ಕುಮಾರಸ್ವಾಮಿಯದ್ದು ಯಾವತ್ತೂ ಠುಸ್ ಬಾಂಬ್: ಎಸ್.ಮುನಿಸ್ವಾಮಿ ಲೇವಡಿ
Team Udayavani, Feb 6, 2023, 12:52 AM IST
ಕೋಲಾರ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಕೋದೆಲ್ಲ ಠುಸ್ ಬಾಂಬ್ ಎಂದು ಸಂಸದ ಎಸ್.ಮುನಿಸ್ವಾಮಿ ಲೇವಡಿ ಮಾಡಿದರು.
ತಾಲೂಕಿನ ನರಸಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ನಿಮ್ಮ ಮನೆಯಲ್ಲಿ ಉರಿಯುತ್ತಿರುವ ಬೆಂಕಿಯನ್ನು ಆರಿಸಿಕೊಳ್ಳಿ, ಅನಂತರ ನಮ್ಮ ಪಕ್ಷದ ಬಗ್ಗೆ ಯೋಚಿಸಿ. ಬಾಯಿ ಚಪಲಕ್ಕೆ ಏನೇನೋ ಮಾತನಾಡಬೇಡಿ ಎಂದು ಸಲಹೆ ನೀಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ವಿರುದ್ಧ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ಗೊಂದಲ ಸೃಷ್ಟಿಸಲು ಹೀಗೆಲ್ಲ ಹೇಳುತ್ತಿದ್ದಾರೆ. ಬಿಜೆಪಿಯಲ್ಲಿ ಬೊಮ್ಮಾಯಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಅಷ್ಟಕ್ಕೂ ಏನೇ ಇದ್ದರೂ ಬಿಜೆಪಿ ಆಂತರಿಕ ವಿಚಾರ, ನಮ್ಮ ಪಕ್ಷ ಒಡೆಯುವ ಇವರ ಪ್ರಯತ್ನ ಫಲಿಸದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್