ರಾಜ್ಯ ಕಾರ್ಮಿಕರ ಕಲ್ಯಾಣಕ್ಕೆ ಕಾರ್ಮಿಕ ಇಲಾಖೆ ಮಂತ್ರ


Team Udayavani, Feb 3, 2020, 3:08 AM IST

Suresh-Kumar

ಬೆಂಗಳೂರು: ರಾಜ್ಯದಲ್ಲಿ ಸಂಘಟಿತ, ಅಸಂಘಟಿತ ಕಾರ್ಮಿಕರು, ಬಾಲ ಕಾರ್ಮಿಕರು, ವಲಸೆ ಕಾರ್ಮಿಕರ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಲು ಕಾರ್ಮಿಕ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ವಲಯ ಸೇರಿ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಸಂಘಟಿತ, ಅಸಂಘಟಿತ ಕಾರ್ಮಿಕರು, ಬಾಲ ಕಾರ್ಮಿಕರು, ವಲಸೆ ಕಾರ್ಮಿಕರಲ್ಲಿ ಕರ್ನಾಟಕದವರು, ಹೊರ ರಾಜ್ಯದವರು ಎಷ್ಟೆಷ್ಟು ಎಂಬುದರ ಅಂಕಿ-ಅಂಶ ಸಂಗ್ರಹಿಸಿ “ಡಾಟಾ’ ಸಿದ್ಧಪಡಿಸುವುದು ಹಾಗೂ ಅರ್ಹರನ್ನು ಕಾರ್ಮಿಕ ಸವಲತ್ತು -ಸೌಲಭ್ಯ ವ್ಯಾಪ್ತಿಯಡಿ ತರುವುದು ಇದರ ಉದ್ದೇಶ.

ಜತೆಗೆ, ರಾಜ್ಯದಲ್ಲಿ 21 ಲಕ್ಷ ಕಾರ್ಮಿಕರು ನೋಂದಣಿಯಾಗಿದ್ದರೂ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ಸಂಗ್ರಹಿಸುವ 8500 ಕೋಟಿ ರೂ. (ಸೆಸ್‌) ಬಳಕೆಯಾಗಿಲ್ಲ. ಹೀಗಾಗಿ, ಆ ಮೊತ್ತ ದಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಕ್ಷೇಮಾಭಿ ವೃದ್ಧಿ ಯೋಜನೆ ರೂಪಿಸಲು ನಿರ್ಧರಿಸಿದೆ. ಈಗಾಗಲೇ ಕಟ್ಟಡ ಕಾರ್ಮಿಕರು, ಕಾರ್ಮಿಕ ಸಂಘಟನೆಗಳ ಮುಖಂಡರು, ಇಲಾಖೆಯ ಅಧಿಕಾರಿಗಳು, ಕಟ್ಟಡ ಕೈಗಾರಿಕಾ ಕ್ಷೇತ್ರದ ದಿಗ್ಗಜರು, ನಿರ್ಮಾಣ ಕ್ಷೇತ್ರದ ಭಾಗೀದಾರರ ಸಭೆ ನಡೆಸಿ ಈ ಕುರಿತು ಮಾಹಿತಿ ವಿನಿಯಮ ಮಾಡಿಕೊಂಡಿರುವ ಕಾರ್ಮಿಕ ಇಲಾಖೆ ಸಾವಿರಾರು ಕೋಟಿ ರೂ. ಸೆಸ್‌ ಹಣ ಕಾರ್ಮಿಕರಿಗೆ ಸೌಲಭ್ಯ-ಸವಲತ್ತು ರೂಪದಲ್ಲಿ ವಿನಿಯೋಗಿಸುವ ಸಂಬಂಧ ಕಾರ್ಯಯೋಜನೆ ಸಿದ್ಧಪಡಿಸಿದೆ.

ಆಶಾದೀಪ ಹೆಲ್ಪ್ಲೈನ್‌: ಈ ನಿಟ್ಟಿನಲ್ಲಿ ಕಾರ್ಮಿಕರ ದೂರು-ದುಮ್ಮಾನ ಆಲಿಸಲು “ಆಶಾದೀಪ’ ಸಹಾಯ ವಾಣಿ ಕೇಂದ್ರ ಸ್ಥಾಪಿಸಲಾಗಿದ್ದು ದಿನದ 24 ಗಂಟೆ ವರ್ಷದ 365 ದಿನವೂ ಇದು ಕೆಲಸ ಮಾಡ ಲಿದೆ. ರಾಜ್ಯದ ಯಾವುದೇ ಮೂಲೆಯಿಂದ ಕಾರ್ಮಿ ಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ. ದೂರು ನೀಡಿದವರ ಹೆಸರು, ವಿಳಾಸ ಸಹಿತಿ ದಾಖಲು ಮಾಡಿಕೊಂಡು ಅವರ ಸಮಸ್ಯೆಗೆ ಇಲಾಖಾ ಮಟ್ಟದಲ್ಲಿ ಕೈಗೊಂಡ ಪರಿಹಾರದ ಬಗ್ಗೆ ಎಸ್‌ಎಂಎಸ್‌ ಮೂಲಕ ಉತ್ತರವೂ ಸಿಗಲಿದೆ. ಸರ್ಕಾರದಿಂದ ಲಭ್ಯವಿರುವ ಯೋಜನೆಗಳಿಗೂ ಸಹಾಯವಾಣಿ ಮೂಲಕ ನೋಂದಣಿಯೂ ಆಗಬಹುದು.

ಜತೆಗೆ, ಕೆಲಸದ ಸ್ಥಳಗಳಲ್ಲಿ ನಡೆಯುವ ದೌರ್ಜನ್ಯ, ಮಾಲೀಕರು ಅಥವಾ ಗುತ್ತಿಗೆದಾರರಿಂದ ಶೋಷಣೆ, ಕಿರುಕುಳ, ನಿಯಮಾನುಸಾರ ವೇತನ ಪಾವತಿ , ಕನಿಷ್ಠ ವೇತನ ಸಿಗುತ್ತಿದೆಯೋ ಇಲ್ಲವೋ, ಮಹಿಳಾ ಕಾರ್ಮಿಕರಾದರೆ ಕೆಲಸದ ಸ್ಥಳದಲ್ಲಿ ನಡೆಯುವ ದೌರ್ಜರ್ನ ಕಿರುಕುಳದ ಬಗ್ಗೆಯೂ ಸಹಾಯವಾಣಿಗೆ ದೂರು ನೀಡಬಹುದು.  ಬೆಂಗಳೂರು ಸೇರಿ ರಾಜ್ಯದಲ್ಲಿ ಕಟ್ಟಡ ನಿರ್ಮಾಣ ಸೇರಿ ಇತರೆ ಕಾಮಗಾರಿಗಳಲ್ಲಿ ತೊಡಗಿರುವವರು ಬಹುತೇಕರು ಹೊರರಾಜ್ಯದವರು.

ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌, ಒಡಿಸ್ಸಾ, ಅಸ್ಸಾಂನವರು. ಅಷ್ಟೇ ಅಲ್ಲದೆ ಬಾಂಗ್ಲಾ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಯಾರು ಎಲ್ಲಿ ಕೆಲಸ ಮಾಡುತ್ತಿದ್ದಾರೆ . ಯಾವ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುದರ ಬಗ್ಗೆ ನಿಖರ ಮಾಹಿತಿ ಸಂಗ್ರಹ ಮಾಡಿದರೆ ಸವಲತ್ತು ಕೊಡಲು ಅನುಕೂಲ ಜತೆಗೆ ಕಾರ್ಮಿಕ ಸಂಖ್ಯೆ ಅವರ ಪೂರ್ವಾಪರದ ಮಾಹಿತಿಯೂ ಸಿಗಲಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ವಿಶೇಷ ವ್ಯವಸ್ಥೆ: ಮಹಿಳಾ ಕಾರ್ಮಿಕರು ರಾತ್ರಿ ವೇಳೆಯಲ್ಲಿ ಮನೆ ತಲುಪುವುದು ತಡವಾದರೆ ಕೆಲಸದ ಸ್ಥಳದಿಂದ ಮನೆವರೆಗಿನ ಅವರ ಚಲನವಲನ ಕುರಿತು ತಂದೆ-ತಾಯಿಗೆ ಮಾಹಿತಿ ನೀಡುವ ಹೊಸ ವ್ಯವಸ್ಥೆಯನ್ನೂ ಕಾರ್ಮಿಕ ಇಲಾಖೆ ಮಾಡುತ್ತಿದೆ. ಅದಕ್ಕಾಗಿಯೇ ವಿಶೇಷ ಆ್ಯಪ್‌ ಸಿದ್ಧಪಡಿಸಿದೆ. ಮಹಿಳಾ ಕಾರ್ಮಿಕರು ಹಾಗೂ ಅವರ ತಂದೆ ಅಥವಾ ತಾಯಿ ಅದರಡಿ ನೋಂದಣಿಯಾಗ ಬಹುದು. ತಮ್ಮ ಮಗಳು ಕೆಲಸ ಬಿಟ್ಟ ನಂತರ ಯಾವ ಮಾರ್ಗದಲ್ಲಿ ಬರುತ್ತಿದ್ದಾಳೆ, ಎಲ್ಲಿದ್ದಾಳೆ ಎಂಬುದರ ಮಾಹಿತಿಯೂ ಅದರಡಿ ಸಿಗುತ್ತದೆ. ಅಪಾಯ ಸಂದರ್ಭದಲ್ಲಿ ಇಲಾಖೆಗೆ ಮಾಹಿತಿ ರವಾನಿಸಬಹುದು. ಆ ಮಾಹಿತಿ ಸ್ಥಳೀಯ ಪೊಲೀಸ್‌ ಠಾಣೆಗೆ ತಲುಪುತ್ತದೆ ಎಂದು ತಿಳಿಸುತ್ತಾರೆ.

ಲಕ್ಷಾಂತರ ಕುಟುಂಬಗಳ ಸಮೂಹ ಹೊಂದಿ ರುವ ಕಾರ್ಮಿಕ ಇಲಾಖೆಗೆ ಕಾಯಕಲ್ಪ ನೀಡಲು ತೀರ್ಮಾನಿಸಲಾಗಿದೆ. ಎಲ್ಲ ವಲಯದ ಕಾರ್ಮಿಕರ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರಿಗೆ ಸರ್ಕಾರದಿಂದ ಲಭ್ಯವಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಿ ಅವರ ಹೆಸರು ನೋಂದಾಯಿಸಿ ಜತೆಗೆ ಅವರು ಕೆಲಸದ ಸ್ಥಗಳಲ್ಲಿ ಎದುರಿಸುತ್ತಿರುವ ಸಮಸ್ಯೆ-ಸವಾಲು ಅರಿತು ಪರಿಹಾರ ಕಲ್ಪಿಸಲು “ಆಶಾದೀಪ’ ಹೆಲ್ಫ್ಲೈನ್‌ ಪ್ರಾರಂಭಿಸಲಾಗುತ್ತಿದೆ. ಶುಲ್ಕ ರಹಿತ ಕರೆ ಮಾಡಬಹುದು, ವಾಟ್ಸ್‌ಅಪ್‌ ಮೂಲಕವೂ ತಮ್ಮ ದೂರು ದಾಖಲಿಸಬಹುದು. ಇದು ಕಾರ್ಮಿಕರ ಪಾಲಿಗೆ ವರದಾನವಾಗಲಿದೆ.
-ಎಸ್‌.ಸುರೇಶ್‌ಕುಮಾರ್‌, ಕಾರ್ಮಿಕ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

* ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.