ತರಗತಿ ಆರಂಭವಾದರೂ ಪಠ್ಯಪುಸ್ತಕ ಕೊರತೆ

ಪರಿಷ್ಕರಣೆ ಗೊಂದಲ-ಮುದ್ರಣ ಕಾಗದ ಕೊರತೆ ಹಿನ್ನೆಲೆ ; 8-9ನೇ ತರಗತಿಯ ಯಾವ ಪುಸ್ತಕಗಳೂ ಬಂದೇ ಇಲ್ಲ

Team Udayavani, Jun 6, 2022, 9:42 AM IST

1

ಹುಬ್ಬಳ್ಳಿ: ಶಾಲೆಗಳು ಆರಂಭಗೊಂಡು ದಿನಗಳು ಕಳೆಯುತ್ತಿದ್ದರೂ ಪುಸ್ತಕದ ಪರಿಷ್ಕರಣೆ ಗೊಂದಲ ತಣ್ಣಗಾಗುತ್ತಿಲ್ಲ. ತರಗತಿಗಳು ಆರಂಭಗೊಂಡ ಮಕ್ಕಳು ಪಾಠ ಕೇಳಬೇಕು, ಆದರೆ ಇದುವರೆಗೂ ಹಲವು ಪುಸ್ತಕಗಳ ಕೊರತೆ ವಿದ್ಯಾರ್ಥಿಗಳನ್ನು, ಶಿಕ್ಷಕರನ್ನು ಗೊಂದಲಕ್ಕೀಡು ಮಾಡಿದೆ.

ಪ್ರತಿ ವರ್ಷ ಶಾಲೆ ಆರಂಭಕ್ಕೂ ಮುನ್ನ ಅಥವಾ ಮೊದಲ ಒಂದು ವಾರದದಲ್ಲಿ ಎಲ್ಲ ಶಾಲೆಗಳಿಗೆ ಪುಸ್ತಕ ವಿತರಣೆ ಪೂರ್ಣಗೊಳಿಸಲಾಗುತ್ತಿತ್ತು. ಆದರೆ ಈ ವರ್ಷ ಹಲವು ಗೊಂದಲಗಳಿಂದ ಇದುವರೆಗೆ ಮಕ್ಕಳ ಕೈಗೆ ಎಲ್ಲ ಪುಸ್ತಕಗಳು ಸೇರಿಲ್ಲ. 1ರಿಂದ 10ನೇ ತರಗತಿ ಕನ್ನಡ ಮಾಧ್ಯಮ ಪುಸ್ತಕದ ಪರಿಷ್ಕರಣೆ ಗೊಂದಲ ಒಂದೆಡೆಯಾದರೆ, ಮತ್ತೂಂದೆಡೆ ಪುಸ್ತಕ ಮುದ್ರಣದ ಕಾಗದದ ಕೊರತೆ ಸಹ ಕಾರಣವಾಗಿದೆ.

ಶಾಲೆಗಳಿಗೆ 1ರಿಂದ 10ನೇ ತರಗತಿಯ ಕನ್ನಡ ಹಾಗೂ 6ರಿಂದ 10ನೇ ತರಗತಿ ಸಮಾಜ ವಿಜ್ಞಾನ, 7ರಿಂದ 9ನೇ ತರಗತಿ ತೃತೀಯ ಭಾಷೆ ಕನ್ನಡ ಪುಸ್ತಕ ಪರಿಷ್ಕರಣೆಯಾಗಿದೆ. ಆದರೆ 3ನೇ ತರಗತಿ ಪಠ್ಯದಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ. 10ನೇ ತರಗತಿ ಕನ್ನಡ ಹಾಗೂ ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆಯಾಗಿದೆ. ಇನ್ನು 8-9ನೇ ತರಗತಿಯ ಯಾವ ಪುಸ್ತಕಗಳೂ ಬಂದಿಲ್ಲ.

ಶಹರದ ಬೇಡಿಕೆ: ಹುಬ್ಬಳ್ಳಿ ನಗರ ವ್ಯಾಪ್ತಿಯ ಶಾಲೆಗಳಿಗೆ ಇಲಾಖೆಯಿಂದ ಎಲ್ಲ ಶೀರ್ಷಿಕೆಗಳ ಪುಸ್ತಕಗಳು ಸೇರಿ ಉಚಿತವಾಗಿ ನೀಡಲು 3,37,654 ಪುಸ್ತಕಗಳು ಹಾಗೂ ಮಾರಾಟಕ್ಕೆ 2,24,975 ಪುಸ್ತಕಗಳು ಸೇರಿ ಒಟ್ಟು 5, 62,629 ಪುಸ್ತಕಗಳಿಗೆ ಬೇಡಿಕೆ ಸಲ್ಲಿಸಲಾಗಿತ್ತು. ಸದ್ಯ ಇಲಾಖೆಯಿಂದ ಉಚಿತವಾಗಿ ನೀಡಲು 1,96,528 ಮತ್ತು ಮಾರಾಟಕ್ಕೆ 1,10,552 ಪುಸ್ತಕಗಳು ಒಟ್ಟು 3,07,080 ಪುಸ್ತಕಗಳನ್ನು ಪೂರೈಕೆ ಮಾಡಲಾಗಿದೆ. ಈಗಾಗಲೇ ಶಹರ ವ್ಯಾಪ್ತಿಯ ಶಾಲೆಗಳಿಗೆ ಉಚಿತವಾಗಿ 1,40,129 ಮತ್ತು ಮಾರಾಟಕ್ಕೆ 1,08,089 ಪುಸ್ತಕಗಳನ್ನು ವಿತರಣೆ ಮಾಡಲಾಗಿದೆ.

ಶಹರ ವ್ಯಾಪ್ತಿಯಲ್ಲಿ ಒಟ್ಟು 335 ಶಾಲೆಗಳು ಬರುತ್ತಿದ್ದು, ಅದರಲ್ಲಿ 155 ಖಾಸಗಿ ಅನುದಾನ ರಹಿತ ಶಾಲೆಗಳಿದ್ದು, 84 ಅನುದಾನಿತ ಶಾಲೆಗಳು, 96 ಸರಕಾರಿ ಶಾಲೆಗಳು ಬರುತ್ತಿವೆ. ಸರಕಾರಿ ಶಾಲೆಗಳಿಗೆ ಬಂದಿರುವ ಎಲ್ಲ ಶೀರ್ಷಿಕೆಗಳ ಪುಸ್ತಕಗಳನ್ನು ನೀಡಲಾಗಿದ್ದು, ಇನ್ನು ಬರದೆ ಇರುವ ಪುಸ್ತಕಗಳ ಆಗಮನಕ್ಕೆ ಕಾಯಲಾಗುತ್ತಿದೆ.

ಈಗಾಗಲೇ ಶಹರ ಘಟಕದಿಂದ ಶೇ.65 ಶಾಲೆಗಳಿಗೆ ಪುಸ್ತಕ ವಿತರಣೆ ಮಾಡಲಾಗಿದ್ದು, ಜೂ.6ರಿಂದ 10ರ ವರೆಗೆ ಇನ್ನುಳಿದಿರುವ ಶಾಲೆಗಳಿಗೆ ಪುಸ್ತಕ ವಿತರಣೆ ಮಾಡಲಾಗುತ್ತಿದೆ. ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಸುಮಾರು 80ಕ್ಕೂ ಹೆಚ್ಚು ಶಾಲೆಗಳು ಪುಸ್ತಕಗಳನ್ನು ಖರೀದಿಸಿಕೊಂಡು ಹೋಗಿದ್ದು, ಇನ್ನುಳಿದ ಶಾಲೆಗಳಿಗೆ ಪುಸ್ತಕಗಳ ಖರೀದಿ ಪ್ರಕ್ರಿಯೆ ನಡೆಯಬೇಕಿದೆ.

ಒಂದನೇ ಹಂತದಲ್ಲಿ ಶೇ.65 ಪುಸ್ತಕಗಳ ವಿತರಣೆ ಮಾಡಲಾಗಿದ್ದು, ಜೂ. 6ರಿಂದ ಎರಡನೇ ಹಂತದಲ್ಲಿ ಪುಸ್ತಕ ವಿತರಣೆ ಮಾಡಲಾಗುತ್ತಿದೆ. ಜೊತೆಗೆ ಪರಿಷ್ಕರಣೆ ಮಾಡಲಾಗಿರುವ ಪುಸ್ತಕಗಳು ಸದ್ಯ ಇನ್ನು ಲಭ್ಯವಾಗಿಲ್ಲ. ಅವುಗಳು ಬಂದ ನಂತರ ಶಾಲೆಗಳಿಗೆ ವಿತರಣೆ ಮಾಡಲಾಗುತ್ತದೆ. ಎಂ.ಎಸ್‌. ಶಿವಳ್ಳಿಮಠ, ಪ್ರಭಾರಿ ಬಿಇಒ , -ಡಿ.ಎಫ್‌. ಈರಗಾರ, ಶಹರ ಶಿಕ್ಷಣ ಸಂಯೋಜಕ                               

 ಬಸವರಾಜ ಹೂಗಾರ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.