ಮುಂಡಗೋಡ : 15 ವರ್ಷಗಳಿಂದ ನಿಂತಿದ್ದ ಹೋಳಿ ಆಚರಣೆಗೆ ಮತ್ತೆ ಚಾಲನೆ


Team Udayavani, Mar 19, 2022, 11:54 AM IST

ಮುಂಡಗೋಡ : ಲಂಬಾಣಿ ಸಮುದಾಯದಲ್ಲಿ 15 ವರ್ಷಗಳಿಂದ ನಿಂತಿದ್ದ ಹೋಳಿ ಆಚರಣೆಗೆ ಮತ್ತೆ ಚಾಲನೆ

ಮುಂಡಗೋಡ : ಈ ಊರಲ್ಲಿ ವಿಶಿಷ್ಟ ಆಚರಣೆ ನಡೆಯುತ್ತದೆ. ಹಲವು ವರ್ಷಗಳಿಂದ ನಿಂತುಹೋಗಿದ್ದ ಸಾಂಪ್ರದಾಯಿಕ ಆಚರಣೆಯೊಂದು ಮರಳಿ ಆಚರಣೆಗೆ ಬಂದಿದೆ. ಗ್ರಾಮಸ್ಥರ ಒಗ್ಗಟ್ಟಿನೊಂದಿಗೆ ತಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಆಚರಣೆಗೆ, ತಾಲೂಕಿನ ಅರಿಶಿಣಗೇರಿ ಗ್ರಾಮದ ಲಂಬಾಣಿ ಸಮುದಾಯದವರು ಮುಂದಾಗಿದ್ದಾರೆ. ಅವರ ಆಚರಣೆ ನಿಜಕ್ಕೂ ವಿಶಿಷ್ಟವೆನಿಸುತ್ತದೆ.

ತಾಲೂಕಿನ ಅರಿಶಿಣಗೇರಿ ಗ್ರಾಮದಲ್ಲಿ ಹೋಳಿ ಹುಣ್ಣಿಮೆಯ ದಿನವಾದ ಶುಕ್ರವಾರ ಬೆಳಿಗ್ಗೆ, ಲಂಬಾಣಿ ಸಮುದಾಯದವರ ಸಾಂಪ್ರದಾಯಿಕ ಕಲೆ ಅನಾವರಣಗೊಂಡಿತ್ತು. ಗ್ರಾಮದ ಪ್ರವೇಶದ್ವಾರದ ಬಯಲು ಜಾಗದಲ್ಲಿ ವಿಶೇಷ ಪೂಜೆಯೊಂದಿಗೆ ಕಟ್ಟಿಗೆಯ ಗುಡಿಸಲು ಆಕಾರಕ್ಕೆ ಅಗ್ನಿ ಸ್ಪರ್ಶ ಮಾಡಿ, ನಿಂತುಹೋಗಿದ್ದ ಹಬ್ಬದ ಆರಂಭಕ್ಕೆ ಚಾಲನೆ ನೀಡಿದರು. ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲ ವಯೋಮಾನದವರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕಳೆದ 15-20 ವರ್ಷಗಳ ಹಿಂದೆ ಗ್ರಾಮದಲ್ಲಿ ಆಚರಿಸಿಕೊಂಡು ಬರುತ್ತಿದ್ದ ಆಚರ ಣೆಯೊಂದು ನಿಂತಿತ್ತು. ಆದರೆ, ಸಮಾಜದ ಸಾಂಪ್ರದಾಯಿಕ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗಲು, ಯುವಕರು ಸೇರಿದಂತೆ ಹಿರಿಯರು ನಿರ್ಧರಿಸಿದ್ದರು. ಅದರಂತೆ ಈ ವರ್ಷದಿಂದ ಮತ್ತೆ ಹೋಳಿ ಆಚರಣೆಯ ಸಂಪ್ರದಾಯವನ್ನು ಆರಂಭಿಸಲು ನಿರ್ಧರಿಸಲಾಯಿತು. ಹೋಳಿ ಹುಣ್ಣಿಮೆ ಆರಂಭಕ್ಕೂ ಮೊದಲು ಹದಿನೈದು ದಿನಗಳ ಮೊದಲೇ, ಗ್ರಾಮದಲ್ಲಿ ನಿತ್ಯವೂ ನೃತ್ಯದೊಂದಿಗೆ ನಗಾರಿ ಪೂಜೆ ನಡೆಯುತ್ತದೆ. ಸುತ್ತಲಿನ ಗ್ರಾಮದ ಹಿರಿಯಲು ಬಂದಿರುತ್ತಾರೆ. ಅವರಿಗೆ ಗೌರವದೊಂದಿಗೆ ಆಮಂತ್ರಣ ನೀಡಲಾಗುತ್ತದೆ.

ಇದನ್ನೂ ಓದಿ : ವ್ಯಾಟ್ಸಪ್ ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’; ಲಿಂಕ್ ಒತ್ತಿದರೆ ನಿಮ್ಮ ಬ್ಯಾಂಕ್ ಹಣಕ್ಕೆ ಕನ್ನ!

ರವಿ ಲಮಾಣಿ ಅರಶಿಣಗೇರಿ ಗ್ರಾಮದ ಮುಖಂಡರು: ಮಕ್ಕಳು, ಮಹಿಳೆಯರು ಎನ್ನುವ ಬೇಧವಿಲ್ಲ. ಎಲ್ಲರೂ ಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ. ಹೋಳಿ ಹುಣ್ಣಿಮೆಯ ದಿನದಂದು ಬೆಳಗಿನ ಜಾವವೇ, ಗ್ರಾಮದ ಮುಂಭಾಗದಲ್ಲಿಯೇ ಕಟ್ಟಿಗೆಯ ರಾಶಿ ಹಾಕಿ, ಹಾಲು, ತುಪ್ಪ ಹಾಕಿ ಅದಕ್ಕೆ ಅಗ್ನಿ ಸ್ಪರ್ಶ ಮಾಡಲಾಗುತ್ತದೆ. ಅಗ್ನಿ ಸ್ಪರ್ಶಕ್ಕೂ ಮುಂಚೆ, ಧಾರ್ಮಿಕ ವಿಧಿ ವಿಧಾನದಂತೆ ಪೂಜಾ ಕಾರ್ಯ ಕೈಗೊಳ್ಳಲಾಗುತ್ತದೆ. ಬೆಂಕಿ ಆರುವರೆಗೂ ಅಲ್ಲಿಯೇ ಇದ್ದು, ನಂತರ ಅದರ ಬೂದಿಯನ್ನು ಹಣೆಗೆ ಹಚ್ಚಿಕೊಂಡು ಒಳ್ಳಯದನ್ನು ಮಾಡು ದೇವರೆ ಎಂದು ಬೇಡಿಕೊಳ್ಳುತ್ತೇವೆ. ಸಂಜೆಯಾದ ನಂತರ ಮತ್ತೆ ಅದೇ ಜಾಗಕ್ಕೆ ತೆರಳಿ, ಬೂದಿಯನ್ನು ದುಂಡಗೆ ಮಾಡಿ, ಪೂಜೆ ಮಾಡಲಾಗುತ್ತದೆ. ಇದು ಲಂಬಾಣಿ ಸಮುದಾಯದವರ ಹೋಳಿ ಹಬ್ಬದ ಆಚರಣೆಯಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.