ಕುಂದಾಪುರ: ಗುಣಮುಖರಾಗಿ 14 ಮಂದಿ ಬಿಡುಗಡೆ


Team Udayavani, May 31, 2020, 4:33 PM IST

ಕುಂದಾಪುರ: ಗುಣಮುಖರಾಗಿ 14 ಮಂದಿ ಬಿಡುಗಡೆ

ಕುಂದಾಪುರ, ಮೇ 31: ಇಲ್ಲಿನ ಸರಕಾರಿ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ 14 ಮಂದಿ ಕೋವಿಡ್  ಸೋಂಕಿತರು ಗುಣಮುಖರಾಗಿ ರವಿವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು. ಅವರನ್ನು ತಾಲೂಕು ಆಡಳಿತ ಗುಲಾಬಿ ಕುಂಡ ನೀಡಿ, ಶುಭ ಹಾರೈಸಿ ಬೀಳ್ಕೊಟ್ಟಿತು. ಜಿಲ್ಲೆಯಲ್ಲಿ ಕೋವಿಡ್‌ 19ಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ತೆರಳಿದ ಮೊದಲ ಘಟನೆ ಇದಾಗಿದೆ.

ಕೋವಿಡ್‌ 19ಗಾಗಿ ಮೀಸಲಿಟ್ಟ ಈ ಆಸ್ಪತ್ರೆಯಲ್ಲಿ ಒಟ್ಟು 78 ಮಂದಿ ರೋಗಲಕ್ಷಣವಿಲ್ಲದೆ ಪಾಸಿಟಿವ್‌ ಬಂದ ಕ್ವಾರಂಟೈನ್‌ನಲ್ಲಿದ್ದ ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ ಏಳನೆ ದಿನಕ್ಕೆ 3 ವರ್ಷ, 8 ವರ್ಷ ಮತ್ತು 14 ವರ್ಷದ ಮಕ್ಕಳು ಸಹಿತ 55 ವರ್ಷದರವರೆಗಿನ ಒಟ್ಟು 14 ಮಂದಿಯ ಗಂಟಲು ದ್ರವದ ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದಿದೆ. ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಇವರಲ್ಲಿ ಬಹುತೇಕ ಮಂದಿ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸಿದವರು, ಒಂದಷ್ಟು ಮಂದಿ ತೆಲಂಗಾಣದಿಂದ ಬಂದವರು.

ಕುಂದಾಪುರ ಸಹಾಯಕ ಕಮಿಷನರ್‌ ಕೆ. ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸುಧೀರ್‌ಚಂದ್ರ ಸೂಡ, ಕೋವಿಡ್‌ 19 ಜಿಲ್ಲಾ ನೋಡಲ್‌ ಅಧಿಕಾರಿ ಡಾ| ಪ್ರಶಾಂತ್‌ ಭಟ್‌, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ, ಸರಕಾರಿ ಆಸ್ಪತ್ರೆಯ ಆಡಳಿತ ಶಸ್ತ್ರಚಿಕಿತ್ಸಕ ವೈದ್ಯಾಧಿಕಾರಿ ಡಾ| ರಾರ್ಬಟ್‌ ರೆಬೆಲ್ಲೊ, ಪಿಜಿಶಿಯನ್‌ ಡಾ| ನಾಗೇಶ್‌, ಬೈಂದೂರು ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಪ್ರೇಮಾನಂದ, ಕುಂದಾಪುರ ಪಿಎಸ್‌ಐ ಹರೀಶ್‌ ಆರ್‌. ಮೊದಲಾದವರು ಕೋವಿಡ್‌ ಆಸ್ಪತೆಯಲ್ಲಿ ಚಿಕಿತ್ಸೆ ಪಡೆದು ಕೊರೋನ ಮುಕ್ತರಾದವರಿಗೆ ಗುಲಾಬಿ ನೀಡ, ಗುಲಾಬಿ ಗಿಡಗಳನ್ನು ವಿತರಿಸಿ, ಮಕ್ಕಳಿಗೆ ಚಾಕಲೇಟ್‌ ಕೊಟ್ಟು, ಚಪ್ಪಾಳೆ ತಟ್ಟಿ ಬಿಡುಗಡೆಯಾದವರಲ್ಲಿ ಹೊಸ ಜೀವನೋತ್ಸಾಹ ತುಂಬುವ ಮೂಲಕ ವಿಶೇಷ ರೀತಿಯಲ್ಲಿ ಬೀಳ್ಕೊಟ್ಟರು. ಕುಂದಾಪುರ ಜೆಸಿಐ ಸಿಟಿ ಸ್ಥಾಪಕಾಧ್ಯಕ್ಷ ಹುಸೇನ್‌ ಹೈಕಾಡಿ, ಸರಕಾರಿ ಆಸ್ಪತ್ರೆಯ ವೈದ್ಯರು, ಶುಶ್ರೂಷಕಿಯರು, ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ

ಇಂದು ಜೆಡಿಎಸ್‌ ಮಹತ್ವದ ಕೋರ್‌ ಕಮಿಟಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.