Kushtagi: ಬೈಕ್ ಸ್ಕಿಡ್ ಆಗಿ ಬಿಜೆಪಿ ಕಾರ್ಯಕರ್ತ ದುರ್ಮರಣ
Team Udayavani, Jun 27, 2023, 10:15 AM IST
ಕುಷ್ಟಗಿ: ಬೈಕ್ ಸ್ಕಿಡ್ ಆಗಿ ಬಿಜೆಪಿ ಕಾರ್ಯಕರ್ತರೊಬ್ಬರು ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಕಲಾಲಬಂಡಿ ಗ್ರಾಮದ ಬಿಜೆಪಿ ಕಾರ್ಯಕರ್ತ ಶರಣಪ್ಪ ಪರಸಪ್ಪ ಹಿರೇಮನಿ (37) ದುರ್ಮರಣಕ್ಕೀಡಾದ ವ್ಯಕ್ತಿ.
ಶರಣಪ್ಪ ಕಳೆದ ಸೋಮವಾರ ಜೂ.27 ರಂದು ರಾತ್ರಿ ಬೈಕ್ ನಲ್ಲಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಈ ವೇಳೆ ಕಲಾಲಬಂಡಿ ಗ್ರಾಮದ ಹೊರವಲಯದಲ್ಲಿ ರಸ್ತೆಯ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂದಕದಲ್ಲಿ ಬಿದ್ದು, ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಈ ಪ್ರಕರಣ ಜೂ.27ರ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ಕುಷ್ಟಗಿ ಠಾಣೆಯ ಪಿಎಸೈ ಮೌನೇಶ ರಾಠೋಡ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮೃತ ಶರಣಪ್ಪ ಹಿರೇಮನಿ ಅವರ ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…