ಕುಲಶೇಖರ: ರೈಲು ಮಾರ್ಗದ 2ನೇ ಸುರಂಗ ಶೀಘ್ರ ಸಂಚಾರಕ್ಕೆ ಮುಕ್ತ
Team Udayavani, Jan 29, 2022, 8:10 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ಮಂಗಳೂರು ಜಂಕ್ಷನ್- ಪಣಂಬೂರು ರೈಲುಮಾರ್ಗದ ಕುಲಶೇಖರದಲ್ಲಿ ಎರಡನೇ ಸುರಂಗ ಮಾರ್ಗ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆ ಇದೆ.
ಅಲ್ಲಿ ಹಳಿ ಅಳವಡಿಕೆ ಕಾರ್ಯ ಫೆಬ್ರವರಿ ಪ್ರಥಮ ವಾರದಲ್ಲಿ ಪ್ರಾರಂಭವಾಗಲಿದೆ. ಜತೆಗೆ ವಿದ್ಯುತ್ ಲೈನ್, ಕಮ್ಯೂನಿಕೇಶನ್ ಲೈನ್ ಅಳವಡಿಕೆ ಮುಂತಾದ ಕೆಲಸಗಳು ನಡೆಯಲಿದ್ದು, ನೂತನ ಸುರಂಗಮಾರ್ಗದಲ್ಲಿ ಸಂಚಾರ ಬಹುತೇಕ ಮಾರ್ಚ್ನಲ್ಲಿ ಪ್ರಾರಂಭವಾಗಲಿದೆ. ಬಳಿಕ ಪ್ರಸ್ತುತ ಇರುವ ಸುರಂಗವನ್ನು ಸ್ವಲ್ಪಕಾಲ ದುರಸ್ತಿಗಾಗಿ ಮುಚ್ಚುವ ಸಾಧ್ಯತೆಗಳಿವೆ ಎಂದು ರೈಲ್ವೇ ಮೂಲಗಳು ತಿಳಿಸಿವೆ.
ಇದನ್ನೂ ಓದಿ:“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ
ಮಂಗಳೂರು ಜಂಕ್ಷನ್- ಪಣಂಬೂರು ಮಧ್ಯೆ ಇರುವ 21 ಕಿ.ಮೀ. ರೈಲು ಮಾರ್ಗದಲ್ಲಿ ಈಗಾಗಲೇ 17 ಕಿ.ಮೀ.ಯಲ್ಲಿ ಹಳಿ ದ್ವಿಗುಣ ಪೂರ್ಣಗೊಂಡಿದೆ. ಸುರಂಗ ಮಾರ್ಗದ 600 ಮೀಟರ್ ಸೇರಿದಂತೆ ಒಟ್ಟು 4 ಕಿ.ಮೀ. ಹಳಿ ದ್ವಿಗುಣಕ್ಕೆ ಬಾಕಿ ಇದೆ. ಡಿ.ವಿ. ಸದಾನಂದ ಗೌಡ ರೈಲ್ವೇ ಸಚಿವರಾಗಿದ್ದ ಸಂದರ್ಭದಲ್ಲಿ ಮಂಗಳೂರು ಜಂಕ್ಷನ್-ಪಣಂಬೂರು ರೈಲು ಮಾರ್ಗದ ಹಳಿ ದ್ವಿಗುಣ ಯೋಜನೆಯನ್ನು ಬಜೆಟ್ನಲ್ಲಿ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು