ಸವದಿ ನೆರಳಲ್ಲಿ ಕುಮಟಳ್ಳಿ ಸಾವ್ಕಾರ!


Team Udayavani, Dec 10, 2019, 3:06 AM IST

savadi

ಬೆಳಗಾವಿ: ಗಡಿ ಭಾಗದ ಅಥಣಿ ಕ್ಷೇತ್ರದಲ್ಲಿ ಎಲ್ಲ ರಾಜಕೀಯ ಲೆಕ್ಕಾಚಾರಗಳು ನಿರೀಕ್ಷಿಸಿದಂತೆ ಕೆಲಸ ಮಾಡಿವೆ. ಪಕ್ಷ ವಿರೋಧಿ ಚಟುವಟಿಕೆ ಆರೋಪಗಳಿಂದ ಅನರ್ಹ ಶಿಕ್ಷೆಗೆ ಗುರಿಯಾಗಿದ್ದ ಮಹೇಶ ಕುಮಟಳ್ಳಿ, ಜನತಾ ನ್ಯಾಯಾಲಯ ದಲ್ಲಿ ಅರ್ಹ ಎಂಬ ಪ್ರಮಾಣ ಪತ್ರ ಪಡೆದಿದ್ದಾರೆ. ರಾಜ್ಯದ ಅತ್ಯಂತ ಪ್ರತಿಷ್ಠೆಯ ಕಣವಾಗಿದ್ದ ಅಥಣಿಯಲ್ಲಿ ಮಹೇಶ ಕುಮಟಳ್ಳಿ ಗೆದ್ದು ಬಂದರೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಾವೇ ಗೆದ್ದಂತೆ ಮಂದಹಾಸ ಬೀರಿದರು. ಇಲ್ಲಿ ಗೆಲುವಿನ ಶ್ರೇಯಸ್ಸು ಕುಮಟಳ್ಳಿ ಜತೆಗೆ ಸವದಿಗೂ ಸಲ್ಲಬೇಕು.

ಸರ್ಕಾರದ ಉಳಿವಿನ ಪ್ರಶ್ನೆಯಾಗಿದ್ದರಿಂದ ಸಿಎಂ ಯಡಿ ಯೂರಪ್ಪ ತಾವೇ ರಂಗಪ್ರವೇಶ ಮಾಡಿದರು. ಅಥಣಿಗೆ ತೆರಳಿ ಕುಮಟಳ್ಳಿ ಗೆಲುವಿನ ಜವಾಬ್ದಾರಿಯನ್ನು ಸವದಿ ಹೆಗಲಿಗೆ ಹಾಕಿದರು. ಕ್ಷೇತ್ರದಲ್ಲಿ ನಿರ್ಣಾಯಕರಾಗಿರುವ ಲಿಂಗಾಯತ ಮತದಾರರ ಮನವೊಲಿಸಲು ಮುಂದಾದ ಯಡಿಯೂರಪ್ಪ ಸಮಾಜದ ಮುಖಂಡರ ಸಭೆ ನಡೆಸಿದರು. ಅವರ ಸಲಹೆ ಹಾಗೂ ಅಭಿಪ್ರಾಯ ಕೇಳಿ ಅನುಷ್ಠಾನದ ಭರವಸೆ ನೀಡಿದರು.

ಯಡಿಯೂರಪ್ಪ, ಮುಂದಾಲೋಚನೆ ಕುಮಟಳ್ಳಿ ಅವರನ್ನು ಆತಂಕದಿಂದ ಪಾರು ಮಾಡಿತು. ತಮ್ಮ ಉಪಮುಖ್ಯಮಂತ್ರಿ ಸ್ಥಾನ ಗಟ್ಟಿಯಾಗಿರಬೇಕಾದರೆ ಕುಮಟಳ್ಳಿ ಗೆಲುವು ಅನಿವಾರ್ಯ ಎಂಬುದನ್ನು ಅರಿತ ಸವದಿ ಪ್ರಚಾರದ ನೇತೃತ್ವ ವಹಿಸಿದರು. ಪ್ರಚಾರಕ್ಕೆ ಹೋದಲ್ಲೆಲ್ಲ ಸವದಿ ಅವರನ್ನು ಕರೆದುಕೊಂಡು ಹೋಗುತ್ತಿದ್ದ ಮಹೇಶ ಕುಮಟಳ್ಳಿಗೆ ನೆರೆ ಸಂತ್ರಸ್ತರ ಪ್ರತಿಭಟನೆಯ ಸ್ವಾಗತ ಸಿಕ್ಕಿತಾದರೂ, ಕೊನೆಯ ಕ್ಷಣದಲ್ಲಿ ಸಮಯದಲ್ಲಿ ಮತದಾರರು ಕೈಹಿಡಿದರು.

ಸವದಿ, ಬಿರುಸಿನ ಪ್ರಚಾರದ ಜೊತೆಗೆ ಕುಮಟಳ್ಳಿ ಗೆದ್ದರೆ ಸಚಿವರನ್ನಾಗಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ನೀಡಿದ ಭರವಸೆ ಮತದಾರರ ಮೇಲೆ ಪರಿಣಾಮ ಬೀರಿತು. ಕಾಂಗ್ರೆಸ್‌ನಲ್ಲಿ ಚುನಾವಣೆ ಗಂಭೀರ ಕಾಣಲಿಲ್ಲ. ಅಭ್ಯರ್ಥಿಯ ಆಯ್ಕೆ ಆಸಮಾಧಾನ ಕೊನೆ ವರೆಗೂ ಮುಂದುವರಿಯಿತು. ಕುಮಟಳ್ಳಿ ಬಗ್ಗೆ ಮತದಾರರಿಗೆ ಇದ್ದ ಸಿಟ್ಟನ್ನು ಸರಿಯಾಗಿ ಬಳಸಿ ಕೊಳ್ಳಲು ಕಾಂಗ್ರೆಸ್‌ ನಾಯಕರು ವಿಫಲರಾದರು. ಇನ್ನೊಂದು ಕಡೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ವಿವಾದಾತ್ಮಕ ಭಾಷಣ ಕಾಂಗ್ರೆಸ್‌ ಮೇಲೆ ಪ್ರತಿಕೂಲ ಪರಿಣಾಮ ಬೀರಿತು.

ಗೆದ್ದವರು
ಮಹೇಶ ಕುಮಟಳ್ಳಿ (ಬಿಜೆಪಿ)
ಪಡೆದ ಮತ: 99,203
ಗೆಲುವಿನ ಅಂತರ‌: 39,989

ಸೋತವರು
ಗಜಾನನ ಮಂಗಸೂಳಿ (ಕಾಂಗ್ರೆಸ್‌)
ಪಡೆದ ಮತ: 59,214

ಶ್ರೀಶೈಲ ಹಳ್ಳದಮಳ(ಪಕ್ಷೇತ ರ)
ಪಡೆದ ಮತ: 1,892

ಗೆದ್ದದ್ದು ಹೇಗೆ?
-ಅಭ್ಯರ್ಥಿ ಮಹೇಶ ಕುಮಟಳ್ಳಿ ಗೆಲುವಿನ ಹೊಣೆ ಹೊತ್ತು ಡಿಸಿಎಂ ಲಕ್ಷ್ಮಣ ಸವದಿ ಪ್ರಚಾರ

-ಲಿಂಗಾಯತ ಸಮಾಜ ನಮ್ಮನ್ನು ಕೈಬಿಡಬಾರದು ಎಂದು ಸಿಎಂ ಯಡಿಯೂರಪ್ಪ ಮನವಿ

-ಮಹೇಶ ಕುಮಟಳ್ಳಿ ಗೆಲ್ಲಿಸಿದರೆ ಸರ್ಕಾರದಲ್ಲಿ ಸಚಿವ ಸ್ಥಾನ, ಸವದಿಗೆ ಡಿಸಿಎಂ ಪಟ್ಟ ಕಾಯಂ ಭರವಸೆ

ಸೋತದ್ದು ಹೇಗೆ?
-ಕಾಂಗ್ರೆಸ್‌ ಅಭ್ಯರ್ಥಿ ಗಜಾನನ ಮಂಗಸೂಳಿ ಬಗ್ಗೆ ಕ್ಷೇತ್ರದ ಜನರಿಗೆ ಪರಿಚಯ ಇಲ್ಲದ್ದು

-ಸಿದ್ದರಾಮಯ್ಯ, ಎಂ.ಬಿ. ಪಾಟೀಲ ಹೊರತುಪಡಿಸಿ, ಹಿರಿಯ ನಾಯಕರು ನಿರಾಸಕ್ತಿ

-ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಮಹೇಶ ಕುಮಟಳ್ಳಿ ವಿರುದ್ಧ ಮಾಡಿದ ವಿವಾದಾತ್ಮಕ ಭಾಷಣ.

ವಿರೋಧಿಗಳಿಗೆ ಮತದಾರರು ಅದಕ್ಕೆ ತಕ್ಕ ಉತ್ತರ ನೀಡಿದ್ದಾರೆ. ನಮ್ಮ ವಿರುದ್ಧ ಡ್ಯಾಶ್‌ ಡ್ಯಾಶ್‌ ಎಂದು ಹೇಳಿದ್ದ ಹೆಬ್ಬಾಳಕರ, ಅದೇ ಹೆಸರಿನಿಂದ ಖ್ಯಾತರಾಗಲಿದ್ದಾರೆ.
-ಮಹೇಶ ಕುಮಟಳ್ಳಿ, ಬಿಜೆಪಿ ವಿಜೇತ ಅಭ್ಯರ್ಥಿ

ನಾನು ಸೋಲು ನಿರೀಕ್ಷೆ ಮಾಡಿರಲಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ನನಗೆ ಎಲ್ಲ ರೀತಿಯಿಂದ ಸಹಾಯ ಹಾಗೂ ಸಹಕಾರ ನೀಡಿದ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ.
-ಗಜಾನನ, ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿ

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.