ಕುಂದಗೋಳ: ಮೊಹರಂ ಭಕ್ತಿ ಸಂಗಮ- ಮುಸ್ಲಿಮರೇ ಇಲ್ಲದ ಹಳ್ಳಿಗಳಲ್ಲೂ ಹಬ್ಬದಾಚರಣೆ

ಪ್ರತಿ ಜನಾಂಗದವರು ಈ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮದಿಂದ ಆಚರಿಸುತ್ತಿದ್ದಾರೆ

Team Udayavani, Jul 29, 2023, 1:53 PM IST

ಕುಂದಗೋಳ: ಮೊಹರಂ ಭಕ್ತಿ ಸಂಗಮ- ಮುಸ್ಲಿಮರೇ ಇಲ್ಲದ ಹಳ್ಳಿಗಳಲ್ಲೂ ಹಬ್ಬದಾಚರಣೆ

ಕುಂದಗೋಳ: ತಾಲೂಕಿನಾದ್ಯಾಂತ ಹಲವಾರು ಗ್ರಾಮಗಳಲ್ಲಿ ಮೊಹರಂ ಭಕ್ತಿ ಭಾವದಿಂದ ಆಚರಣೆಗೊಳ್ಳುತ್ತದೆ. ಮುಸ್ಲಿಂ ಬಾಂಧವರಿಲ್ಲದ ಗ್ರಾಮಗಳಲ್ಲೂ ತಮ್ಮದೇ ವಿಶಿಷ್ಟ ರೀತಿಯಲ್ಲಿ ಹಿಂದೂಗಳು ಹಬ್ಬ ಆಚರಿಸುತ್ತ ಬರುತ್ತಿದ್ದಾರೆ. ಇಲ್ಲಿನ ಮಣ್ಣಿನ ವೈಶಿಷ್ಟ್ಯವೇ ಅಂತಹದ್ದು. ಇಲ್ಲಿ ನಡೆಯುವ ಧಾರ್ಮಿಕ ಸಂಪ್ರದಾಯಗಳು ರಾಜ್ಯದಲ್ಲಿಯೇ ಮಾದರಿಯಾಗುತ್ತಿವೆ.

ಯರಗುಪ್ಪಿಯ ಮೊಹರಂ ಎಂದಾಕ್ಷಣ ಅಲ್ಲಿ ಸೇರುವ 4 ಗ್ರಾಮಗಳ 7 ಡೋಲಿಗಳೇ ನೋಡುಗರ ಮನಸ್ಸನ್ನು ಸೂರೆಗೊಳ್ಳುತ್ತವೆ. ಈ ಕ್ಷಣ ಜು.30ರಂದು ಕೂಡಿಬರುತ್ತಿದೆ. ಹೈಸ್ಕೂಲ್‌ ಮೈದಾನಕ್ಕೆ ಸೂರ್ಯ ಅಸ್ತಂಗತನಾಗುವುದರೊಳಗೆ ಯರಗುಪ್ಪಿಯ 3, ಚಿಕ್ಕನರ್ತಿಯ 2, ಯರಿನಾರಾಯಣಪುರ ಮತ್ತು ಮುಳ್ಳೊಳ್ಳಿಯ ತಲಾ ಒಂದೊಂದು ಸೇರಿ ಒಟ್ಟು 7 ಡೋಲಿಗಳು ಹೆಜ್ಜೆಮೇಳಗಳ
ಸಂಭ್ರಮದಲ್ಲಿ ಹೊಳೆಗೆ ಹೋಗುವ ಮೂಲಕ ಮೊಹರಂ ಕೊನೆಗೊಳ್ಳುತ್ತದೆ.

ಯರಗುಪ್ಪಿಯಲ್ಲಿ ಡೋಲಿಗಳು ಒಂದು ದಿನ ತಡವಾಗಿ ಜು.30ರಂದು ಹೊಳೆಗೆ ಹೋಗುತ್ತವೆ. ಆದರೆ ತಾಲೂಕಿನಲ್ಲಿರುವ ಉಳಿದೆಲ್ಲಾ ಡೋಲಿಗಳ ದೇವರುಗಳು ಜು. 29ರಂದೇ ಹೊಳೆಗೆ ಹೋಗುತ್ತವೆ. ನಮ್ಮೂರನ್ಯಾಗ ಹಿಂದಿನಿಂದ ಈ ಹಬ್ಬಾ ಆಚರಿಸಾಕತ್ತೇವಿ. ನಮ್‌ ಹಿರ್ರಿಯರು ಮಾಡಿಕೊಂಡು ಬರುತ್ತಿರುವ ಸಂಪ್ರದಾಯ ಬಿಟ್ಟಿಲ್ಲ. ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಮರು ಸೇರಿ ವಿಜೃಂಭಣೆಯಿಂದ ಆಚರಿಸ್ತೇವೆ ಎನ್ನುತ್ತಾರೆ ಗ್ರಾಮದ ಹಿರಿಯರಾದ ಎಂ.ಐ. ಮುದ್ದಣ್ಣವರ. ಇಲ್ಲಿನ ಮಕಾನನ್ನು ಗ್ರಾಮದ ಜನರ ದೇಣಿಗೆಯಿಂದ ನಿರ್ಮಿಸಲಾಗಿದ್ದು, ಪ್ರತಿ ಜನಾಂಗದವರು ಈ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮದಿಂದ ಆಚರಿಸುತ್ತಿದ್ದಾರೆ ಎಂದರು.

ಹಿಂದೂಗಳಿಂದಲೇ ಆಚರಣೆ: ಪಟ್ಟಣದ ಸ್ಥಳೀಯ ಗಾಣಿಗ ಮನೆತನದವರಾದ ರೇವಣಸಿದ್ಧಪ್ಪ ಬಸಪ್ಪ ಹೊಳಿಯವರ
ಮುಂದಾಳತ್ವದಲ್ಲಿ ಹಟೇಲಪಾಶಾ ಪಾಂಜಾ ಸ್ಥಾಪಿಸಿ ಮುಸ್ಲಿಂ ಧರ್ಮಗುರುಗಳ ಮಾರ್ಗದರ್ಶನದಲ್ಲಿ ಹಬ್ಬ ನಡೆಯುತ್ತವೆ.
ಇನ್ನು ಮುಸ್ಲಿಮರೇ ಇಲ್ಲದ ಗೌಡಗೇರಿ, ಕೊಡ್ಲಿವಾಡ, ರಟಗೇರಿ, ಹೊಸಕಟ್ಟಿ, ವಿಠಲಾಪುರಗಳಲ್ಲಿ ಮೊಹರಂ ಹಬ್ಬದಾಚರಣೆಗೆ ನೂರಾರು ವರ್ಷಗಳ ಇತಿಹಾಸವಿದೆ. ಇಲ್ಲಿ ಹಿಂದೂಗಳೇ ಮಸೂತಿಗಳನ್ನು ಕಟ್ಟಿಸಿ, ಹಬ್ಬದಂದು ಮುಸ್ಲಿಂ ಗುರುಗಳೊಬ್ಬರನ್ನು ಕರೆಸಿ ದೇವರುಗಳನ್ನು ಪ್ರತಿಷ್ಠಾಪಿಸಿ, ಡೋಲಿಗಳನ್ನು ಶೃಂಗರಿಸಿ ಹೊತ್ತುಕೊಂಡು, ಮಸೂತಿ ಮುಂದಿನ ಅಗ್ನಿಕುಂಡದಲ್ಲಿ ಹಾಯ್ದು, ಮನೆ ಮನೆಗೆ ಭೇಟಿಕೊಟ್ಟು ಭಕ್ತರ ಇಷ್ಟಾರ್ಥವನ್ನು ಪೂರೈಸಿ, ಕೊನೆಗೆ ದೇವರುಗಳೆಲ್ಲ ಹೊಳೆಗೆ ಹೋಗುವುದರೊಂದಿಗೆ ಹಬ್ಬವು ಕೊನೆಗೊಳ್ಳುತ್ತದೆ.

ಗೌಡಗೇರಿಯಲ್ಲಿ ಮುಸ್ಲಿಂ ಬಾಂಧವರು ಇಲ್ಲದಿದ್ದರೂ ಅಲ್ಲಿನ ಜನರು ನೂರಾರು ವರ್ಷಗಳಿಂದ ಮೊಹರಂ ಹಬ್ಬವನ್ನು
ಭಕ್ತಿಭಾವದಲ್ಲಿ ಆಚರಿಸುತ್ತಿದ್ದಾರೆ. ಗ್ರಾಮದ ಮಧ್ಯಭಾಗದಲ್ಲಿ ಮಕಾನ್‌ ನಿರ್ಮಿಸಿದ್ದಾರೆ. ಪ್ರತಿವರ್ಷ ಇದರಲ್ಲಿಯೇ ಡೋಲಿಯನ್ನು ಶೃಂಗರಿಸಿ, ಲೋಹದ ಪಂಜಾಗಳನ್ನು ವಸ್ತ್ರಗಳಿಂದ ವಿಶಿಷ್ಟ ರೀತಿಯಲ್ಲಿ ಅಲಂಕರಿಸಿ, ಶ್ರೀಗಂಧದಿಂದ
ಪೂಜಿಸುತ್ತಾರೆ. ಇಷ್ಟಾರ್ಥ ಈಡೇರಿಕೆಗೆ ದೇವರನ್ನು ಬೇಡಿಕೊಳ್ಳುತ್ತಾರೆ

*ಶೀತಲ್‌ ಎಸ್‌.ಎಂ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.