ಕುಂದಾಪುರದ “ಬಡವರ ವೈದ್ಯ” ಡಾ. ಎ.ಎಸ್. ಕಲ್ಕೂರ ವಿಧಿವಶ
Team Udayavani, Jul 9, 2022, 8:52 PM IST
ಕುಂದಾಪುರ: “ಬಡವರ ಡಾಕ್ಟರ್” ಎಂದೇ ಕುಂದಾಪುರ ಭಾಗದಲ್ಲಿ ಪ್ರಸಿದ್ಧಿ ಪಡೆದಿದ್ದ, ಹಂಗಳೂರಿನ ಯೂನಿಟಿ ಹಾಲ್ ಬಳಿಯ ನಿವಾಸಿ ಡಾ. ಎ.ಎಸ್. ಕಲ್ಕೂರ (87) ಅವರು ವಯೋ ಸಹಜ ಅಸೌಖ್ಯದಿಂದ ಜು. 9 ರಂದು ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಇವರು ಆರಂಭದಲ್ಲಿ ಸರಕಾರಿ ವೈದ್ಯರಾಗಿ ವಿವಿಧೆಡೆ ಸೇವೆ ಸಲ್ಲಿಸಿದ್ದು, ಬಳಿಕ ಕುಂದಾಪುರ ನಗರದಲ್ಲಿ ತಾವೇ ಸ್ವತಃ ಪುಟ್ಟದಾದ ಕ್ಲಿನಿಕ್ ತೆರೆದು, 5 ರೂ., 10 ರೂ., 20 ರೂ., 30 ರೂ.ನಷ್ಟು ಕಡಿಮೆ ವೆಚ್ಚದಲ್ಲಿ ರೋಗಿಗಳಿಗೆ ಚಿಕಿತ್ಸೆಯೊಂದಿಗೆ, ಔಷಧಿ ನೀಡುವ ಮೂಲಕ “ಬಡವರ ವೈದ್ಯ”ರೆಂದೇ ಜನಾನುರಾಗಿಯಾಗಿದ್ದರು.
ಸುಮಾರು 50 ವರ್ಷಗಳಿಗೂ ಹೆಚ್ಚು ಕಾಲದಿಂದ ಬಡವರ ಸೇವೆಗೆ ತಮ್ಮ ವೈದ್ಯಕೀಯ ವೃತ್ತಿಯನ್ನು ಮುಡಿಪಾಗಿಟ್ಟಿದ್ದರು. ಕುಂದಾಪುರ ತಾಲೂಕಿನ ಹಲವೆಡೆಗಳಿಂದ ಇವರಲ್ಲಿಗೆ ಸಾವಿರಾರು ಮಂದಿ ಶುಶ್ರೂಷೆಗಾಗಿ ಬರುತ್ತಿದ್ದರು. ನಾಟಕ ಕಲಾವಿದರಾಗಿದ್ದು, ಯಕ್ಷಗಾನ, ಕಲೆ, ಸಾಹಿತ್ಯದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು