ಮಗನಿಂದ ಸೊಸೆಯ ಮೇಲಿನ ಹಲ್ಲೆ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡಿದ್ದ ತಾಯಿ ಸಾವು : ಇಬ್ಬರ ಬಂಧನ
Team Udayavani, Jan 26, 2022, 2:35 PM IST
ಕುಷ್ಟಗಿ : ಮಗ, ಸೊಸೆಯ ಮೇಲೆ ಹಲ್ಲೆಯನ್ನು ತಡೆಯಲು ಮುಂದಾದ ಸಂದರ್ಭದಲ್ಲಿ, ತಾಯಿಯನ್ನು ದೂಡಿದ ರಭಸಕ್ಕೆ ಬಿದ್ದು ತೀವ್ರಗಾಯಗೊಂಡು ಆಸ್ಪತ್ರೆ ಸೇರಿದ್ದ ತಾಯಿ ಚಿಕಿತ್ಸೆ ಫಲಿಸದೇ 37 ದಿನಗಳ ಬಳಿಕ ಕೊನೆಯುಸಿರೆಳೆದ ಘಟನೆ ಕಡೇಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕಳೆದ 12 ನೇ ಡಿಸೆಂಬರ್ ರಂದು ಗ್ರಾಮದ ಲಕ್ಷ್ಮಣ ದುರಗಪ್ಪ ಅಡವಿಬಾವಿ, ಸಂತೋಷ ಅಡವಿಬಾವಿ ಎಂಬ ಸಹೋದರರು, ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿದ್ದ ಹೊಳೆಯಪ್ಪ ತೆಗ್ಗಿನಮನಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದರು. ಅದೇ ವೇಳೆ ಗಂಡನ ಮೇಲೆ ಹಲ್ಲೆ ನಡೆಯುವುದನ್ನು ತಪ್ಪಿಸಲು ಹೋದ ಪತ್ನಿ ಮಲ್ಲಮ್ಮಳಿಗೂ ಹಲ್ಲೆ ನಡೆದಿದೆ. ಈ ವೇಳೆ ತಾಯಿ ನಾಗಮ್ಮ ದುರಗಪ್ಪ ಅಡವಿಬಾವಿ ಬಿಡಿಸಿಕೊಳ್ಳಲು ಮುಂದಾದಾಗ ಲಕ್ಷ್ಮಣ ಹಾಗೂ ಸಂತೋಷ ಇಬ್ಬರು ಸೇರಿ ನಾಗಮ್ಮಳನ್ನು ದೂಡಿದ್ದಾರೆ.
ದೂಡಿದ ರಭಸಕ್ಕೆ ನಾಗಮ್ಮಳಿಗೆ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸೋಮವಾರ ಜ. 24 ರಂದು ನಾಗಮ್ಮ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ಕುಷ್ಟಗಿ ಠಾಣೆಯಲ್ಲಿ ದಾಖಲಾಗಿದ್ದು. ಆರೋಪಿಗಳಾದ ಲಕ್ಷ್ಮಣ ಹಾಗು ಸಂತೋಷ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್