Kundapur: ಪ್ರತೀ ಗ್ರಾ.ಪಂ.ನಲ್ಲಿ ಯೋಧರ ಸ್ಮಾರಕ; ಹಳ್ಳಿ ಮಣ್ಣು ದಿಲ್ಲಿಗೆ

ಸೇವೆಯಲ್ಲಿದ್ದಾಗ ಮೃತಪಟ್ಟವರ ಕುಟುಂಬದವರನ್ನು ಗೌರವಿಸಲಾಗುತ್ತದೆ.

Team Udayavani, Aug 10, 2023, 10:25 AM IST

Kundapur: ಪ್ರತೀ ಗ್ರಾ.ಪಂ.ನಲ್ಲಿ ಯೋಧರ ಸ್ಮಾರಕ; ಹಳ್ಳಿ ಮಣ್ಣು ದಿಲ್ಲಿಗೆ

ಕುಂದಾಪುರ: “ಮೇರಿ ಮಾಟಿ ಮೇರಾ ದೇಶ್‌’ (ನನ್ನ ಮಣ್ಣು ನನ್ನ ದೇಶ) ಅಭಿಯಾನ ಇಂದಿನಿಂದ (ಆ. 9) ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7, ಉಡುಪಿ ಜಿಲ್ಲೆಯಲ್ಲಿ 1 ಸೇರಿ ರಾಜ್ಯದಲ್ಲಿ ಕೇಂದ್ರ ಗೃಹ ಇಲಾಖೆಯ ಪಟ್ಟಿಯನುಸಾರ 468 ಯೋಧರ ವಿಶೇಷ ಸ್ಮಾರಕ ನಿರ್ಮಾಣವಾಗಲಿವೆ.

ಪ್ರಧಾನಿ ನರೇಂದ್ರ ಮೋದಿ ಆಶಯದ ಈ ಅಭಿಯಾನದಡಿ ವೀರ ಯೋಧರನ್ನು ಸ್ಮರಿಸಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗೆ ಹಳ್ಳಿಗಳಲ್ಲಿ ಅಭಿವೃದ್ಧಿಯಾದ ಅಮೃತ ಸರೋವರಗಳ ಬಳಿ ವೀರ ಯೋಧರ ಸ್ಮರಣಾರ್ಥ ಶಿಲಾಫಲಕ ಸ್ಥಾಪಿಸಲಾಗುವುದು. ಅಮೃತ ಸರೋವರ ಇಲ್ಲದಿದ್ದರೆ ಜಲಾಶಯ, ಪಂಚಾಯತ್‌ ಕಟ್ಟಡ, ಶಾಲಾ ಕಟ್ಟಡ ಬಳಿಯೂ ನಿರ್ಮಿಸಬಹುದು.

ಇದಲ್ಲದೇ ಎಲ್ಲ ಪಂಚಾಯತ್‌ ಗಳಲ್ಲಿ ವೀರಯೋಧರು, ಸ್ವಾತಂತ್ರ್ಯ ಹೋರಾಟಗಾರರು, ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆಯವರು, ಹುತಾತ್ಮರಾದ ರಾಜ್ಯ ಪೊಲೀಸ್‌ ಸಿಬಂದಿಯ ಸ್ಮಾರಕ ಶಿಲಾಫಲಕ ಸ್ಥಾಪನೆಯಾಗಲಿದೆ. ಅದರಲ್ಲಿ ಪ್ರಧಾನಿ, ಮುಖ್ಯಮಂತ್ರಿಯ ಸಂದೇಶ ಇರಲಿದೆ.

ಮೃತ್ತಿಕೆ ಸಂಗ್ರಹ
ದೇಶದ ಪ್ರತೀ ಪಂಚಾಯತ್‌ನಿಂದ ಮಣ್ಣನ್ನು ಸಂಗ್ರಹಿಸಿ 7,500 ಕಲಶಗಳ ಮೂಲಕ “ಅಮೃತ ಕಲಶ ಯಾತ್ರೆ’ಯಲ್ಲಿ
ಕೊಂಡೊಯ್ದು ದಿಲ್ಲಿಯಲ್ಲಿನ ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ಆ ಮಣ್ಣನ್ನು ಬಳಸಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು, “ಏಕ ಭಾರತ ಶ್ರೇಷ್ಠ ಭಾರತ’ದ ಸಂಕೇತವಾಗಿ “ಅಮೃತ್‌ ಉದ್ಯಾನ’ (ಅಮೃತ್‌ ವಾಟಿಕಾ) ನಿರ್ಮಾಣವಾಗಲಿದೆ.

4 ಕಾರ್ಯಕ್ರಮ
ಪ್ರತೀ ಪಂಚಾಯತ್‌ನಲ್ಲಿ ಆ. 9ರಿಂದ 16ರ ವರೆಗೆ ಹಾಗೂ ಆ. 16ರಿಂದ 20ರ ವರೆಗೆ ತಾ.ಪಂ., ಪಟ್ಟಣ ಪಂ., ಪುರಸಭೆ, ನಗರಸಭೆಯವರು “ನನ್ನ ಮಣ್ಣು ನನ್ನ ದೇಶ’ ಅಭಿಯಾನ ಕೈಗೊಳ್ಳಬೇಕು. ಆ. 25ರ ಒಳಗೆ ರಾಜ್ಯ ಮಟ್ಟದ ಕಾರ್ಯಕ್ರಮ ಪೂರ್ಣಗೊಳ್ಳಲಿದೆ. ಆ. 30ರಂದು ದಿಲ್ಲಿಯಲ್ಲಿ ಸಮಾರೋಪ ನಡೆಯಲಿದೆ.

ಅಭಿಯಾನವು “ಪಂಚ ಪ್ರಾಣ ಪ್ರತಿಜ್ಞಾ’, “ವಸುಧಾ ವಂದನ್‌’ (ಭೂಮಿಗೆ ನಮಸ್ಕಾರ), “ವೀರೋಂಕಾ ವಂದನ್‌’ (ವೀರರಿಗೆ ವಂದನೆ), ಸ್ವಾತಂತ್ರ್ಯ ಹೋರಾಟಗಾರರು ಮತ್ತು ಭದ್ರತಾ ಪಡೆಯ ವೀರಯೋಧರ ಸ್ಮರಣೆಯ “ಶಿಲಾಫಲಕ’ ಸ್ಥಾಪನೆಯನ್ನು ಒಳಗೊಂಡಿದೆ.  ನಿವೃತ್ತ ಯೋಧರು, ಶೌರ್ಯ ಪ್ರದರ್ಶಿಸಿದ ಪೊಲೀಸರು, ಸೇವೆಯಲ್ಲಿದ್ದಾಗ ಮೃತಪಟ್ಟವರ ಕುಟುಂಬದವರನ್ನು ಗೌರವಿಸಲಾಗುತ್ತದೆ.

ಪ್ರತೀ ಪಂಚಾಯತ್‌ ಸೂಕ್ತವೆನಿಸಿದ 75 ಗಿಡ ನೆಟ್ಟು ಅಮೃತ ವಾಟಿಕಾ ನಿರ್ಮಿಸಬೇಕು. ಸಾರ್ವಜನಿಕರು ಅಭಿಯಾನದಲ್ಲಿ ಪಾಲ್ಗೊಂಡು ಪಂಚ ಪ್ರಮಾಣ ವಚನ ಸ್ವೀಕರಿಸಿ ಫೋಟೋವನ್ನು ಕೇಂದ್ರ ಸರಕಾರದ ವೆಬ್‌ಸೈಟ್‌ https://merimaatimeradesh.gov.in/pledgeಗೆ ಸಲ್ಲಿಸಬಹುದು.

1971ರಲ್ಲಿ ವೀರಮರಣವನ್ನೈದ ಉಡುಪಿಯ ಮೇ| ಜಿ.ಬಿ. ಪಂಥ್‌ ರಸ್ತೆಯ ಕೆ.ಕೆ. ರಾವ್‌, ದ.ಕ. ಜಿಲ್ಲೆಯ ಮಂಗಳೂರಿನ ಕಾರ್‌ಸ್ಟ್ರೀಟ್‌ನ ರಘು ಪೂಜಾರಿ (1966), ಬಂಟ್ವಾಳದ ಭಂಡಾರಿಬೆಟ್ಟಿನ ಹ| ಚಂದ್ರಶೇಖರ ಎ. (1987), ಸುಳ್ಯ ಅಜ್ಜಾವರದ ವಿಶ್ವಂಭರ ಎಚ್‌.ಪಿ. (1987), ಬಜಪೆಯ ಹ| ಓಸ್ವಾಲ್ಡ್‌ ನೊರೊನ್ಹಾ (1992), ಪುತ್ತೂರು ದರ್ಭೆಯ ಹ| ಪರಮೇಶ್ವರ ಕೆ. (2002),
ಸುರತ್ಕಲ್‌ ಕೃಷ್ಣಾಪುರದ ಹ| ಗಿರೀಶ್‌ (2011), ಬೆಳ್ತಂಗಡಿ ಗುರುವಾಯನಕೆರೆಯ ಏಕನಾಥ ಕೆ. (2016) ಸೇರಿದ್ದಾರೆ

ಈಗಾಗಲೇ ಕಾರ್ಯಕ್ರಮಗಳು ಆರಂಭಗೊಂಡಿದ್ದು, ದಿನಕ್ಕೆ ಪ್ರತೀ ತಾಲೂಕಿನ 3-4 ಪಂಚಾಯತ್‌ಗಳಿಗೆ ನಿಗದಿಪಡಿಸಲಾಗಿದೆ. ಪ್ರತೀ ಹಳ್ಳಿಯಿಂದ ಸಂಗ್ರಹಿಸಿದ ಮೃತ್ತಿಕೆಯನ್ನು ದಿಲ್ಲಿಗೆ ತಲುಪಿಸಲಾಗುವುದು.
ಪ್ರಸನ್ನ ಎಚ್‌. ಸಿಇಒ, ಉಡುಪಿ ಜಿ.ಪಂ

*ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.