ಮೈಸೂರಿನಲ್ಲಿ ಭೂ ಹರಗರಣ : ರೋಹಿಣಿಯನ್ನು ವಿಶೇಷ ಅಧಿಕಾರಿಯಾಗಿ ನೇಮಕ ಮಾಡಲು ವಿಶ್ವನಾಥ್ ಮನವಿ
Team Udayavani, Jun 10, 2021, 1:51 PM IST
ಮೈಸೂರು : ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೂ ಅಕ್ರಮದ ವಿಚಾರವನ್ನು ತುರ್ತಾಗಿ ಜಾರಿಗೊಳಿಸುವಂತೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗೌತಮ್ ಅವರಿಗೆ ಮನವಿ ಎಂ.ಎಲ್.ಸಿ ಹೆಚ್ ವಿಶ್ವನಾಥ್ ಮನವಿ ಮಾಡಿದ್ದಾರೆ.
ಈ ಹಿಂದೆ ರೋಹಿಣಿ ಅವರು ನಾಲ್ಕು ಆದೇಶಗಳನ್ನು ಮಾಡಿದ್ದಾರೆ. ಆ ಆದೇಶದ ಪ್ರತಿಗಳನ್ನು ಮನವಿ ಪತ್ರದ ಜೊತೆ ವಿಶ್ವನಾಥ್ ಡಿಸಿಯವರಿಗೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ನಾಲ್ಕು ಪ್ರಕರಣಗಳು ಮಾತ್ರವಲ್ಲ ಇಂತಹ ಹಲವು ಪ್ರಕರಣಗಳಿವೆ. ಸುಪ್ರೀಂಕೋರ್ಟ್ ಆದೇಶ ಇದೆ. ಇದರ ಬಗ್ಗೆ ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ವಿಶ್ವನಾಥ್ ಮನವಿ ಮಾಡಿದ್ದಾರೆ.
ನಾಳೆ ಬೆಂಗಳೂರಿನಲ್ಲಿ ಸಿಎಂ ಹಾಗು ಸಿಎಸ್ ಭೇಟಿ ಮಾಡುತ್ತೇನೆ. ಮೈಸೂರು ಸುತ್ತ ಮುತ್ತ ಭೂ ಹಗರಣದ ವಿಚಾರಣೆ ಮಾಡಲು
ರೋಹಿಣಿ ಸಿಂಧೂರಿಯನ್ನು ವಿಶೇಷಧಿಕಾರಿಯಾಗಿ ನೇಮಿಸಲು ಮನವಿ ಮಾಡಿದ್ದಾರೆ. ಚಾಮುಂಡಿಬೆಟ್ಟದ ಸುತ್ತ ಮುತ್ತ ಸಹಾ ಒತ್ತುವರಿಯಾಗಿದೆ. 6 ತಿಂಗಳ ಕಾಲ ರೋಹಿಣಿ ಸಿಂಧೂರಿ ಅವರನ್ನು ನೇಮಿಸಲು ಎಚ್ ವಿಶ್ವನಾಥ್ ಒತ್ತಾಯ ಮಾಡಿದ್ದಾರೆ. ಶನಿವಾರ ಅಥವಾ ಸೋಮವಾರ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಅವರು ತಿಳಿಸಿದರು,
ಹೆದರಿಕೆ ಯಾಕೆ ತನಿಖೆ ಮಾಡಲಿ, ತನಿಖೆಯಾಗಲು ಬಿಡಿ. ನನ್ನ ಸ್ನೇಹಿತರಿಗೂ ಮನವಿ ಮಾಡುತ್ತೇನೆ. ನಾನು ಮತ್ತೆ ಅವರನ್ನು ಜಿಲ್ಲಾಧಿಕಾರಿ ಮಾಡಿ ಅಂತಾ ಹೇಳುವುದಿಲ್ಲ. ನಾನು ಸಾ ರಾ ಮಹೇಶ್ ಅವರ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ಸಾ ರಾ ಕಲ್ಯಾಣಮಂಟಪದ ಬಗ್ಗೆ ದಾಖಲೆ ಕೊಡಲಿ ಎಂದು ಮೈಸೂರಿನಲ್ಲಿ ಎಂ ಎಲ್ ಸಿ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್