ಸವದಿ ಮಾತಿನೇಟಿಗೆ ಕುಮಟಳ್ಳಿ ಕಣ್ಣೀರು


Team Udayavani, Sep 28, 2019, 3:07 AM IST

savadi

ಬೆಳಗಾವಿ: ಸೋತರೂ ಉಪಮುಖ್ಯಮಂತ್ರಿ ಆಗುವ ಭಾಗ್ಯ ಒಲಿದಿರುವ ಲಕ್ಷ್ಮಣ ಸವದಿ ಅವರು ಅನರ್ಹ ಶಾಸಕ ಮಹೇಶ ಕುಮಟಳ್ಳಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ಇದರಿಂದ ನೊಂದಿರುವ ಕುಮಟಳ್ಳಿ ಕಣ್ಣೀರು ಸುರಿಸಿದರೆ, ಇನ್ನೊಂದೆಡೆ ಸವದಿ ಯನ್ನು ತರಾಟೆಗೆ ತೆಗೆದುಕೊಂಡಿ ರುವ ರಮೇಶ ಜಾರಕಿಹೊಳಿ ನಾಲಿಗೆ ಬಿಗಿ ಹಿಡಿದು ಮಾತಾಡಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಎರಡು ತಿಂಗಳ ಹಿಂದೆ ಅಥಣಿ ಕ್ಷೇತ್ರದಲ್ಲಿ ಪ್ರವಾಹ ವೀಕ್ಷಣೆ ವೇಳೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಮೊಬೈಲ್‌ನಲ್ಲಿ ಕುಮಟಳ್ಳಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಈಗ ವೈರಲ್‌ ಆಗಿದೆ. ಫೋನ್‌ನಲ್ಲಿ ಮಾತನಾಡುವಾಗ, “ಬಿಡೋ ಮಾರಾಯಾ, ಕುಮಟಳ್ಳಿಯನ್ನು ತೆಗೆದುಕೊಂಡು ಏನು ಮಾಡುತ್ತಿಯಾ. ಆ ದರಿದ್ರ ಕುಮಟಳ್ಳಿ ಬಗ್ಗೆ ಮಾತಾಡಿ ಯಾಕೆ ಮೂಡ್‌ ಹಾಳು ಮಾಡುತ್ತಿಯಾ’ ಎಂದಿರುವ ವಿಡಿಯೋ ವೈರಲ್‌ ಆಗಿ ಚರ್ಚೆಗೆ ಗ್ರಾಸವಾಗಿದೆ.

ಮನಸ್ಸಿಗೆ ನೋವಾಗಿದೆ: ಸವದಿ ಮಾತಿನಿಂದ ನೊಂದಿರುವ ಅನರ್ಹ ಶಾಸಕ ಮಹೇಶ ಕುಮಟಳ್ಳಿ ಕಣ್ಣೀರು ಸುರಿಸಿದ್ದಾರೆ. “ಸವದಿ ಹೇಳಿಕೆಯಿಂದ ಮನಸ್ಸಿಗೆ ನೋವಾಗಿದೆ. ನಾನು ಏನು ತಪ್ಪು ಮಾಡಿದ್ದೀನಿ ಎಂದು ಸವದಿ ಅವರು ಹಾಗೇ ಮಾತಾಡಿದ್ದಾರೆ ಎನ್ನುವುದು ಗೊತ್ತಾಗುತ್ತಿಲ್ಲ. ಯಾರು ಏನೇ ಅಂದರೂ, ಯಾರೇ ವಿಷ ಕೊಟ್ಟರೂ ಅದು ಅಮೃತ ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಉನ್ನತ ಹುದ್ದೆಯಲ್ಲಿದ್ದು ಹೀಗೆ ಮಾತನಾಡಿದ್ದು ಅವರ ಘನತೆಗೆ ಶೋಭೆ ತರುವಂತದ್ದಲ್ಲ. ಅವರಿಗೆ ಒಳ್ಳೆಯದಾಗಲಿ, ರಾಜಕಾರಣ ಇಂದು ಇರುತ್ತೆ, ನಾಳೆ ಹೋಗುತ್ತೆ’ ಎಂದು ಕಣ್ಣೀರು ಹಾಕಿದ್ದಾರೆ.

ಈ ಕುರಿತು “ಉದಯವಾಣಿ’ಗೆ ಪ್ರತಿಕ್ರಿಯಿಸಿರುವ ಕುಮಟಳ್ಳಿ, ಜವಾಬ್ದಾರಿ ಸ್ಥಾನದಲ್ಲಿ ಇದ್ದುಕೊಂಡು ಇಂತಹ ಮಾತುಗಳನ್ನು ಆಡಿರುವುದರಿಂದ ನನ್ನ ಮನಸ್ಸು ಭಾರವಾಗಿದೆ. ಸವದಿ ಹಾಗೂ ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ, ಜಗಳವಿಲ್ಲ. ಯಾವ ಅರ್ಥದಲ್ಲಿ ನನ್ನನ್ನು ಹೀಯಾಳಿಸಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಕೆಟ್ಟ ಶಬ್ದದಿಂದ ನಿಂದಿಸಿರುವ ವಿಡಿಯೋ ವೈರಲ್‌ ಆಗುತ್ತಿದ್ದಂತೆ ನಿಜವಾಗಲೂ ನನಗೆ ಶಾಕ್‌ ಆಗಿದೆ’ ಎಂದರು.

ಶಿಷ್ಯನ ಬೆನ್ನಿಗೆ ನಿಂತ ರಮೇಶ: ಈ ಬೆಳವಣಿಗೆ ನಡೆಯುತ್ತಿ ದ್ದಾಗಲೇ ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ಕುಮಟಳ್ಳಿ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮಕ್ಕೆ ಹೋಗಿದ್ದ ಗೋಕಾಕನ ಅನರ್ಹ ಶಾಸಕ ರಮೇಶ ಜಾರಕಿಹೊಳಿ, “ಸವದಿ ನಾಲಿಗೆ ಬಿಗಿ ಹಿಡಿದು ಮಾತನಾಡಲಿ. ನಾಲಿಗೆಯಿಂದಲೇ ಸವದಿ ಹಾಳಾಗಿ ಹೋಗಿದ್ದಾನೆ. 2018ರ ಸೋಲಿಗೆ ನಾಲಿಗೆಯೇ ಕಾರಣ. ಇನ್ನು ಮುಂದೆ ಮಾತ ನಾಡುವಾಗ ಮೈಮೇಲೆ ಎಚ್ಚರ ಇರಲಿ’ ಎಂದು ಎಚ್ಚರಿಕೆ ನೀಡಿದ್ದಾರೆ. ಆ ಮೂಲಕ ಕುಮಟಳ್ಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಹಾಗೂ ಕುಮಟಳ್ಳಿ ಮಧ್ಯೆ ತುರುಸಿನ ಸ್ಪರ್ಧೆ ನಡೆದಿತ್ತು. ಸವದಿ ಸೋಲಿಸಿ ಶಾಸಕನಾಗಲು ರಮೇಶ ಜಾರಕಿಹೊಳಿಯೇ ಕಾರಣ ಎಂದು ಕುಮಟಳ್ಳಿ ಬಹಿರಂಗವಾಗಿ ಹೇಳಿಕೊಂಡಿದ್ದರು.

ಕುಮಟಳ್ಳಿ ಬಗ್ಗೆ ಮಾತಾಡಿಲ್ಲ: ವಿಡಿಯೋ ವೈರಲ್‌ ಆಗುತ್ತಿದ್ದಂತೆ ಹೇಳಿಕೆ ಬಿಡುಗಡೆ ಮಾಡಿರುವ ಡಿಸಿಎಂ ಲಕ್ಷ್ಮಣ ಸವದಿ, “ಮಹೇಶ ಕುಮಟಳ್ಳಿ ಬಗ್ಗೆ ನಾನು ತಪ್ಪಾಗಿ ಮಾತನಾಡಿಲ್ಲ. ಮತ್ತೂಬ್ಬ ಸ್ನೇಹಿತನಾದ ಕುಮಟಳ್ಳಿ ಬಗ್ಗೆ ನಾನು ಮಾತನಾಡಿದ್ದೇನೆ. ಆ ಹೇಳಿಕೆಗೂ, ಮಹೇಶನಿಗೂ ಯಾವುದೇ ಸಂಬಂಧವಿಲ್ಲ. ಕೆಲವರು ನನ್ನ ಹಾಗೂ ಮಹೇಶನ ಮಧ್ಯೆ ಭಿನ್ನಾಭಿಪ್ರಾಯ ತರುವ ಪ್ರಯತ್ನ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಜೊತೆಯಾಗಿಯೇ ಹೋಗುತ್ತೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಸವದಿ ನಾಲಿಗೆ ಬಿಗಿ ಹಿಡಿದು ಮಾತನಾಡಲಿ. ನಾಲಿಗೆಯಿಂದಲೇ ಸವದಿ ಹಾಳಾಗಿ ಹೋಗಿದ್ದಾನೆ. 2018ರ ವಿಧಾನಸಭೆಯಲ್ಲಿ ಆತನ ಸೋಲಿಗೆ ನಾಲಿಗೆಯೇ ಕಾರಣ. ಇನ್ನು ಮುಂದೆ ಮಾತನಾಡುವಾಗ ಮೈಮೇಲೆ ಎಚ್ಚರ ಇರಲಿ.
-ರಮೇಶ ಜಾರಕಿಹೊಳಿ, ಅನರ್ಹ ಶಾಸಕ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.