Kushtagi: ಚಿಕೂನ್ ಗುನ್ಯಾಕ್ಕೆ ನೆರೆಬೆಂಚಿ ಗ್ರಾಮಸ್ಥರು ತತ್ತರ

ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆಯ ಸಮನ್ವಯ ಕೊರತೆಗೆ ಚಿಕೂನ್ಯ ಪ್ರಕರಣಗಳು ಹೆಚ್ಚಳ

Team Udayavani, Feb 8, 2024, 6:36 PM IST

nerebenchi

ಕುಷ್ಟಗಿ:ಇಲ್ಲಿಗೆ ಸಮೀಪದ ನೆರೆಬೆಂಚಿ ಗ್ರಾಮದಲ್ಲಿ 130ಕ್ಕೂ ಅಧಿಕ ಜನರಲ್ಲಿ ಚಿಕೂನ್ ಗುನ್ಯಾ ರೋಗ ಲಕ್ಷಣ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ತಾಲೂಕು ಅಧಿಕಾರಿಗಳು ದೌಡಾಯಿಸಿ ಕ್ರಮವಹಿಸಿದ್ದು ಸದ್ಯ ಪ್ರಕರಣ ನಿಯಂತ್ರಣಕ್ಕೆ ಬಂದಿದೆ.

ವೈರಲ್ ಜ್ವರ, ತಲೆ ಮತ್ತು ಕೀಲು ನೋವಿನ ಲಕ್ಷಣ ಕಳೆದೆರೆಡು ವಾರಗಳಿಂದ ಇತ್ತಾದರೂ, ಜನ ಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ. ಸ್ಥಳೀಯವಾಗಿ ಹಾಗೂ ಪಟ್ಟಣದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಾಗ್ಯೂ ಬಾಧಿತ ಪ್ರಮಾಣ ಹೆಚ್ಚಿದ್ದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಸಾಮಾನ್ಯ ಜ್ವರವೋ? ವಿಷಮಶೀತ ಜ್ವರವೋ? ಚಿಕೂನ್ ಗುನ್ಯಾ, ಡೆಂಘೀ ಜ್ವರವೋ ಎಂಬುದು ತಿಳಿಯದೇ ಗೊಂದಲಕ್ಕೀಡಾಗಿದ್ದರು. ಪೀಡೀತರ ಸಂಖ್ಯೆ ಹೆಚ್ಚುತ್ತಿದ್ದಂತೆ ಆರೋಗ್ಯ ಇಲಾಖೆ ದೌಡಾಯಿಸಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ತಾತ್ಕಾಲಿಕ ಕ್ಲಿನಿಕ್ ಆರಂಭಿಸಲಾಗಿದೆ. ಗ್ರಾಮದಲ್ಲಿ ಆತಂಕದ ವಾತಾವರಣವಿದ್ದು, ವಿಪರೀತ ಜ್ವರ, ಮೈಕೈನೋವು ಹೊಂದಿರುವವರನ್ನು ಆ್ಯಂಬ್ಯುಲೆನ್ಸ್ ನಲ್ಲಿ ಕುಷ್ಟಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.

ಗಡ್ಡಕ್ಕೆ ಬೆಂಕಿ ಹಚ್ಚಿದಾಗ ಬಾವಿ ತೋಡಿದರು ಎನ್ನುವಂತೆ ನೆರೆಬೆಂಚಿ ಗ್ರಾಮದ ಮುಖ್ಯ ಚರಂಡಿಯಲ್ಲಿ ಕೊಳಚೆ ನೀರು ಮಡುಗಟ್ಟಿ ನಿಂತಿದೆ. ಬೀರಲಿಂಗೇಶ್ವರ ದೇವಸ್ಥಾನ ಹಿಂಭಾಗದ ಪ್ರದೇಶದಲ್ಲಿ ಕೊಳಚೆ ನೀರಿನಲ್ಲಿ ಆಪು ಸಸ್ಯ ಬೆಳೆದಿದೆ. ಈ ಚರಂಡಿ ಹಳ್ಳಕ್ಕೆ ಸಂಪರ್ಕಿಸಲಾಗಿದ್ದರೂ ಜನರು ತ್ಯಾಜ್ಯ ಹಾಕುವುದು ನಿಂತಿಲ್ಲ. ಗ್ರಾಮ ಪಂಚಾಯತಿ ಸಕಾಲದಲ್ಲಿ ತ್ಯಾಜ್ಯದ ಹೂಳೆತ್ತದೇ ಇರುವುದು ಅಲ್ಲಲ್ಲಿ ಕೊಳಚೆ ನೀರು ನಿಂತಿದ್ದು, ಸೊಳ್ಳೆಗಳ ಸಂತತಿ ಹೆಚ್ಚಲು ಕಾರಣವಾಗಿದೆ. ಅವೈಜ್ಞಾನಿಕ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹಳ್ಳ ಸೇರುವುದು ವ್ಯವಸ್ಥಿತವಾಗಿ ಇಲ್ಲದಿರುವುದರಿಂದ ಅಲ್ಲಲ್ಲಿ ದುರ್ನಾತ ಬೀರುತ್ತಿರುವುದು ಪರಿಸರ ಮಾಲಿನ್ಯತೆಗೆ ಕಾರಣವಾಗಿದೆ.

ನೂರಕ್ಕೂ ಹೆಚ್ಚು ಜನರಲ್ಲಿ ಈ ರೋಗ ಲಕ್ಷಣ ಕಾಣಿಸಿಕೊಳ್ಳುತ್ತಿದ್ದಂತೆ ಸ್ವಚ್ಚತೆಗೆ ಇನ್ನಿಲ್ಲದ ಕಾಳಜಿವಹಿಸಿದ್ದು, ಚರಂಡಿಯ ಅಕ್ಕಪಕ್ಕ ಬ್ಲಿಚಿಂಗ್ ಪೌಡರ್ ಹಾಕಿದ್ದು, ಚರಂಡಿಯಲ್ಲಿ ನಿಂತಿರುವ ಕೊಳಚೆ ನೀರನ್ನು ಸಕ್ಕಿಂಗ್ ಮಿಷನ್ ಮೂಲಕ ಹೊರ ಹಾಕಲು ಮುಂದಾಗಿದ್ದಾರೆ.

ಡಿಎಚ್ ಓ ಡಾ. ಲಿಂಗರಾಜು, ತಹಶೀಲ್ದಾರ ರವಿ ಅಂಗಡಿ, ತಾ.ಪಂ. ಸಹಾಯಕ ನಿದರ್ೇಶಕ ನಿಂಗಪ್ಪ ಹಿರೇಹಾಳ ಪಿಎಸೈ ಮುದ್ದುರಂಗಸ್ವಾಮಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಕ್ರಮಕ್ಕೆ ಮುಂದಾದರು.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.