ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಬಣ್ಣ, ಬಣ್ಣದ ಬಳೆಗಳ ಸದ್ದು… 

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಬಳೆ ಅನ್ನುವುದು, ಕೇವಲ ಒಂದು ಆಭರಣವಲ್ಲ.

Team Udayavani, Dec 3, 2021, 5:20 PM IST

20bangals

ಉತ್ಸವ ಅಂದರೆ ಸಂಭ್ರಮ ನಿಜ. ಆದ್ರೆ ಲಕ್ಷದೀಪೋತ್ಸವ ಮಾತ್ರ ಎಲ್ಲಾ ಉತ್ಸವಗಳಿಗಿಂತ ಕೊಂಚ ಸ್ಪೆಷಲ್ ಆಗಿದೆ. ಎಲ್ಲೆಡೆ ದೀಪಗಳ ಸಾಲು, ಅವುಗಳ ನಡುವೆ ಶ್ರೀ ಮಂಜುನಾಥ ಸ್ವಾಮಿಯ ಉತ್ಸವ ಮೂರ್ತಿಯನ್ನು ಕಣ್ಣುತುಂಬಿಕೊಳ್ಳುತ್ತಿರುವ ಭಕ್ತಾದಿಗಳ ಸಾಗರ. ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದ ಮೂರನೇ ದಿನದ ಬೆಳ್ಳಿರಥ ಉತ್ಸವ ನೋಡುವುದೇ ಚಂದ. ಸ್ವರ್ಣ ಪಲ್ಲಕ್ಕಿಯಲ್ಲಿ ದೇವರನ್ನು ಕೂರಿಸಿ ಮೆರವಣಿಗೆ ಮಾಡಲಾಯಿತು. ವಾದ್ಯವೃಂದ, ದೀವಟಿಕೆ, ನಿಶಾನೆ, ಆನೆ ಹಾಗೂ ಬಸವನ ನೇತೃತ್ವದಲ್ಲಿ ಸಾಗಿಬಂದ ಉತ್ಸವ ವಿಜೃಂಭಣೆಯಿಂದ ಕೂಡಿತ್ತು.

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಬಳೆ ಅನ್ನುವುದು, ಕೇವಲ ಒಂದು ಆಭರಣವಲ್ಲ. ಅದು ಸಾಂಸ್ಕೃತಿಕ, ಧಾರ್ಮಿಕ ಪರಂಪರೆಯೊಂದಿಗೆ ಬೆರೆತು ಹೋಗಿರುವ ಒಂದು ಅಂಶ. ಗಾಜಿನ ಬಳೆ ಭಾರತೀಯ ನಾರಿಯರ ಸಾಂಪ್ರದಾಯಿಕ ಆಭರಣ. ನಮ್ಮ ಸಂಸ್ಕೃತಿಯಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಇಂದಿನ ಫ್ಯಾಷನ್ ಯುಗದಲ್ಲೂ ಈ ಬಳೆ ಬೇಡಿಕೆ ಕಳೆದುಕೊಳ್ಳದೆ ಮಹಿಳೆಯರ ಮನ ಗೆದ್ದಿದೆ.

ಬಹಳ ಹಿಂದಿನಿಂದಲೂ, ಎಲ್ಲ ಧರ್ಮದ ಮಹಿಳೆಯರೂ ಬಳೆ ಧರಿಸುತ್ತಾರೆ. ದಕ್ಷಿಣ ಭಾರತದಲ್ಲಿ ಹಸಿರು ಗಾಜಿನ ಹಾಗೂ ಬಂಗಾರದ ಬಳೆಗಳನ್ನು ಮಂಗಳಕರವೆಂದರೆ, ಉತ್ತರ ಭಾರತದಲ್ಲಿ ಕೆಂಪು ಮತ್ತು ಹಸಿರು ಬಳೆಗಳನ್ನು ಶುಭವೆಂದು ಧರಿಸುತ್ತಾರೆ. ಅದ್ರಲ್ಲೂ ಜಾತ್ರೆ ಅಂದರೆ ಹೆಣ್ಮಕ್ಕಳಿಗೆ ಒಂಥರಾ ಖುಷಿ. ಯಾಕಂದರೆ ಕೂದಲಿಗೆ ಹಾಕೋ ಕ್ಲಿಪ್​ಯಿಂದ ಹಿಡಿದು ಬಳೆಗಳವರೆಗೂ ಕಲೆಕ್ಷನ್ಸ್ ಸಿಗುತ್ತದೆ. ಈ ಜಾತ್ರೆಯೂ ಅಷ್ಟೇ. ಜಾತ್ರೆಗೆ ಬರುವ ಮಹಿಳೆಯರು ಬರಿಗೈನಲ್ಲಿ ಬಂದರೂ ಮರಳುವಾಗ ಕೈತುಂಬಾ ಬಳೆ ತೊಟ್ಟಿರುತ್ತಾರೆ.

ಕಂಡೊಡನೆ ಕಣ್ಣರಳಿಸುವಷ್ಟು ಸುಂದರ.. ಘಲ್ ಘಲ್ ನಾದದ ಜೊತೆ ಕಲರವದ ಝೇಂಕಾರ. ಕಾಮನಬಿಲ್ಲಿನ ರಂಗನ್ನೇ ಮೀರಿಸುವಷ್ಟು ಚಿತ್ತಾರ. ನೋಡಿದಷ್ಟೂ ಮನಸೆಳೆಯುವಷ್ಟು ಮನೋಹರ. ಅಬ್ಬಾ.. ಬಣ್ಣ ಬಣ್ಣದ ಬಳೆ ಧರಿಸಿ ಹೆಣ್ಮಕ್ಕಳದ್ದು ವಯ್ಯಾರವೋ ವಯ್ಯಾರ.

ಆಯ್ಕೆಯಲ್ಲಿ ರಾಜಿಯಾಗಬೇಕಿಲ್ಲ. ಕಲರ್​ ಸೆಲೆಕ್ಷನ್​ನಲ್ಲಿ ತಲೆಬಿಸಿ ಮಾಡಬೇಕಿಲ್ಲ. ಯಾಕೆಂದರೆ ಇಲ್ಲಿರುವ ಎಲ್ಲಾ ಡಿಸೈನ್ ನಿಮ್ಮ ಮನಸೆಳೆಯುವುದರಲ್ಲಿ ಅನುಮಾನ ಇಲ್ಲ. ಧರ್ಮಸ್ಥಳ ಲಕ್ಷದೀಪೋತ್ಸವದಲ್ಲಿ ಕಲರ್​ಫುಲ್ ಬಳೆಗಳು ಹೆಣ್ಮಕ್ಕಳನ್ನು ಸೆಳೆಯುತ್ತಿವೆ. ನೂರಾರು ಬಳೆಗಳ ಅಂಗಡಿಗಳು ತೆರೆದಿದ್ದು, ಸಾಲು ಸಾಲಾಗಿ ಜೋಡಿಸಿಟ್ಟ ಬಣ್ಣ, ಬಣ್ಣದ, ಥರಹೇವಾರಿ ಡಿಸೈನ್ ಬಳೆಗಳು ಕಮಾಲ್ ಮಾಡುತ್ತಿವೆ. ಹೀಗಾಗಿ ಕೈಗೆ ಚೆಂದದ ಬಳೆ ತೊಡಲು ಹೆಣ್ಮಕ್ಕಳು ಮುಗಿ ಬೀಳುತ್ತಿದ್ದಾರೆ.

ಇನ್ನು ಲಕ್ಷದೀಪೋತ್ಸವದ ಬಳೆಗಳೆಂದರೆ ಭಾರಿ ಪ್ರಸಿದ್ದ. ಯಾಕಂದರೆ ಯಾವುದೇ ಹೊಸ ಡಿಸೈನ್ ಬಳೆ ಬಂದರೂ ಲಕ್ಷದೀಪೋತ್ಸವಕ್ಕೆ ಲಗ್ಗೆ ಇಡುತ್ತದೆ.  ನಂತರ ಪ್ಲೇನ್ ಬಳೆ, ಚುಕ್ಕೆ ಬಳೆ, ಡಿಜೈನ್ ಬಳೆ, ಮುತ್ತಿನ ಬಳೆ, ಹರಳಿನ ಬಳೆ, ಮೆಟಲ್ ಬಳೆ, ಗಾಜಿನ ಬಳೆ ಸೇರಿದಂತೆ ವಿವಿಧ ಬಗೆಯ ಬಳೆಗಳನ್ನು ಕೊಂಡುಕೊಳ್ತಾರೆ. ವ್ಯಾಪಾರಸ್ಥರಿಗೆ ಕೈ ನೀಡಿ ಕೈತುಂಬಾ ಬಳೆ ತೊಡಿಸಿಕೊಳ್ಳುತ್ತಾರೆ. ಮಹಿಳೆಯರ ಸ್ಪಂದನೆಗೆ ವ್ಯಾಪಾರಸ್ಥರು ಖುಷಿಯಾಗಿದ್ದಾರೆ.

” ಕಳೆದ ವರ್ಷಕ್ಕಿಂತ ಈ ವರ್ಷ ಅಷ್ಟೇನೂ ಲಾಭದಾಯಕವಾಗಿಲ್ಲ, ಮಂಜುನಾಥ ದೇವರನ್ನು ನೆನೆಸಿಕೊಂಡು ನಾವು ವ್ಯಾಪಾರ ಮಾಡುತ್ತಿದ್ದೇವೆ. ಇಲ್ಲಿಯವರೆಗೂ ದೇವರು ನಮ್ಮ ಕೈ ಬಿಟ್ಟಿಲ್ಲ ಆ ಕಾರಣಕ್ಕೆ ಇನ್ನೂ ನಾವು ವ್ಯಾಪಾರ ಮಾಡುತ್ತಿದ್ದೇವೆ.” – ದಿನೇಶ್, ಶಿವಮೊಗ್ಗ, ಬಳೆ ವ್ಯಾಪಾರಸ್ಥರು 

-ಆಕರ್ಷ ಆರಿಗ,  ಎಸ್ ಡಿಎಮ್ ಉಜಿರೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.