ಕುಂದಾಪುರ: ಹಡಿಲು ಭೂಮಿ ಹಸನಾಗಿಸಿದ ಯುವಪಡೆ

ಪಡುಕೋಣೆಯ ಗ್ರಾಮಸ್ಥರು,  ಡಿವೈಎಫ್‌ಐ ಘಟಕದಿಂದ ಮಾದರಿ ಕಾರ್ಯ

Team Udayavani, Jun 23, 2020, 5:23 AM IST

ಕುಂದಾಪುರ: ಹಡಿಲು ಭೂಮಿ ಹಸನಾಗಿಸಿದ ಯುವಪಡೆ

ಕುಂದಾಪುರ: ಭತ್ತದ ಬೇಸಾಯ ಕ್ಷೀಣಿಸುತ್ತಿದ್ದು, ಅನ್ನದ ಬಟ್ಟಲುಗಳಾಗಿದ್ದ ಕರಾವಳಿಯ ಗದ್ದೆಗಳು ಈಗ ಹಡಿಲು ಬಿದ್ದಿವೆ. ಇದಕ್ಕೆ ಯುವ ಸಮೂಹ ಕೃಷಿಯಿಂದ ವಿಮುಖವಾಗುತ್ತಿರುವುದು ಸಹಿತ ಹಲವು ಕಾರಣಗಳಿವೆ.

ಈಗ ಪಡುಕೋಣೆಯ ಡಿವೈಎಫ್‌ಐ ಘಟಕದ ಯುವಕರ ತಂಡವೊಂದು ಕೃಷಿಯತ್ತ ಯುವ ಸಮುದಾಯವನ್ನು ಆಕರ್ಷಿಸಬೇಕು, ಹಡಿಲು ಭೂಮಿಯನ್ನು ಹಸನು ಮಾಡಬೇಕು ಎನ್ನುವ ಸದುದ್ದೇಶದಿಂದ ಊರವರ ಸಹಕಾರದೊಂದಿಗೆ ಹಡಿಲು ಭೂಮಿಯಲ್ಲಿ ಸಾಗುವಳಿ ಮಾಡುವ ಯೋಜನೆಯನ್ನು ಕಾರ್ಯ ರೂಪಕ್ಕಿಳಿಸಿ ಮಾದರಿ ಯಾಗಿದೆ.

ಈ ತಂಡವು ಕಳೆದ ವರ್ಷ ಮೊದಲ ಬಾರಿಗೆ ಸಣ್ಣದಾಗಿ ಪ್ರಯತ್ನ ಮಾಡಿದ್ದು, ಅದು ಯಶಸ್ವಿಯಾದ ನಿಟ್ಟಿನಲ್ಲಿ ಈಗ ದೊಡ್ಡ ಮಟ್ಟದಲ್ಲಿ ಗದ್ದೆಗಿಳಿಯುವ ಸಂಕಲ್ಪ ಮಾಡಿದೆ. ಸುಮಾರು 50ಕ್ಕೂ ಹೆಚ್ಚು ಮಹಿಳೆಯರು ನಾಟಿ ಕಾರ್ಯದಲ್ಲಿ ಭಾಗಿಯಾದರು.

3 ಎಕ್ರೆ ಪ್ರದೇಶದಲ್ಲಿ ನಾಟಿ
ಪಡುಕೋಣೆಯ ಸುತ್ತಮುತ್ತಲಿನ ಪರಿಸರದಲ್ಲಿ ನಾನಾ ಕಾರಣಗಳಿಂದಾಗಿ ಕಳೆದ 7-8 ವರ್ಷಗಳಿಂದ ಸುಮಾರು 5 ಮುಡಿ (3 ಎಕರೆ)ಯಷ್ಟು ಗದ್ದೆಗಳು ಹಡಿಲು ಬಿದ್ದಿದ್ದವು. ಈ ತಂಡವು ಗದ್ದೆಗಳ ಮಾಲಕರನ್ನು ಸಂಪರ್ಕಿಸಿ, ಅನುಮತಿ ಪಡೆದು, ವೈಜ್ಞಾನಿಕವಾಗಿ ಮಣ್ಣು ಪರೀಕ್ಷೆ ನಡೆಸಿ, ಅಗತ್ಯ ಪೋಷಕಾಂಶಗಳನ್ನು ಬಳಸಿ, ವೈಜ್ಞಾನಿಕ ಹಾಗೂ ಸಾಂಪ್ರದಾಯಿಕ ಪದ್ಧತಿಯಿಂದ ಸಾಲು ನಾಟಿ ಮಾಡಲಾಯಿತು.

ಪಡುಕೋಣೆ ವ್ಯ. ಸೇ. ಸ. ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ, ನಾಡ ಗ್ರಾ.ಪಂ. ಸದಸ್ಯರಾದ ರಾಜೇಶ ಪಡುಕೋಣೆ, ಡಿವೈಎಫ್‌ಐ ಪಡುಕೋಣೆ ಘಟಕದ ಅಧ್ಯಕ್ಷ ನಾಗರಾಜ ಕುರು, ಕಾರ್ಯದರ್ಶಿ ಕಿರಣ್‌ ಪಡುಕೋಣೆ, ಸದಸ್ಯರು ಉಪಸ್ಥಿತರಿದ್ದರು.

ಉತ್ಸಾಹ, ಸಂಭ್ರಮ
ರವಿವಾರ ಬೆಳಗ್ಗಿನಿಂದಲೇ ಇಲ್ಲಿನ ಮಾರಸ್ವಾಮಿ ದೇವಸ್ಥಾನದ ಹಿಂಭಾಗದ ವಿಶಾಲ ಗದ್ದೆಯಲ್ಲಿ ಜನಜಂಗುಳಿ. ಟಿಲ್ಲರ್‌ಗಳು ಉಳುಮೆ ಮಾಡುತ್ತಿದ್ದರೆ, ಮತ್ತೂಂದೆಡೆ ನಾಟಿ ಮಾಡುವ ಮಹಿಳೆಯರ ಸಾಲು. ಇದು ಹಿಂದಿನ ಕಂಬಳಗದ್ದೆ ನಾಟಿಯ ನೆನಪನ್ನು ಮೆಲುಕು ಹಾಕಿತ್ತು.

ಕೃಷಿಗೆ ಉತ್ತೇಜನ ಉದ್ದೇಶ
ಯುವಜನರನ್ನು ಕೃಷಿಯತ್ತ ಸೆಳೆಯಬೇಕು ಎನ್ನುವುದು ನಮ್ಮ ಉದ್ದೇಶ. ಆ ನೆಲೆಯಲ್ಲಿ ನಮ್ಮ ತಂಡ ಕಳೆದ ವರ್ಷದಿಂದ ಈ ಪ್ರಯತ್ನ ಮಾಡುತ್ತಿದೆ. ಹಡಿಲು ಬಿದ್ದಿರುವ ಭತ್ತದ ಗದ್ದೆಗಳನ್ನು ಕೃಷಿಗೆ ಸಿದ್ಧಪಡಿಸಿ ಕಳೆದ ವರ್ಷ ನಾಟಿ ಮಾಡಿದೆವು. ಅದೇ ಸ್ಫೂರ್ತಿಯಿಂದ ಈ ವರ್ಷವೂ ಅದನ್ನು ಮುಂದುವರಿಸಿದ್ದೇವೆ. ಪಡುಕೋಣೆ ಡಿವೈಎಫ್‌ಐಯ ಸದಸ್ಯರು, ಊರವರು ಇದರಲ್ಲಿ ಸಂತೋಷದಿಂದ ಪಾಲ್ಗೊಂಡಿದ್ದಾರೆ. -ನಾಗರಾಜ ಕುರು, ಅಧ್ಯಕ್ಷರು, ಡಿವೈಎಫ್‌ಐ ಪಡುಕೋಣೆ ಘಟಕ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.