ಮಗನಿಂದ ಸೊಸೆಯ ಮೇಲಿನ ಹಲ್ಲೆ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡಿದ್ದ ತಾಯಿ ಸಾವು : ಇಬ್ಬರ ಬಂಧನ
Team Udayavani, Jan 26, 2022, 2:35 PM IST
ಕುಷ್ಟಗಿ : ಮಗ, ಸೊಸೆಯ ಮೇಲೆ ಹಲ್ಲೆಯನ್ನು ತಡೆಯಲು ಮುಂದಾದ ಸಂದರ್ಭದಲ್ಲಿ, ತಾಯಿಯನ್ನು ದೂಡಿದ ರಭಸಕ್ಕೆ ಬಿದ್ದು ತೀವ್ರಗಾಯಗೊಂಡು ಆಸ್ಪತ್ರೆ ಸೇರಿದ್ದ ತಾಯಿ ಚಿಕಿತ್ಸೆ ಫಲಿಸದೇ 37 ದಿನಗಳ ಬಳಿಕ ಕೊನೆಯುಸಿರೆಳೆದ ಘಟನೆ ಕಡೇಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕಳೆದ 12 ನೇ ಡಿಸೆಂಬರ್ ರಂದು ಗ್ರಾಮದ ಲಕ್ಷ್ಮಣ ದುರಗಪ್ಪ ಅಡವಿಬಾವಿ, ಸಂತೋಷ ಅಡವಿಬಾವಿ ಎಂಬ ಸಹೋದರರು, ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿದ್ದ ಹೊಳೆಯಪ್ಪ ತೆಗ್ಗಿನಮನಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದರು. ಅದೇ ವೇಳೆ ಗಂಡನ ಮೇಲೆ ಹಲ್ಲೆ ನಡೆಯುವುದನ್ನು ತಪ್ಪಿಸಲು ಹೋದ ಪತ್ನಿ ಮಲ್ಲಮ್ಮಳಿಗೂ ಹಲ್ಲೆ ನಡೆದಿದೆ. ಈ ವೇಳೆ ತಾಯಿ ನಾಗಮ್ಮ ದುರಗಪ್ಪ ಅಡವಿಬಾವಿ ಬಿಡಿಸಿಕೊಳ್ಳಲು ಮುಂದಾದಾಗ ಲಕ್ಷ್ಮಣ ಹಾಗೂ ಸಂತೋಷ ಇಬ್ಬರು ಸೇರಿ ನಾಗಮ್ಮಳನ್ನು ದೂಡಿದ್ದಾರೆ.
ದೂಡಿದ ರಭಸಕ್ಕೆ ನಾಗಮ್ಮಳಿಗೆ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಸೋಮವಾರ ಜ. 24 ರಂದು ನಾಗಮ್ಮ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ಕುಷ್ಟಗಿ ಠಾಣೆಯಲ್ಲಿ ದಾಖಲಾಗಿದ್ದು. ಆರೋಪಿಗಳಾದ ಲಕ್ಷ್ಮಣ ಹಾಗು ಸಂತೋಷ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್