ಈ ಬಾರಿ ಸಿದ್ದರಾಮಯ್ಯ ಎಲ್ಲೇ ಸ್ಪರ್ಧೆ ಮಾಡಿದ್ರೂ ಸೋಲು ಮಾತ್ರ ಖಚಿತ: ಸಚಿವ ಶ್ರೀರಾಮುಲು
Team Udayavani, Jan 31, 2023, 2:42 PM IST
ಕುರುಗೋಡು: ರಾಜ್ಯದ ಜನರಿಗೆ ಮಂಕುಬೂದಿ ಹಚ್ಚುತ್ತಾ ಸುಳ್ಳು ಯಾತ್ರೆಗಳನ್ನು ಎರಡು ಪಕ್ಷಗಳು ಮಾಡಿಕೊಂಡು ಹೋಗುತ್ತಿವೆ ಇವು ಯಾವುವು ಕೂಡಾ ಕಾರ್ಯ ರೂಪಕ್ಕೆ ಬರುವುದಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.
ಸಮೀಪದ ಎಮ್ಮಿಗನೂರು ಗ್ರಾಮದ ಛಲವಾದಿ ಕಾಲೋನಿಯಲ್ಲಿ ನೆರೆವೆರಿದ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಯಾತ್ರೆಗಳು ಮಾಡಿದರು ಮುಂದೆ ಅಧಿಕಾರಕ್ಕೆ ಬರಲ್ಲ ಮತ್ತೆ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷ ಸ್ಪಷ್ಟಬಹುಮತ ಪಡೆದು ಅಧಿಕಾರ ಹಿಡಿಯಲಿದೆ ಎಂದರು.
ಸಿದ್ದರಾಮಯ್ಯ ಮೊದಲು ಬಾದಾಮಿ, ಈಗ ಕೋಲಾರ, ವರುಣಾದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ. ಅವರು ಎಲ್ಲೇ ಸ್ಪರ್ಧೆ ಮಾಡಿದರೂ ಈ ಬಾರಿ ಅವರು ಸೋಲುವುದು ಮಾತ್ರ ನಿಚ್ಚಿತ ಎಂದರು.
ಈ ಬಾರಿ ಬಳ್ಳಾರಿಯಿಂದಲೇ ಅಂದರೆ ಗ್ರಾಮೀಣ ಅಥವಾ ಸಂಡೂರು ಕ್ಷೇತ್ರಗಳಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.
ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಬಿಜೆಪಿ ಪಕ್ಷಕ್ಕೆ ವರಿಷ್ಟರು ಕರೆತರುವ ವಿಷಯದ ಬಗ್ಗೆ ನನಗೆ ಗೊತ್ತಿಲ್ಲ ಇದರ ಬಗ್ಗೆ ಈಗಾಲೆ ಏನು ಅಂತ ಹೇಳಲಾಗುವುದಿಲ್ಲ ಎಂದು ಹೇಳಿದರು.
ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 130 ರಿಂದ 140 ಸ್ಥಾನಗಳನ್ನು ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿವೆ ಎಂದರು.
ಕಂಪ್ಲಿ ಕ್ಷೇತ್ರದಲ್ಲಿ ಶಾಸಕ ಗಣೇಶ್ ಮಾತನಾಡಿ ಸಂವಿಧಾನ ಬದ್ದವಾಗಿ ರಾಜಕೀಯ ಮಾಡಬೇಕು. ಕಳೆದ ಕಾರ್ಯಕ್ರಮಗಳು ಮಾಡಿರೋದು ಅವರ ಸ್ಥಾನಕ್ಕೆ ಶೋಭೆಯಲ್ಲ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸುರೇಶ್ ಬಾಬು, ಮಾಜಿ ಲೋಕಸಭಾ ಸದಸ್ಯೆ ಜೆ. ಶಾಂತ, ಕಂಪ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸಿ. ಆರ್. ಹನುಮಂತ, ಎಸ್ಟಿ ಸಮುದಾಯದ ಮುಖಂಡ ವಿ. ಕೆ. ಬಸಪ್ಪ, ಗ್ರಾಪಂ ಅಧ್ಯಕ್ಷೆ ಚನ್ನದಾಸರ ಅಂಜಿನಮ್ಮ ನಾರಾಯಣಪ್ಪ ಸೇರಿದಂತೆ ಗ್ರಾಮದ ಮುಖಂಡರು ಮತ್ತು ಕಾರ್ಯಕರ್ತರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ