15 ದಿನಗಳ ಅಂತರ; ಸಾವಿನಲ್ಲಿ ಒಂದಾದ ರೈತ ಸಂಘದ ಸ್ನೇಹಿತರು


Team Udayavani, Feb 2, 2023, 9:58 AM IST

2–kushtagi

ಕುಷ್ಟಗಿ: ನಿವೃತ್ತ ಪಿಡಿಓ, ಕರ್ನಾಟಕ ರೈತ ಸಂಘದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಬಸಪ್ಪ ಅಮ್ಮಣ್ಣನವರ್ ಫೆ.2 ರ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ‌.

ಸೌಮ್ಯ ಸ್ವಭಾವದ ಬಸಪ್ಪ ಅಮ್ಮಣ್ಣನವರ್ ಮೂಲತಃ ಕುಷ್ಟಗಿ ತಾಲೂಕಿನ ಯರಿಗೋನಾಳ ಗ್ರಾಮದವರು. ಪಿಡಿಓ ಅಧಿಕಾರಿ ನಿವೃತ್ತರಾಗಿ ಕುಷ್ಟಗಿ ಗದ್ದಿ ಲೇಔಟ್ ನಲ್ಲಿ ವಾಸವಾಗಿದ್ದರು. ರೈತ ಸಂಘದ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು.

ಕಳೆದ ಜ.19ರಂದು ನಿವೃತ್ತ ಅರಣ್ಯಾಧಿಕಾರಿ, ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಮಲ್ಲಪ್ಪ ಹವಲ್ದಾರ ಅಕಾಲಿಕ ನಿಧನರಾದ ಬೆನ್ನಲ್ಲೇ, ಅದೇ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಸಪ್ಪ ಶಿವಲಿಂಗಪ್ಪ ಅಮ್ಮಣ್ಣನವರ್ ನಿಧನರಾಗಿರುವುದು ರೈತ ಸಂಘಕ್ಕೆ ಭರಿಸಲಾಗದ ನಷ್ಟವಾಗಿದೆ.

ರೈತ ಸಂಘದ ಅಧ್ಯಕ್ಷ ಮಲ್ಲಪ್ಪ ಹವಲ್ದಾರ ನಿಧನರಾಗಿ 15 ದಿನಗಳ ಅಂತರದಲ್ಲಿ ಪ್ರಧಾನ ಕಾರ್ಯದರ್ಶಿ ಬಸಪ್ಪ ಅಮ್ಮಣ್ಣನವರ್ ನಿಧನರಾಗಿದ್ದು,ಈ ಸ್ನೇಹಿತರು ಸಾವಿನಲ್ಲಿ‌‌ ಒಂದಾಗಿದ್ದಾರೆ.

ಮೃತರ ಅಂತ್ಯಕ್ರಿಯೆ ಕುಷ್ಟಗಿ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಮಧ್ಯಾಹ್ನ 2 ಕ್ಕೆ ನಡೆಯಲಿದೆ.

ಮಲ್ಲಪ್ಪ- ಬಸಪ್ಪ ಎಂಬ ಜೋಡೆತ್ತು

ಪರಮಾಪ್ತ ಸ್ನೇಹಿತರಂತಿದ್ದ ಮಲ್ಲಪ್ಪ- ಬಸಪ್ಪ‌ ಜೋಡೆತ್ತಿನ ಜೋಡಿಯಂತಿದ್ದರು. ಸ್ನೇಹಿತ ಅಧ್ಯಕ್ಷ ‌ಮಲ್ಲಪ್ಪ ಹವಲ್ದಾರ ಅಕಾಲಿಕ ನಿಧನದಿಂದ ಕಂಗಾಲಾಗಿದ್ದ ಪ್ರಧಾನ ಕಾರ್ಯದರ್ಶಿ ಬಸಪ್ಪ ಅಮ್ಮಣ್ಣನವರು ಮಾನಸಿಕವಾಗಿ ಬಹಳ ನೊಂದಿದ್ದರು. ಇವರು ಅತಿಯಾದ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದರೂ ರೈತ ಸಂಘದಲ್ಲಿ ಸಕ್ರೀಯರಾಗಿದ್ದರು.

ಕಳೆದ 15 ದಿನಗಳಲ್ಲಿ ನಮ್ಮ ಸಂಘದ ತಾಲೂಕು ಘಟಕದ ಅಧ್ಯಕ್ಷ-ಪ್ರಧಾನ ಕಾರ್ಯದರ್ಶಿಯನ್ನು ಕಳೆದುಕೊಂಡಿರುವುದು ರೈತ ಸಂಘದ ಸರ್ವನಾಶವಾದಂತೆ ಭಾಸವಾಗಿದೆ. ಇಂತಹ ಮುಂಚೂಣಿಯಲ್ಲಿದ್ದ ರೈತ ಮುಖಂಡರನ್ನು ರೈತ ಸಂಘ ಕಳೆದುಕೊಂಡಿದೆ ಎಂದು ಜಿಲ್ಲಾ ಅದ್ಯಕ್ಷ ನಜೀರಸಾಬ್ ಮೂಲಿಮನಿ ಶೋಕಿಸಿದ್ದಾರೆ.

 

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2–gangavathi

ಮೂರು ತಾಸಿಗೂ ಹೆಚ್ಚು ಬೈಕ್ ನೊಳಗೆ ಹೊಕ್ಕ ಹಾವು; ಬೈಕ್ ಮಾಲೀಕರ ಪರದಾಟ

1-sada-das-d

ಮದರಸಾಗಳನ್ನು ಮುಚ್ಚಬೇಕೆನ್ನುವ ಅಸ್ಸಾಂ ಸಿಎಂ ಹೇಳಿಕೆ ಖಂಡಿಸಿದ ಗಾಲಿ ರೆಡ್ಡಿ

5–gangavathi

ಕೇಸರಟ್ಟಿ ಹಣವಾಳ ರಸ್ತೆ ದುರಸ್ಥಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ

ತಲೆಕೆಳಗಾಗಿದ ಸಿದ್ದು ಲೆಕ್ಕಾಚಾರ: ಸಂಗಣ್ಣ ಕರಡಿ

ತಲೆಕೆಳಗಾಗಿದ ಸಿದ್ದು ಲೆಕ್ಕಾಚಾರ: ಸಂಗಣ್ಣ ಕರಡಿ

ಸಿದ್ದುಗೆ ಕೋಲಾರ ಕ್ಷೇತ್ರ ಕೊನೇ ಆಯ್ಕೆ: ಸಚಿವ ಹಾಲಪ್ಪ ಆಚಾರ್‌

ಸಿದ್ದುಗೆ ಕೋಲಾರ ಕ್ಷೇತ್ರ ಕೊನೇ ಆಯ್ಕೆ: ಸಚಿವ ಹಾಲಪ್ಪ ಆಚಾರ್‌

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.