KVG ಶಿಕ್ಷಣ ಸಂಸ್ಥೆಗಳ ಎ.ಎಸ್‌. ರಾಮಕೃಷ್ಣ ಕೊಲೆ ಪ್ರಕರಣ- ಸಹೋದರ ಸೇರಿ 6 ಮಂದಿ ದೋಷಿ


Team Udayavani, Sep 28, 2023, 12:07 AM IST

ramak

ಬೆಂಗಳೂರು: ಎರಡು ದಶಕಗಳ ಹಿಂದೆ ಕರಾವಳಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪ್ರತಿಷ್ಠಿತ ಕೆವಿಜಿ ಶಿಕ್ಷಣ ಸಂಸ್ಥೆಗಳ ಸಮೂಹದ ಕೆವಿಜಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್‌. ರಾಮಕೃಷ್ಣ ಅವರ ಕೊಲೆ ಪ್ರಕರಣದ 6 ಮಂದಿ ಆರೋಪಿಗಳನ್ನು ದೋಷಿಗಳೆಂದು ತೀರ್ಮಾನಿಸಿ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಪ್ರಕರಣದಲ್ಲಿ ಹತ್ಯೆಗೀಡಾದ ಎ.ಎಸ್‌. ರಾಮಕೃಷ್ಣ ಅವರ ಸಹೋದರ ಡಾ| ರೇಣುಕಾಪ್ರಸಾದ್‌ ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸುವಂತೆ ಕೋರಿ ರಾಜ್ಯ ಸರಕಾರದ ಪರವಾಗಿ ಪುತ್ತೂರು ಉಪವಿಭಾಗದ ಸಹಾಯಕ ಪೊಲೀಸ್‌ ವರಿಷ್ಠಾಧಿಕಾರಿ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಅ. 5ರಂದು ವಿಚಾರಣೆ
ಪ್ರಕರಣದ ಒಟ್ಟು ಏಳು ಮಂದಿ ಆರೋಪಿಗಳ ಪೈಕಿ ಡಾ| ರೇಣುಕಾ ಪ್ರಸಾದ್‌, ಮನೋಜ್‌ ರೈ, ಎಚ್‌.ಆರ್‌. ನಾಗೇಶ್‌, ವಾಮನ ಪೂಜಾರಿ, ಶರಣ್‌ ಪೂಜಾರಿ ಮತ್ತು ಶಂಕರ ಅವರನ್ನು ಮೃತ ಎ.ಎಸ್‌. ರಾಮಕೃಷ್ಣ ಅವರ ಹತ್ಯೆ ಮತ್ತು ಕೊಲೆಗೆ ಒಳಸಂಚು ರೂಪಿಸಿದ ಪ್ರಕರಣದಲ್ಲಿ ದೋಷಿಗಳೆಂದು ನ್ಯಾಯಾಲಯ ತೀರ್ಮಾನಿಸಿದೆ. ಆದರೆ, ಏಳನೇ ಆರೋಪಿಯಾಗಿದ್ದ ಎಚ್‌.ಯು. ನಾಗೇಶ್‌ ಕುಮಾರ್‌ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ಇದೇ ವೇಳೆ ಎತ್ತಿ ಹಿಡಿದಿದೆ. ಅಲ್ಲದೆ, ದೋಷಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಪಡಿಸುವ ಕುರಿತು ಅ. 5ರಂದು ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಇದೇ ವೇಳೆ ಹೇಳಿದೆ.

ಕುರುಂಜಿ ವೆಂಕಟರಮಣ ಗೌಡ ಅವರು ಕೆವಿಜಿ ಅಕಾಡೆಮಿ ಆಫ್ ಲಿಬೆರಲ್‌ ಎಜುಕೇಷನ್‌ ಸಂಸ್ಥೆಯ ಸಂಸ್ಥಾಪಕರಾಗಿದ್ದಾರೆ. ವಯಸ್ಸಾದ ಮತ್ತು ಅನಾರೋಗ್ಯದ ಕಾರಣ ಶಿಕ್ಷಣಿಕ ಸಂಸ್ಥೆಗಳ ನಿರ್ವಹಣೆ ಹೊಣೆಯನ್ನು ಹಿರಿಯ ಪುತ್ರ ಕೆ.ವಿ. ಚಿದಾನಂದ ಮತ್ತು ಕಿರಿಯ ಪುತ್ರ ರೇಣುಕಾ ಪ್ರಸಾದ್‌ ಅವರಿಗೆ ವಿಭಜನೆ ಮಾಡಿ ಕೊಡಲಾಗಿತ್ತು. ಆದರೆ, ಮತ್ತೋರ್ವ ಪುತ್ರ ಎ.ಎಸ್‌. ರಾಮಕೃಷ್ಣ ಅವರು ಕೆವಿಜಿ ಪಾಲಿಟೆಕ್ನಿಕ್‌ ಕಾಲೇಜು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಆಸ್ತಿ ಹೊಣೆಗಾರಿಕೆ ವಿಭಜನೆಯನ್ನು ರಾಮಕೃಷ್ಣ ಅವರ ಸಲಹೆ ಮೇರೆಗೆ ಮಾಡಲಾಗಿದೆ. 2009ರಲ್ಲಿ ಚಿದಾನಂದ ಅವರ ಪರ ಕೆವಿಜಿ ಮೆಡಿಕಲ್‌ ಕಾಲೇಜು ವ್ಯವಹಾರಗಳನ್ನು ರಾಮಕೃಷ್ಣ ಅವರು ನೋಡಿಕೊಳ್ಳುತ್ತಿದ್ದರು ಎಂದು ಭಾವಿಸಿದ್ದ ರೇಣುಕಾ ಪ್ರಸಾದ್‌, ರಾಮಕೃಷ್ಣ ಕೊಲೆಗೆ ಸುಪಾರಿ ನೀಡಿದ್ದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.