ಮಾಣಿಕನಗರದಲ್ಲಿ ಗಾನಸುಧೆ ಹರಿಸಿದ್ದ ಲತಾ : 1981ರಲ್ಲಿ ಸಂಸ್ಥಾನಕ್ಕೆ ಭೇಟಿ ನೀಡಿದ್ದರು


Team Udayavani, Feb 7, 2022, 7:39 PM IST

ಮಾಣಿಕನಗರದಲ್ಲಿ ಗಾನಸುಧೆ ಹರಿಸಿದ್ದ ಲತಾ : 1981ರಲ್ಲಿ ಸಂಸ್ಥಾನಕ್ಕೆ ಭೇಟಿ ನೀಡಿದ್ದರು

ಬೀದರ: ಗಾನ ಸರಸ್ವತಿ ಲತಾ ಮಂಗೇಶ್ವರ ಅವರು ಗಡಿ ನಾಡು ಬೀದರ ಜಿಲ್ಲೆಗೂ ಬಂದು ಹೋಗಿದ್ದರು. ಸಂಗೀತ ಕಲಾವಿದರ ಪಾಲಿಗೆ ಪವಿತ್ರ ಕ್ಷೇತ್ರ ಎನಿಸಿರುವ ಮಾಣಿಕನಗರದ ಮಾಣಿಕಪ್ರಭು ಸಂಸ್ಥಾನಕ್ಕೆ ಭೇಟಿ ನೀಡಿ, ತಮ್ಮ ಸಂಗೀತ ಸುಧೆ ಹರಿಸಿದ್ದರು.

ಕಲೆ-ಕಲಾವಿದರನ್ನು ಪೋಷಿಸುತ್ತ ಬಂದಿರುವ ಕಲ್ಯಾಣ ಕರ್ನಾಟಕದ ಇತಿಹಾಸ ಪ್ರಸಿದ್ಧ ಮಾಣಿಕಪ್ರಭು ಸಂಸ್ಥಾನ ಧರ್ಮ ಸಮನ್ವಯತೆಗೆ ಹೆಸರಾಗಿದ್ದು, ಕಲಾಕ್ಷೇತ್ರದ ಮಾತೃತಾಣ ಎನಿಸಿದೆ. ಸಂಸ್ಥಾನದಲ್ಲಿ ಸಂಗೀತ-ನೃತ್ಯ ಕಲೆ ಪ್ರದರ್ಶಿಸಿದರೆ ಕಲಾ ಬದುಕು ಸಾರ್ಥಕತೆ ಅನುಭವಿಸಿದಂತೆಯೇ ಎಂಬುದು ಕಲಾವಿದರ ನಂಬಿಕೆ. ಹಾಗಾಗಿ ದೊಡ್ಡ ದೊಡ್ಡ ದಿಗ್ಗಜರು ಮಾಣಿಕನಗರಕ್ಕೆ ಬಂದು ಕಲಾ ಸೇವೆ ನೀಡಿ ಹೋಗಿದ್ದಾರೆ. ಅದರಲ್ಲೂ ಗಾನ ಸ್ವರ ಶ್ರೀಮಂತಗೊಳಿಸಿದ ಲತಾ ಮಂಗೇಶ್ಕರ್‌ ಕೂಡ ಒಬ್ಬರೆಂಬುದು ವಿಶೇಷ.

1981ರಲ್ಲಿ ಭೇಟಿ: ಎರಡು ಶತಮಾನಗಳ ಇತಿಹಾಸವುಳ್ಳ ಮಾಣಿಕನಗರವು ದತ್ತ ಪೀಠವಾಗಿದ್ದು, ಗುರು ಪರಂಪರೆ ಅಸ್ತಿತ್ವದಲ್ಲಿದೆ. 1945ರಿಂದ ಪೀಠಾ ಧಿಪತಿಗಳಾಗಿದ್ದ ಶ್ರೀಸಿದ್ಧರಾಜ್‌ ಮಾಣಿಕ ಪ್ರಭುಗಳು ಸಂಸ್ಥಾನವನ್ನು ಆಧ್ಯಾತ್ಮಿಕ-ಸಾಮಾಜಿಕ ಚಟುವಟಿಕೆಗಳ ಕೇಂದ್ರವಾಗಿ ಪರಿವರ್ತಿಸಿದ್ದಾರೆ. ಭಜನೆ, ಅಭಂಗಗಳನ್ನು ರಚಿಸಿರುವ ಅವರು ಭಾರತೀಯ ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಪ್ರಭುಗಳ ಜಯಂತಿಯನ್ನು ಡಿಸೆಂಬರ್‌ನಲ್ಲಿ ಮಹೋತ್ಸವವಾಗಿ ಆಚರಿಸಲಾಗುತ್ತಿದ್ದು, ಪ್ರತಿ ವರ್ಷ ಸಂಗೀತ ದರ್ಬಾರ್‌ ನಡೆಸಿಕೊಂಡು ಬರಲಾಗುತ್ತಿದೆ.

ಈ ದರ್ಬಾರ್‌ದಲ್ಲಿ ಸಂಗೀತ ದಿಗ್ಗಜರಾದ ಭಾರತರತ್ನ ಭೀಮಸೇನ್‌ ಜೋಶಿ, ಉಸ್ತಾದ್‌ ಜಾಕೀರ್‌ ಹುಸೇನ್‌, ಪಂ|ಮಲ್ಲಿಕಾರ್ಜುನ್‌ ಮನ್ಸೂರ್‌, ಅನುರಾಧಾ ಪೌಡ್ವಲ್‌ ಅವರಿಂದ ಹಿಡಿದು ಸಂಗೀತಾ ಕಟ್ಟಿವರೆಗೂ ಖ್ಯಾತನಾಮ ಕಲಾವಿದರು ಪ್ರಭುಗಳ ಸನ್ನಿಧಿಯಲ್ಲಿ ಸಂಗೀತ ಸೇವೆಗೈದಿದ್ದಾರೆ. ಅದರಂತೆ 1981ರಲ್ಲಿ ಲತಾ ಮಂಗೇಶ್ಕರ್‌ ಅವರು ಸಂಸ್ಥಾನಕ್ಕೆ ಬಂದು ಪ್ರಭುಗಳ ದರ್ಶನ ಪಡೆದು ಶ್ರೀ ಸಿದ್ಧರಾಜ್‌ ಪ್ರಭುಗಳ ಸಮ್ಮುಖದಲ್ಲಿ ಗಾನ ಸುಧೆ ಹರಿಸಿದ್ದರು.

ಮಹಾರಾಷ್ಟ್ರದ ಶಹಾಜನಿ ಔರಾದನಲ್ಲಿ ದಿ|ಲತಾ ಅವರು ತಮ್ಮ ತಂದೆ ದಿನಾನಾಥ ಮಂಗೇಶ್ಕರ್‌ ಅವರ ಹೆಸರಿನಲ್ಲಿ ಸ್ಥಾಪಿಸಿರುವ ವೈದ್ಯ ಕಾಲೇಜು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಣಿಕ ನಗರಕ್ಕೆ ಭೇಟಿ ನೀಡಿದ್ದು ಸ್ಮರಣೀಯ.

ಭಜನೆ ಪದ ಹಾಡಿದ್ದ ಲತಾ: ಲತಾ ಅವರು ಸಿದ್ಧರಾಜ್‌ ಪ್ರಭುಗಳ ಆಶಯದಂತೆ “ಪಾಯೋಜಿ ಮೈನೆ ರಾಮ ರತನ ಧನ ಪಾಯೋ’, ಶಿವಶಂಕರ ಗಂಗಾಧರ ಗೀತೆ ಮತ್ತು ಮರಾಠಿ ನಾಟ್ಯಗೀತೆ ಸೇರಿ ಐದು ಭಜನೆ ಪದಗಳನ್ನು ಹಾಡಿ ತಮ್ಮ ಭಕ್ತಿ ಸಮರ್ಪಿಸಿದ್ದರು. ಸಂಸ್ಥಾನದಲ್ಲಿನ ಸಂಗೀತ ಪರಂಪರೆ ಮತ್ತು ಕಲೆಯನ್ನು ಪೋಷಿಸುವ ಚಟುವಟಿಕೆಗಳನ್ನು ಕೇಳಿ ಹರ್ಷ ವ್ಯಕ್ತಪಡಿಸಿದ್ದರು. ಅಂದು ಲತಾ ಅವರ ಸಹೋದರಿ ಮೀನಾ ಮತ್ತು ಸಹೋದರ ಹೃದಯನಾಥ ಮಂಗೇಶ್ಕರ್‌ ಸಹ ಜತೆಗಿದ್ದರು. ಅಷ್ಟೇ ಅಲ್ಲ ಇದಕ್ಕೂ ಮುನ್ನ 1965ರಲ್ಲಿ ಶ್ರೀ ಸಿದ್ಧರಾಜ್‌ ಪ್ರಭುಗಳನ್ನು ಲತಾ ಅವರು ತಮ್ಮ ಮುಂಬಯಿನ “ಪ್ರಭು ಕುಂಜ’ ನಿವಾಸಕ್ಕೆ ಆಹ್ವಾನಿಸಿದ್ದರು ಎನ್ನುತ್ತಾರೆ ಸಂಸ್ಥಾನದ ಕಾರ್ಯದರ್ಶಿಗಳಾದ ಶ್ರೀ ಆನಂದರಾಜ್‌ ಮಾಣಿಕ
ಪ್ರಭುಗಳು.

ಭಾರತದ ಗಾನ ಕೋಗಿಲೆ ಎಂದೇ ಪ್ರಸಿದ್ಧಿ ಪಡೆದಿದ್ದ ಲತಾ ಮಂಗೇಶ್ಕರ್‌ ಅವರ ನಿಧನ ಸಂಗೀತ ಜಗತ್ತಿಗೆ ದೊಡ್ಡ ಆಘಾತ. ಲತಾ ಅವರು ಹಾಡಿದರೆ ಸ್ವರಗಳು ದೇವತೆಯ ರೂಪ ಪಡೆಯುತ್ತಿದ್ದವು ಎಂದು ಶ್ರೀ ಸಿದ್ಧರಾಜ್‌ ಪ್ರಭುಗಳು ಹೊಗಳಿದ್ದರು.

ನಮ್ಮೆಲ್ಲರ ಪಾಲಿಗೆ ಗಾನ ಸರಸ್ವತಿಯಾಗಿ ಹೃದಯದಲ್ಲಿ ನೆಲೆಸಿದ್ದಾರೆ. ಎಲ್ಲಿವರೆಗೂ ಭೂಮಿಯ ಮೇಲೆ ಸಂಗೀತ, ಹಾಡುಗಾರಿಕೆ ಇರುತದೆಯೋ, ಅಲ್ಲಿಯವರೆಗೂ ಅವರ ಹೆಸರು
ಚಿರಸ್ಥಾಯಿಯಾಗಿರುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
– ಶ್ರೀ ಆನಂದರಾಜ್‌ ಮಾಣಿಕಪ್ರಭು, ಕಾರ್ಯದರ್ಶಿ, ಮಾಣಿಕಪ್ರಭು ಸಂಸ್ಥಾನ, ಮಾಣಿಕನಗರ.

– ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.