ಕುಷ್ಟಗಿ: ಹಳ್ಳದ ದಡದಲ್ಲಿ ಸತ್ತ ನರಿ ಪತ್ತೆ; ಅರಣ್ಯ ಇಲಾಖೆ ನಿರ್ಲಕ್ಷ್ಯ
Team Udayavani, Feb 16, 2023, 3:45 PM IST
ಕುಷ್ಟಗಿ: ತಾಲೂಕಿನ ಟೆಂಗುಂಟಿ ಹಳ್ಳದ ದಡದಲ್ಲಿ ವನ್ಯಜೀವಿ ನರಿ ಅನುಮಾನಸ್ಪದವಾಗಿ ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ.
ಗ್ರಾಮದ ಹೊರವಲಯದಲ್ಲಿರುವ ಚಕ್ ಡ್ಯಾಂ ಬಳಿ ಕಳೆದ ಬುಧವಾರ ನರಿ ಸತ್ತು ಬಿದ್ದಿದ್ದು, ಅರಣ್ಯ ಇಲಾಖೆಯವರು ಈವರೆಗೂ ಗಮನಿಸದೇ ನಿರ್ಲಕ್ಷಿಸಿರುವುದು ಕಂಡು ಬಂದಿದೆ.
ಹಳ್ಳದ ದಡದಲ್ಲಿ ನರಿ ಸತ್ತು ಬಿದ್ದಿರುವುದನ್ನು ಗಮನಿಸಿದ್ದ ಮುದೇನೂರು ಗ್ರಾಮ ಪಂಚಾಯತ್ ಸದಸ್ಯ ಹುಸೇನಪ್ಪ ಮುದೇನೂರು, ಮೊಬೈಲ್ ನಲ್ಲಿ ಫೋಟೋ ತೆಗೆದು ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದರೂ, ಸಿಬ್ಬಂದಿಗಳ್ಯಾರು ಆಗಮಿಸಿ ಸತ್ತ ನರಿಯ ಮರಣೋತ್ತರ ಪರೀಕ್ಷೆ ನಡೆಸಿಲ್ಲ ಎಂದು ಹುಸೇನಪ್ಪ ಮುದೇನೂರು ಆರೋಪಿಸಿದ್ದಾರೆ.
ಹಳ್ಳದ ದಡದಲ್ಲಿ ಸತ್ತಿರುವ ನರಿಯ ಸ್ಥಿತಿ ಗಮನಿಸಿದರೆ ಬಿಸಿಲಿಗೆ ಬಾಯಾರಿದ ನರಿ ನೀರನ್ನು ಅರಸಿ ಹಳ್ಳದ ದಡಕ್ಕೆ ಬರುವಾಗ ಕೊರಕಲು ಮೇಲಿಂದ ಬಿದ್ದು ನಿತ್ರಾಣ ಕೊಂಡು ಸತ್ತಿರಬಹುದೇ ಇಲ್ಲ ನರಿಯ ಕಾಟ ತಾಳಲಾರದೇ ಸ್ಥಳೀಯರು ವಿಷ ಉಣಿಸಿ ಕೊಂದು ಹಳ್ಳಕ್ಕೆ ತಂದು ಹಾಕಿರಬಹುದೇ ಎಂದು ಶಂಕಿಸಲಾಗಿದೆ.
ಈ ಬಗ್ಗೆ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಚೈತ್ರಾ ಮೆಣಸಿನಕಾಯಿಗೆ ಪ್ರಕರಣದ ಬಗ್ಗೆ ಮೊಬೈಲ್ ಮೂಲಕ ಮಾಹಿತಿ ನೀಡಲು ಪ್ರಯತ್ನಿಸಿದರೂ ಕರೆ ಸ್ವೀಕರಿಸಲಿಲ್ಲ.
ಅರಣ್ಯ ಇಲಾಖೆಯವರಿಗೆ ಗಮನಕ್ಕೆ ಬಂದ ಕೂಡಲೇ ಸತ್ತ ನರಿಯ ಮರಣೋತ್ತರ ಪರೀಕ್ಷೆ ನಡೆಸಬೇಕಿತ್ತು. ಈ ಕುರಿತು ಸಂಬಂಧಿಸಿದ ಅಧಿಕಾರಿಗೆ ಸೂಚಿಸುವುದಾಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ