ಕನ್ನಡದ ಕೆಲಸಕ್ಕೆ ಅಧಿಕಾರಿಗಳದ್ದೇ ಕೊರತೆ!


Team Udayavani, Oct 29, 2019, 3:08 AM IST

kannada-kelasake

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು, ಸಿಬ್ಬಂದಿಗಳಿಲ್ಲದೆ ಕನ್ನಡ ಭವನ ಬಣಗುಡುತ್ತಿದೆ. ಕೆಲವು ಹಿರಿಯ ರಿಜಿಸ್ಟ್ರಾರ್‌ಗಳು ಈಗಾಗಲೇ ಸೇವೆಯಿಂದ ನಿವೃತ್ತರಾಗಿದ್ದು, ಆ ಹಿನ್ನೆಲೆಯಲ್ಲಿಯೇ ಈಗಿರುವ ಬೆರಳೆಣಿಕೆಯಷ್ಟು ರಿಜಿಸ್ಟ್ರಾರ್‌ಗಳಿಗೆ ಎರಡರಿಂದ ಮೂರು ಅಕಾಡೆಮಿ ಇಲ್ಲವೆ ಪ್ರಾಧಿಕಾರದ ಜವಾಬ್ದಾರಿ ವಹಿಸಲಾಗಿದೆ.

ಜತೆಗೆ ರಿಜಿಸ್ಟ್ರಾರ್‌ ಹುದ್ದೆಯಲ್ಲಿದ್ದ ಕೆಲವರು ಬೇರೆ -ಬೇರೆ ಜಿಲ್ಲೆಗಳಿಗೆ ವರ್ಗಾವಣೆಯಾಗಿದ್ದು ಆ ಹಿನ್ನೆಲೆಯಲ್ಲಿ ದೂರದ ಊರಿನಿಂದ ಗೋಳು ಹೊತ್ತು ಕನ್ನಡ ಭವನಕ್ಕೆ ಬರುವ ಕಲಾವಿದರು ಮತ್ತು ಜನ ಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಕನ್ನಡ ಕೆಲಸಕ್ಕೆ ಅಧಿಕಾರಿಗಳ ಕೊರತೆ ಎದುರಾಗಿದೆ.

“ಉದಯವಾಣಿ’ಗೆ ದೊರೆತಿರುವ ಮೂಲ ದಾಖಲೆಗಳ ಅಂಕಿ-ಅಂಶಗಳ ಪ್ರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ “ಎ’ ವೃಂದದಿಂದ “ಡಿ’ ವೃಂದದ ವರೆಗೆ ಸುಮಾರು 278 ಹುದ್ದೆಗಳು ಮಂಜೂರಾಗಿದೆ. ಆದರೆ ಇದರಲ್ಲಿ ಕೇವಲ 118 ಹುದ್ದೆಗಳನ್ನು ಮಾತ್ರ ತುಂಬಿಕೊಳ್ಳಲಾಗಿದೆ. ಇನ್ನೂ 160 ವಿವಿಧ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ. ಸಹಾಯಕರ ನಿರ್ದೇಶಕರು/ಅಕಾಡೆಮಿ ರಿಜಿಸ್ಟ್ರಾರ್‌ ಗ್ರೇಡ್‌ -2ನಲ್ಲಿ ಸುಮಾರು 44 ಹುದ್ದೆಗಳು ಈಗಾಗಲೇ ಮಂಜೂರಾಗಿದ್ದು,

ಇದರಲ್ಲಿ ಕೇವಲ 26 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ. ಇನ್ನೂ ಸುಮಾರು 8 ಹುದ್ದೆಗಳು ಖಾಲಿಯಿವೆ. ಜತೆಗೆ ಸುಮಾರು 19 ಅಧೀಕ್ಷಕರ ಹುದ್ದೆಗಳಿದ್ದು ಇದರಲ್ಲಿ 9 ಹುದ್ದೆಗಳನ್ನು ಮಾತ್ರ ತುಂಬಲಾಗಿದೆ. ಉಳಿದ ಹತ್ತು ಹುದ್ದೆಗಳು ಹಾಗೆಯೇ ಖಾಲಿ ಉಳಿದಿವೆ. ಒಟ್ಟು 21 ಪ್ರಥಮ ದರ್ಜೆ/ಉಗ್ರಾಣ ಪಾಲಕ/ಲೆಕ್ಕಿಗ ಹುದ್ದೆಗಳಿವೆ. ಇದರಲ್ಲಿ ಕೇವಲ 6 ಹುದ್ದೆಗಳನ್ನು ತುಂಬಲಾಗಿದ್ದು ಸುಮಾರು 15 ಹುದ್ದೆಗಳು ಬಾಕಿಯಿವೆ.

ಬೆರಳಚ್ಚುಗಾರರ ಕೊರತೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆರಳಚ್ಚುಗಾರರ ಸಮಸ್ಯೆ ಎದುರಿಸುತ್ತಿದೆ. ಸುಮಾರು 34 ಬೆರಳಚ್ಚುಗಾರರು ಇಲಾಖೆಗೆ ಅವಶ್ಯಕತೆಯಿದ್ದು ಇದರಲ್ಲಿ ಕೇವಲ 12 ಮಂದಿ ಮಾತ್ರ ಕೆಲಸ ನಿರ್ವಹಿಸುತ್ತಿದ್ದಾರೆ. ಉಳಿದ 22 ಬೆರಳಚ್ಚುಗಾರರ ಹುದ್ದೆಗಳನ್ನು ಸರ್ಕಾರ ತುಂಬಬೇಕಾಗಿದೆ. ಜತೆಗೆ ಕನ್ನಡ ಸಂಸ್ಕೃತಿ ಇಲಾಖೆಗೆ ಸುಮಾರು 22 ದ್ವಿತೀಯ ದರ್ಜೆ ಹುದ್ದೆಗಳು ಮಂಜೂರಾಗಿವೆ. ಆದರೆ ಇದರಲ್ಲಿ 14 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದೆ. ಹಾಗೆಯೇ “ಡಿ’ ವೃಂದಕ್ಕೆ ಸುಮಾರು 86 ಹುದ್ದೆಗಳು ಮಂಜೂರಾಗಿವೆ. ಆದರೆ ಇದರಲ್ಲಿ 24 ಹುದ್ದೆಗಳನ್ನು ಮಾತ್ರ ತುಂಬಿಕೊಳ್ಳಲಾಗಿದ್ದು ಇನ್ನೂ ಸುಮಾರು 62 ಹುದ್ದೆಗಳು ತುಂಬಬೇಕಾಗಿದೆ.

ಕಲಾಗ್ರಾಮದಲ್ಲೂ ಅಧಿಕಾರಿಗಳಿಲ್ಲ: ರಂಗಚಟುವಟಿಕೆಗಾಗಿಯೇ ಸರ್ಕಾರ ಮಲತ್ತಹಳ್ಳಿಯಲ್ಲಿ ಕಲಾಗ್ರಾಮ ನಿರ್ಮಾಣ ಮಾಡಿದೆ. ಇಲ್ಲಿ ರಂಗ ಮಂದಿರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಕಚೇರಿ ಮತ್ತು ಲಲಿತಾ ಕಲಾ ಅಕಾಡೆಮಿಗೆ ಸೇರಿದ ಕಲಾ ಕೇಂದ್ರವಿದೆ. ಆದರೆ ಇಲ್ಲಿ ಕೂಡ ಕಲಾಗ್ರಾಮದ ನಿರ್ವಹಣೆ ನೋಡಿಕೊಳ್ಳಲು ಇಲಾಖೆಯ ಅಧಿಕಾರಿಗಳಿಲ್ಲ. ಈ ಹಿಂದೆ ಕಲಾಗ್ರಾಮದ ರಂಗಮಂದಿರದಲ್ಲಿ ವಿದ್ಯುತ್‌ ಅವಘಡ ಸಂಭವಿಸಿದಾಗ ಅಪಾರ ಪ್ರಮಾಣದ ನಷ್ಟ ಉಂಟಾಗಿತ್ತು.

ಆ ವೇಳೆ ಧ್ವನಿ -ಬೆಳಕಿನ ವ್ಯವಸ್ಥೆಯ ಕೊಠಡಿ ಹೊತ್ತಿ ಉರಿದಿತ್ತು. ಈ ರಂಗಮಂದಿರ ದುರಸ್ಥಿ ಕಾರ್ಯ ಇಲ್ಲಿವರೆಗೂ ಸಮರ್ಪಕವಾಗಿ ನಡೆದಿಲ್ಲ. ಈ ಸಮಸ್ಯೆಯನ್ನು ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿರಿಯ ಅಧಿಕಾರಿಗಳ ಮುಂದೆ ತಂದಾಗ ಇಲಾಖೆಯಲ್ಲಿ ಜನರೇ ಇಲ್ಲ ಎಂಬ ಉತ್ತರ ನೀಡಿದ್ದರು. ಖಾಲಿಯಿರುವ ಹುದ್ದೆಗಳನ್ನು ತುಂಬಿಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿ ಸುಮ್ಮನಾಗುತ್ತಿದ್ದರು.

ಸಹಾಯ ಕೇಂದ್ರ ಸ್ಥಗಿತ: ಈ ಹಿಂದೆ ವಿಶುಕುಮಾರ್‌ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿದ್ದ ವೇಳೆ ಕನ್ನಡ ಭವನಕ್ಕೆ ಬರುವ ಕಲಾವಿದರಿಗೆ ಮತ್ತು ಶ್ರೀಸಾಮಾನ್ಯರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕಾಗಿ “ಸಹಾಯ ಕೇಂದ್ರ’ವನ್ನು ತೆರೆಯಲಾಗಿತ್ತು. ಈ ಕೇಂದ್ರವನ್ನು ಅಂದಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಜಯಮಾಲಾ ಅವರು ಉದ್ಘಾಟಿಸಿದ್ದರು. ಆದರೆ ಆ ಸಹಾಯಕೇಂದ್ರವನ್ನು ಕೂಡ ಈಗ ಸ್ಥಗಿತಗೊಳಿಸಲಾಗಿದೆ. ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 13 ಅಕಾಡೆಮಿ ಮತ್ತು 3 ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿದೆ. ಆದರೆ ಕನ್ನಡ ಕೆಲಸ ಮಾಡಲು ಅಧಿಕಾರಿಗಳೇ ಇಲ್ಲದಂತಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಶೇ.61ರಷ್ಟು ಹುದ್ದೆಗಳು ಖಾಲಿಯಿವೆ. ಇವುಗಳ ಭರ್ತಿ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಹಾಗೂ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತೇನೆ.
-ಸಿ.ಟಿ.ರವಿ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.