ಕೊನೇ ಕ್ಷಣದಲ್ಲಿ ವಿಮಾನ ದಿಢೀರ್‌ ರದ್ದು, ಕುವೈಟ್‌ನಲ್ಲಿ 164 ಪ್ರಯಾಣಿಕರ ಸಂಕಷ್ಟ


Team Udayavani, Jun 28, 2020, 9:25 AM IST

ಕೊನೇ ಕ್ಷಣದಲ್ಲಿ ವಿಮಾನ ದಿಢೀರ್‌ ರದ್ದು, ಕುವೈಟ್‌ನಲ್ಲಿ 164 ಪ್ರಯಾಣಿಕರ ಸಂಕಷ್ಟ

ಮಂಗಳೂರು: ಶನಿವಾರ ಕುವೈಟ್‌ನಿಂದ ಮಂಗಳೂರಿಗೆ ಪ್ರಯಾಣಿಸ ಬೇಕಾಗಿದ್ದ ಖಾಸಗಿ ವಿಮಾನವೊಂದು ಕೊನೆಯ ಕ್ಷಣದಲ್ಲಿ ರದ್ದುಗೊಂಡ ಕಾರಣ ತಾಯ್ನಾಡಿಗೆ ಹೊರಟು ನಿಂತಿದ್ದ ಮಂಗಳೂರಿನ ಪ್ರಯಾಣಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದರು.

ಕುವೈಟ್‌ ಕೇರಳ ಮುಸ್ಲಿಂ ಅಸೋಸಿಯೇ ಶನಿನ ಕರ್ನಾಟಕ ಶಾಖೆಯು ಮಂಗಳೂರಿನ ಪ್ರಯಾಣಿಕಗಾಗಿ ಇಂಡಿಗೊ ವಿಮಾನವನ್ನು ಬುಕ್‌ ಮಾಡಿ ಭಾರತಕ್ಕೆ ಯಾನ ಬೆಳೆಸಲು ಕುವೈಟ್‌ ರಾಯಭಾರ ಕಚೇರಿಯಿಂದ ನಿರಾಕ್ಷೇಪಣಾ ಪತ್ರವನ್ನು ಕೂಡ ಪಡೆದಿತ್ತು.
8 ಮಂದಿ ಗರ್ಭಿಣಿಯರು, 34 ಮಂದಿ ವಿವಿಧ ರೋಗಿಗಳು, ವೀಸಾ ಮತ್ತಿತರ ದಾಖಲೆ ಪತ್ರ ಸರಿ ಇಲ್ಲದ (ಅಮ್ನೆಸ್ಟಿ) 8 ಮಂದಿ ಸೇರಿದಂತೆ ಒಟ್ಟು 164 ಮಂದಿ ಇದರಲ್ಲಿ ಪ್ರಯಾಣಿಸುವವರಿದ್ದು, ಕ್ವಾರಂಟೈನ್‌ಗೆ ಒಳಗಾಗ ಬೇಕಾದವರ ಪಟ್ಟಿಯನ್ನು ಕೂಡಾ ನೀಡಲಾಗಿತ್ತು. ಎಲ್ಲ 164 ಮಂದಿ ಪ್ರಯಾಣಿಕರು ಕುವೈಟ್‌ನಲ್ಲಿನ ತಮ್ಮ ಮನೆ/ ಫ್ಲಾಟ್‌/ ಬಾಡಿಗೆ ಕೊಠಡಿಗಳನ್ನು ಖಾಲಿ ಮಾಡಿ, ಖರ್ಚಿಗೆ ಬೇಕಾದ ಹಣವನ್ನು ಮಾತ್ರ ಕೈಯಲ್ಲಿ ಇಟ್ಟುಕೊಂಡು ಉಳಿದ ವಿದೇಶಿ ಕರೆನ್ಸಿಯನ್ನು ತಮ್ಮ ಭಾರತದ ಎನ್‌ಆರ್‌ಐ ಖಾತೆಗೆ ವರ್ಗಾಯಿಸಿ ಮಂಗಳೂರು ವಿಮಾನ ಏರಲು ಸಿದ್ಧವಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ವಿಮಾನ ರದ್ದಾಗಿದೆ. ತಮ್ಮ ಮನೆ ಖಾಲಿ ಮಾಡಿ ಬಂದಿರುವ ಕಾರಣ ವಾಪಸ್‌ ರೂಮ್‌ಗೆ ಹೋಗು ವಂತೆಯೂ ಇಲ್ಲದೆ ಹಾಗೂ ಕೈಯಲ್ಲಿ ಹಣವೂ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ರಾಜ್ಯ ಸರಕಾರದ ಅನುಮತಿ ಲಭಿಸಿಲ್ಲ
ಈ ಬಗ್ಗೆ ಕುವೈಟ್‌ನಲ್ಲಿರುವ ಅನಿವಾಸಿ ಎಂಜಿನಿಯರ್‌ ಒಬ್ಬರು ಮಂಗಳೂರಿನಲ್ಲಿರುವ ಮಾಜಿ ವಿಧಾನ ಪರಿಷತ್‌ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ಕ್ಯಾ| ಕಾರ್ಣಿಕ್‌ ಅವರು ಕೂಡಲೇ ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕರನ್ನು ಸಂಪರ್ಕಿಸಿದಾಗ ಅವರಿಂದ ವಿಮಾನ ಇಳಿಯುವುದಕ್ಕೆ ಯಾವುದೇ ತಕರಾರು ಇಲ್ಲ ಎಂಬ ಮಾಹಿತಿ ಲಭಿಸಿದೆ. ಆದರೆ ಬಳಿಕ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದಾಗ ರಾಜ್ಯ ಸರಕಾರದ ಅನುಮತಿ ಲಭಿಸದ ಕಾರಣ ಈ ಸಮಸ್ಯೆ ಎದುರಾಗಿದೆ ಎಂಬ ವಿಷಯ ಗೊತ್ತಾಗಿದೆ.

“ವಿಮಾನ ಇಳಿಯ ಬೇಕಾದರೆ ರಾಜ್ಯ ಸರಕಾರದ ನೋಡಲ್‌ ಅಧಿಕಾರಿಯ ಅನುಮತಿ ಅಗತ್ಯ. ಇಲ್ಲಿ ಅನುಮತಿ ನೀಡದಿರುವುದು ಏಕೆಂದು ತಿಳಿದಿಲ್ಲ. ನೋಡಲ್‌ ಅಧಿಕಾರಿಯ ಅನುಮತಿ ದೊರಕಿಸಲು ಪ್ರಯತ್ನಿಸಲಾಗುವುದು’ ಎಂದು ಕ್ಯಾ| ಕಾರ್ಣಿಕ್‌ ಉದಯವಾಣಿಗೆ ತಿಳಿಸಿದ್ದಾರೆ.

ವಿಮಾನ ಯಾನದ ಮುಂದಿನ ದಿನಾಂಕ ನಿಗದಿ ರಾಜ್ಯ ಸರಕಾರದ ನೋಡಲ್‌ ಅಧಿಕಾರಿಯ ಅನುಮತಿಯನ್ನು ಅವಲಂಬಿಸಿದೆ. ಶನಿವಾರ ಮತ್ತು ರವಿವಾರ ಸರಕಾರಿ ರಜೆ ಇದ್ದು, ಇನ್ನು ಸೋಮವಾರದ ತನಕ ಕಾಯಬೇಕಾಗಿ ಬರಬಹುದು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.