ಯಾರು ಏನೇ ಅಂದುಕೊಂಡರೂ ತಲೆಕೆಡಿಸಿಕೊಳ್ಳೋಕೆ ಹೋಗಲ್ಲ : ಶಾಸಕ ಗಣೇಶ್


Team Udayavani, Feb 27, 2023, 3:43 PM IST

6–kurugodu

ಕುರುಗೋಡು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯ ಒಂದು ಶಕ್ತಿ. ಅವರ ಬಗ್ಗೆ ಯಾರೋ ಸಣ್ಣ-ಪುಟ್ಟ ವ್ಯಕ್ತಿಗಳು ಮಾತನಾಡುತ್ತಾರೆ ಅಂದ್ರೆ ಆದರ ಬಗ್ಗೆ ನಾನು ಮಾತನಾಡೋಕೆ ಹೋಗಲ್ಲ ಅವರ ಬಗ್ಗೆ ಸಂಪೂರ್ಣವಾಗಿ ಜನರಿಗೆ ಗೊತ್ತಿದೆ. ಕೇವಲ ಬ್ಯಾನರ್ ನಲ್ಲಿ ಭಾವಚಿತ್ರ ಹಾಕಿಕೊಂಡರೆ ಮಾತ್ರ ವಿಸ್ವಾಸ ಇದೆ ಎಂದಲ್ಲ. ಅವರು ಯಾವಾಗಲು ಮನಸ್ಸಿನಲ್ಲಿರುತ್ತಾರೆ ಎಂದು ಶಾಸಕ ಜೆ. ಎನ್.ಗಣೇಶ್ ಹೇಳಿದರು.

ಸಮೀಪದ ಒರ್ವಾಯಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜ್ಯದ ಜನತೆಯ ಶಕ್ತಿ ಮಾತ್ರವಲ್ಲ. ನಮ್ಮ ಶಕ್ತಿ ಕೂಡ. ಅವರ ಬಗ್ಗೆ ನಮ್ಮ ಮನಸ್ಸಿನಲ್ಲಿದ್ದರೆ ಸಾಕು, ಬ್ಯಾನರ್ ನಲ್ಲಿ ತೋರಿಸುವ ಅಗತ್ಯವಿಲ್ಲ. ಯಾರು ಏನೇ ಅಂದುಕೊಂಡರು ಅದರ ಬಗ್ಗೆ ತೆಲೆಕೆಡಿಸಿಕೊಳ್ಳೋಕೆ ಹೋಗಲ್ಲ ಎಂದು ತಿಳಿಸಿದರು.

ಇನ್ನೂ ಭದ್ರಾ ಜಲಾಶಯದಿಂದ ವಿಜಯನಗರ ತುಂಗಭದ್ರಾ ಜಲಾಶಯಕ್ಕೆ ಬೇಸಿಗೆ ಹಂಗಾಮಿಗೆ 7 ಟಿಎಂಸಿ ಅಡಿ ನೀರು ಹರಿಸಬೇಕು ಎಂದು ಎಐಸಿಸಿ ಸಭೆಯಲ್ಲಿ ಸಚಿವರಾದ ಆನಂದ್ ಸಿಂಗ್, ಶ್ರೀರಾಮುಲು ಸೇರಿದಂತೆ ಬಹುತೇಕ ಶಾಸಕರುಗಳು ಕರ್ನಾಟಕ ನೀರಾವರಿ ನಿಗಮದ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ (ಕಾಡಾ) ಪ್ರಸ್ತಾವನೆ ಸಲ್ಲಿಸಲಾಯಿತ್ತು ಎಂದರು.

ಇದರ ಬಗ್ಗೆ ಯಾವ ರೀತಿಯಲ್ಲಿ ವರದಿ ಬಂದಿದೆ ನೋಡಿಕೊಂಡು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಿ ಕೊಡಲಾಗುವುದು ಎಂದು ಹೇಳಿದರು.

ಹೊಸಪೇಟೆಯ ತುಂಗಭದ್ರಾ ಜಲಾಶಯದಿಂದ ಬರುವ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ಬಲದಂಡೆ ಎಲ್ ಎಲ್ ಸಿ ಕಾಲುವೆಗೆ ಹರಿಸುವ ನೀರು ಏ.10 ಕ್ಕೆ ಸ್ಥಗಿತಗೊಂಡರೆ, ರೈತರು ಬೆಳೆದ ಬೆಳೆಗಳಿಗೆ ಸಮರ್ಪಕವಾಗಿ ನೀರು ಸಿಗದೆ ಕೊನೆ ಯದಲ್ಲಿ ಬೆಳೆ ಒಣಗಿ ಇಳುವರಿ ಕುಂಟಿತಗೊಳ್ಳುತ್ತದೆ. ಇದರಿಂದ ರೈತರು ನಷ್ಟಕ್ಕೆ ಸಿಲುಕಿಕೊಳ್ಳುವ ಸಾಧ್ಯತೆ ಹೆಚ್ಚು. ಆದ್ದರಿಂದ ಏಪ್ರಿಲ್ ಕೊನೆಯವರೆಗೂ ನೀರು ಹರಿಸುವುದಾಗಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ತಿಳಿಸಲಾಗುವುದು ಎಂದರು.

2022 ರಲ್ಲಿ ಜರುಗಿದ ಕುರುಗೋಡು ಶ್ರೀ ದೊಡ್ಡಬಸವೇಶ್ವರ ಜಾತ್ರೆ ಪ್ರಯುಕ್ತ ಕಂಪ್ಲಿ ಕ್ಷೇತ್ರದ ರೈತರ ಅನುಕೂಲಕ್ಕಾಗಿ ಪಾದಯಾತ್ರೆ ಮಾಡಿದ್ದೆ. ಇವತ್ತು ಕ್ಷೇತ್ರದ ರೈತರು ಬೆಳೆದ ಮೆಣಿಸಿನಕಾಯಿ, ಭತ್ತ, ಜೋಳ, ಸೇರಿದಂತೆ ಅನೇಕ ಬೆಳೆಗಳಿಗೆ ಉತ್ತಮ ಬೆಲೆ ಸಿಕ್ಕಿ, ಇಳುವರಿ ಕಂಡು ಸಮೃದ್ಧಿಯ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಮತ್ತೊಮ್ಮೆ ಎರಡನೇ ಪಾದಯಾತ್ರೆ ಮಾರ್ಚ್ ನಲ್ಲಿ ಕ್ಷೇತ್ರದ ರೈತರ ಅನುಕೂಲಕ್ಕೆ ಹಮ್ಮಿಕೊಂಡಿದ್ದು, ಎಲ್ಲ ರೈತರು ಕೂಡ ಇದಕ್ಕೆ ಬೆಂಬಲ ನೀಡಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.