇಗುಲದ ಕಾರ್ಯನಿರ್ವಹಣಾಧಿಕಾರಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದರು. ಪ್ರಕರಣ ಈಗ ಹೈಕೋರ್ಟಿನಲ್ಲಿದ್ದು, ಆರೋಪಿತ ಅರ್ಜುನ್ ರಂಗಾನ ವಿರುದ್ಧದ ಕ್ರಮಕ್ಕೆ ತಡೆ ನೀಡಿದೆ. ಈ ನಡುವೆ ಲಾಕ್ಡೌನ್ ಸಮಯದಲ್ಲಿ ಭಕ್ತರಿಗೆ ಪ್ರಮುಖ ಕ್ಷೇತ್ರಗಳ ದೇವರ ದರ್ಶನಕ್ಕೆ ಆನ್ಲೈನ್ ವ್ಯವಸ್ಥೆ ಜಾರಿಗೆ ತಂದಿತ್ತು. ಈ ಆನ್ಲೈನ್ ವ್ಯವಸ್ಥೆಯ ಜವಾಬ್ದಾರಿಯನ್ನು ಮತ್ತೆ ಪ್ಯೂರ್ ಪ್ರೇಯರ್ ಕಂಪೆನಿಗೆ ನೀಡಿರುವುದು ವಿವಾದಕ್ಕೆ ಕಾರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ