ಕುಣಿಗಲ್: ಕೊಲೆ ಆರೋಪಿಗಳ ಬಂಧನ: ಗ್ರಾಮಸ್ಥರಿಂದ ಪೊಲೀಸರಿಗೆ ಸನ್ಮಾನ

ಪೊಲೀಸ್ ಸಿಬ್ಬಂದಿಗಳೇ ನಿಜವಾದ ಹೀರೋ: ಎಸ್ಪಿ ರಾಹುಲ್ ಕುಮಾರ್

Team Udayavani, Feb 22, 2023, 3:26 PM IST

9–kunigal

ಕುಣಿಗಲ್: ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿದ ಕುಣಿಗಲ್ ಪೊಲೀಸರ ಕಾರ್ಯದಕ್ಷತೆ ಮೆಚ್ಚಿ ಗ್ರಾಮಸ್ಥರು ಪೊಲೀಸರನ್ನು ಸನ್ಮಾನಿಸಿ, ಗೌರವಿಸಿದ ಅಪರೂಪದ ಪ್ರಸಂಗ ಬುಧವಾರ ಪಟ್ಟಣದಲ್ಲಿ ನಡೆಯಿತು.

ತಾಲೂಕಿನ ಸೀನಪ್ಪನಹಳ್ಳಿ ಗ್ರಾಮದ ಮಂಜುನಾಥ್ ಎಂಬವನನ್ನು ಫೆ 3 ರಂದು ಆತನ ಪತ್ನಿ ಹರ್ಷಿತಾ ತನ್ನ ಸಹಚರರೊಂದಿಗೆ ಸೇರಿ ಬರ್ಬರವಾಗಿ ಹತ್ಯೆಗೈದು ಯಾರಿಗೂ ಅನುಮಾನ ಬರಬಾರದೆಂಬ ಕಾರಣಕ್ಕೆ ಶವ ಹಾಗೂ ಬೈಕ್ ಅನ್ನು ಕೆರೆಯಲ್ಲಿ ಎಸೆದಿದ್ದರು.

ಪ್ರಕರಣ ಬೇಧಿಸಿದ ಕುಣಿಗಲ್ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಈ ಹಿನ್ನಲೆ ತಾಲೂಕಿನ ಸೀನಪ್ಪನಹಳ್ಳಿ ಹೊಸಕೆರೆ ಮೊದಲಾದ ಊರಿನ ಗ್ರಾಮಸ್ಥರು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಶಹಪುರ್‌ವಾದ್, ಡಿವೈಎಸ್‌ಪಿ ಲಕ್ಷ್ಮಿಕಾಂತ್, ಸಿಪಿಐಗಳಾದ ಗುರುಪ್ರಸಾದ್, ಅರುಣ್‌ಸಾಲಂಕಿ, ಪಿಎಸ್‌ಐ ಜಮಲ್‌ಅಹಮದ್ ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಿದರು.

ಪೊಲೀಸ್ ಸಿಬ್ಬಂದಿ ಹೀರೋ: ಎಸ್ಪಿ ರಾಹುಲ್ ಕುಮಾರ್ ಶಹಪುರ್‌ವಾದ್ ಮಾತನಾಡಿ, ಕೊಲೆ ಪ್ರಕರಣ ಪತ್ತೆ ಹಚ್ಚುವಲ್ಲಿ ಪೊಲೀಸ್ ಸಿಬ್ಬಂದಿಗಳ ಪಾತ್ರ ಅತ್ಯಮೂಲ್ಯವಾಗಿದೆ. ಹಾಗಾಗಿ ಇದರ ಶ್ರೇಯಸ್ಸು ಪೊಲೀಸ್ ಸಿಬ್ಬಂದಿಗೆ ಸಲ್ಲಬೇಕು. ಕೊಲೆ ಪ್ರಕರಣ ಭೇದಿಸಿದ ಪೊಲೀಸ್ ಸಿಬ್ಬಂದಿಗಳೇ ಹೀರೋ ಆಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆರೋಪಿಗಳಿಗೆ ಶಿಕ್ಷೆಯಾಗಲು ಸಾಕ್ಷಿ ಮುಖ್ಯ: ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಲಿದ್ದಾರೆ. ಆದರೆ ಆರೋಪಿಗಳಿಗೆ ಶಿಕ್ಷೆಯಾಗಬೇಕಾದರೆ ಸಾಕ್ಷಿಗಳ ಮುಖ್ಯ. ಹಾಗಾಗಿ ಯಾರು ಸಾಕ್ಷಿಗಳಿಗೆ ಸಹಿ ಹಾಕಿದ್ದೀರ ಅವರು ಯಾವುದೇ ಆಸೆ ಆಮಿಷ ಹಾಗೂ ಬೆದರಿಕೆಗೆ ಅಂಜದೇ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷಿ ಹೇಳಿದರೇ ನೂರಕ್ಕೆ ನೂರರಷ್ಟು ಆರೋಪಿಗಳಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದರು.

ಇದೇ ವೇಳೆ ಅನಾಥ ಶವಗಳ ಶವ ಸಂಸ್ಕಾರಕ್ಕೆ ಸೇವೆ ಸಲ್ಲಿಸುತ್ತಿರುವ ಅಂಬ್ಯುಲೆನ್ಸ್ ಚಾಲಕರು, ಆಸ್ಪತ್ರೆ ಸಿಬ್ಬಂದಿಗಳನ್ನು ಪೊಲೀಸ್ ಇಲಾಖೆಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯರಾದ ಬಿಳಿಲಿಂಗೇಗೌಡ, ಸ್ವಾಮಿ ಹಾಲುವಾಗಿಲು, ಮಾಜಿ ಸದಸ್ಯ ಬೈರಪ್ಪ, ವಿಎಸ್‌ಎಸ್‌ಎನ್ ಅಧ್ಯಕ್ಷ ಬೋರೇಗೌಡ ಹಾಗೂ ಇತರ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.